AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಇನ್ಮುಂದೆ ಸುದೀಪ್ ಬಿಗ್ ಬಾಸ್ ಹೋಸ್ಟ್ ಮಾಡಲ್ಲ ಎಂಬ ವಿಚಾರದಲ್ಲಿಲ್ಲ ಸತ್ಯ

ಸ್ಪರ್ಧಿಗಳು ಹಾದಿ ತಪ್ಪಿದಾಗ ಅವರನ್ನು ತಿದ್ದುವ ಕೆಲಸ ಮಾಡಿದ್ದಾರೆ ಕಿಚ್ಚ ಸುದೀಪ್. ಈ ವೇಳೆ ಅವರು ಬಿಗ್ ಬಾಸ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ನಾನು ಇಷ್ಟಪಟ್ಟು ನಡೆಸಿಕೊಡುತ್ತಿರುವ ಶೋ ಎಂದು ಸುದೀಪ್ ಅನೇಕ ಬಾರಿ ಹೇಳಿದ್ದಾರೆ.

Kichcha Sudeep: ಇನ್ಮುಂದೆ ಸುದೀಪ್ ಬಿಗ್ ಬಾಸ್ ಹೋಸ್ಟ್ ಮಾಡಲ್ಲ ಎಂಬ ವಿಚಾರದಲ್ಲಿಲ್ಲ ಸತ್ಯ
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Jan 30, 2024 | 7:35 AM

Share

ಕಿಚ್ಚ ಸುದೀಪ್ (Kichcha Sudeep) ಅವರು ಯಶಸ್ವಿಯಾಗಿ ‘ಬಿಗ್ ಬಾಸ್​’ನ 10 ಸೀಸನ್​ಗಳನ್ನು ನಡೆಸಿಕೊಟ್ಟಿದ್ದಾರೆ. ಬೇರೆ ಬೇರೆ ಭಾಷೆಗಳಲ್ಲಿ ನಿರೂಪಕರು ಬದಲಾಗಿದ್ದಾರೆ. ಆದರೆ, ಕನ್ನಡದಲ್ಲಿ ಮಾತ್ರ ಹಾಗಾಗಿಲ್ಲ. ಮೊದಲಿನಿಂದಲೂ ಸುದೀಪ್ ಅವರೇ ಕಾರ್ಯಕ್ರಮ ನಡೆಸಿಕೊಡುತ್ತಾ ಬರುತ್ತಿದ್ದಾರೆ. ಈಗ ಅವರ ಒಪ್ಪಂದ ಮುಗಿದಿದ್ದು ಮುಂದಿನ ವರ್ಷದಿಂದ ಅವರು ಶೋ ನಡೆಸಿಕೊಡಲ್ಲ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದರು. ಆದರೆ, ಈ ವಿಚಾರದಲ್ಲಿ ಯಾವುದೇ ಸತ್ಯ ಇಲ್ಲ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

ಸುದೀಪ್ ಅವರು ‘ಬಿಗ್ ಬಾಸ್’ನ ಸಖತ್ ಇಷ್ಟಪಟ್ಟು ನಡೆಸಿಕೊಡುತ್ತಾರೆ. ‘ಹಣಕ್ಕಾಗಿ ನಾನು ಈ ಶೋ ಮಾಡುತ್ತಿಲ್ಲ’ ಎಂದು ಅವರು ಈ ಮೊದಲೇ ಹೇಳಿದ್ದರು. ಸ್ಪರ್ಧಿಗಳು ಹಾದಿ ತಪ್ಪಿದಾಗ ಅವರನ್ನು ತಿದ್ದುವ ಕೆಲಸ ಮಾಡಿದ್ದಾರೆ ಸುದೀಪ್. ಈ ವೇಳೆ ಅವರು ಬಿಗ್ ಬಾಸ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದರು. ನಾನು ಇಷ್ಟಪಟ್ಟು ನಡೆಸಿಕೊಡುತ್ತಿರುವ ಶೋ ಎಂದು ಸುದೀಪ್ ಅನೇಕ ಬಾರಿ ಹೇಳಿದ್ದಿದೆ. ಹೀಗಿರುವಾಗಲೇ ಅವರು ಬಿಗ್ ಬಾಸ್ ತೊರೆಯುತ್ತಾರೆ ಎಂದು ಹೇಳಲಾಗುತ್ತಿದೆ.

ಬಿಗ್ ಬಾಸ್ ಜೊತೆ ಸುದೀಪ್ ಮಾಡಿಕೊಂಡ ಒಪ್ಪಂದ ಮುಗಿದಿದೆಯಂತೆ. ಈ ಕಾರಣಕ್ಕೆ ಸುದೀಪ್ ಈ ಶೋ ತೊರೆಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಅವರಿಗೆ ಆ ರೀತಿ ಆಲೋಚನೆ ಸದ್ಯಕ್ಕಂತೂ ಬಂದಿಲ್ಲ. ಈ ಮೊದಲು ಕೂಡ ಒಪ್ಪಂದ ಪೂರ್ಣಗೊಂಡಿತ್ತು. ಈ ಒಪ್ಪಂದವನ್ನು ನವೀಕರಿಸಿಕೊಂಡು ಅವರು ಶೋ ನಡೆಸಿಕೊಡಲು ಬಂದಿದ್ದಾರೆ. ಈ ಬಾರಿಯೂ ಅವರು ಹಾಗೆಯೇ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಯಾರು ಗೆಲ್ಲಬೇಕು ಅನ್ನೋದು ಫಿಕ್ಸ್​ ಆಗಿತ್ತು’: ಬಿಗ್ ಬಾಸ್​ ಮೇಲೆ ದೊಡ್ಡ ಆರೋಪ

ಇತ್ತೀಚೆಗೆ ಬಿಗ್ ಬಾಸ್ ಕನ್ನಡದ 10ನೇ ಸೀಸನ್ ಪೂರ್ಣಗೊಳ್ಳುವಾಗ ಸುದೀಪ್ ಒಂದು ಮಾತನ್ನು ಹೇಳಿದ್ದರು. ‘ಮುಂದೆ ಬರುವ ಹೊಸ ಸೀಸನ್​ಗಳಿಗೂ ಪ್ರೀತಿ ತೋರಿಸಿ’ ಎಂದು ಕೋರಿಕೊಂಡಿದ್ದರು. ಈ ಮಾತನ್ನು ಅನೇಕರು ನೆನಪಿಸಿಕೊಳ್ಳುತ್ತಿದ್ದಾರೆ. ‘ಕಲರ್ಸ್ ಕನ್ನಡ’ ವಾಹಿನಿ ಜೊತೆ ಸುದೀಪ್​ಗೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ವಾಹಿನಿಯವರು ಕೂಡ ಸುದೀಪ್​ ಬಗ್ಗೆ ವಿಶೇಷ ಗೌರವ ಹೊಂದಿದ್ದಾರೆ. ಒಪ್ಪಂದ ಪೂರ್ಣಗೊಂಡಿದ್ದರೆ ಅದನ್ನು ನವೀಕರಿಸಿಕೊಂಡು ಮತ್ತೆ ಬರುತ್ತಾರೆ ಎನ್ನುವ ನಂಬಿಕೆಯಲ್ಲಿ ಫ್ಯಾನ್ಸ್ ಇದ್ದಾರೆ. ಸದ್ಯ ಹರಿದಾಡುತ್ತಿರುವ ಸುದ್ದಿ ಅಂತೆ-ಕಂತೆ ಮಾತ್ರ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:34 am, Tue, 30 January 24

Follow Us
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್