AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದ ಬದಿಗಿಟ್ಟು ಶೂಟಿಂಗ್​ಗೆ ರೆಡಿ ಆದ ಕಿಚ್ಚ ಸುದೀಪ್; ‘K46’ ಚಿತ್ರೀಕರಣ ಎಲ್ಲಿ?

Kichcha Sudeep: ‘K46’ ಚಿತ್ರದ ಶೂಟಿಂಗ್ ಆಗಸ್ಟ್ ಮೊದಲ ವಾರದಿಂದ ಪ್ರಾರಂಭ ಆಗಲಿದೆ. 55 ದಿನಗಳ ಸುದೀರ್ಘ ಶೇಡ್ಯೂಲ್​ನಲ್ಲಿ ಚಿತ್ರೀಕರಣ ನಡೆಯಲಿದೆ.

ವಿವಾದ ಬದಿಗಿಟ್ಟು ಶೂಟಿಂಗ್​ಗೆ ರೆಡಿ ಆದ ಕಿಚ್ಚ ಸುದೀಪ್; ‘K46’ ಚಿತ್ರೀಕರಣ ಎಲ್ಲಿ?
ಸುದೀಪ್
Mangala RR
| Edited By: |

Updated on: Jul 25, 2023 | 10:54 AM

Share

ಕಿಚ್ಚ ಸುದೀಪ್ (Sudeep) ಅವರ ಹೆಸರಿನ ಸುತ್ತ ವಿವಾದಗಳು ಹುಟ್ಟಿಕೊಂಡಿವೆ. ಎಂಎನ್​ ಕುಮಾರ್ ಅವರ ಕಿಚ್ಚನ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಹಣ ಪಡೆದು ಸುದೀಪ್ ಕಾಲ್​ಶೀಟ್ ನೀಡಿಲ್ಲ ಅನ್ನೋದು ಕುಮಾರ್ ಆರೋಪ. ಈ ಪ್ರಕರಣದ ಸಂಧಾನ ಮಾತುಕತೆ ನಡೆಯುತ್ತಿದೆ. ಈಗ ಸುದೀಪ್ ಅವರು ವಿವಾದ ಬದಿಗಿಟ್ಟು ಶೂಟಿಂಗ್​ಗೆ ಮರಳುತ್ತಿದ್ದಾರೆ. ‘ವಿಕ್ರಾಂತ್ ರೋಣ’  (Vikrant Rona Movie) ಬಳಿಕ ಅವರು ಮತ್ತೆ ಕ್ಯಾಮೆರಾ ಎದುರಿಸಲು ರೆಡಿ ಆಗಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ವಿಕ್ರಾಂತ್ ರೋಣ’ ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಸುದೀಪ್ ಒಂದು ಬ್ರೇಕ್ ಪಡೆದರು. ವೃತ್ತಿ ಜೀವನದಲ್ಲಿ ಅವರು ಪಡೆದ ಮೊದಲ ಬ್ರೇಕ್ ಇದು ಅನ್ನೋದು ವಿಶೇಷ. ಈ ಸಮಯದಲ್ಲಿ ಸುದೀಪ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ಕೊಟ್ಟರು. ಚುನಾವಣಾ ಪ್ರಚಾರದಲ್ಲಿ ಭಾಗಿ ಆದರು. ಯುವ ತಂಡಗಳ ಬೆಂಬಲಕ್ಕೆ ನಿಂತರು. ಈಗ ಅವರು ಶೂಟಿಂಗ್ ಹೊರಡೋಕೆ ರೆಡಿ ಆಗಿದ್ದಾರೆ.

‘K46’ ಚಿತ್ರದ ಶೂಟಿಂಗ್ ಆಗಸ್ಟ್ ಮೊದಲ ವಾರದಿಂದ ಪ್ರಾರಂಭ ಆಗಲಿದೆ. 55 ದಿನಗಳ ಸುದೀರ್ಘ ಶೇಡ್ಯೂಲ್​ನಲ್ಲಿ ಚಿತ್ರೀಕರಣ ನಡೆಯಲಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಯಲಿದೆ.  ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎನ್ನುವ ಕುತೂಹಲ ಮೂಡಿದೆ. ವಿಜಯ್ ಕಾರ್ತಿಕೇಯ ಅವರು ‘K46’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವಿ ಕ್ರಿಯೇಷನ್ಸ್ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇತ್ತೀಚೆಗೆ ‘K46’ ಚಿತ್ರದ ಮೊದಲ ಗ್ಲಿಂಪ್ಸ್ ರಿಲೀಸ್ ಆಗಿತ್ತು. ಇದನ್ನು ನೋಡಿದ ಅಭಿಮಾನಿಗಳು ಫಿದಾ ಆಗಿದ್ದರು. ಸುದೀಪ್ ಅವರ ಆ್ಯಕ್ಷನ್ ಜನಮೆಚ್ಚುಗೆ ಪಡೆದಿತ್ತು. ಸಿನಿಮಾ ಆದಷ್ಟು ಬೇಗ ರಿಲೀಸ್ ಆಗಲಿ ಎಂದು ಕಾದು ಕೂರುವ ರೀತಿಯಲ್ಲಿ ಈ ಗ್ಲಿಂಪ್ಸ್​ನ ಸಿದ್ಧಪಡಿಸಲಾಗಿತ್ತು. ‘ನಾನು ಮನುಷ್ಯನಲ್ಲ, ರಾಕ್ಷಸ’ ಎನ್ನುವ ಡೈಲಾಗ್​ ಕೂಡ ಹೈಲೈಟ್ ಆಗಿತ್ತು.

ಇದನ್ನೂ ಓದಿ: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ವಾಗ್ದಾಳಿ ನಡೆಸಿದ ಸೂರಪ್ಪ ಬಾಬು ಸುದೀಪ್ ಬಗ್ಗೆ ಹೇಳಿದ್ದು ಹೀಗೆ

ಮತ್ತೊಂದೆಡೆ ಕಿಚ್ಚ vs ಕುಮಾರ್ ಜಟಾಪಟಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಈ ವಿವಾದ ಪರಿಹರಿಸಲು ರವಿಚಂದ್ರನ್, ಶಿವರಾಜ್​ಕುಮಾರ್ ಎಂಟ್ರಿ ಆಗಿದೆ. ಈಗಾಗಲೇ ಒಂದು ಸುತ್ತಿನ ಸಂಧಾನ ಮಾತುಕತೆ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ