AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ

Kichcha Sudeep: ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಕಿಚ್ಚ ಸುದೀಪ್​ ಅವರು ಟ್ವಿಟರ್​ ಮೂಲಕ ಪ್ರತಿ ದಿನ ಹೊಸ ಹೊಸ ಅಪ್​ಡೇಟ್​ ನೀಡುತ್ತಿದ್ದಾರೆ. ತಾವು ವಿಶೇಷ ಡ್ರೆಸ್​ನಲ್ಲಿ​ ಅಭಿಮಾನಿಗಳನ್ನು ನೋಡಲು ಬಯಸುತ್ತಿರುವುದಾಗಿ ಅವರು​ ಪೋಸ್ಟ್​ ಮಾಡಿದ್ದಾರೆ.

Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
‘ವಿಕ್ರಾಂತ್ ರೋಣ’ ಟಿ-ಶರ್ಟ್, ಜಾಕೆಟ್
TV9 Web
| Edited By: |

Updated on:Jul 20, 2022 | 1:11 PM

Share

ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದೆ. ಜುಲೈ 28ರಂದು ಈ ಚಿತ್ರ ಅದ್ದೂರಿಯಾಗಿ ರಿಲೀಸ್​ ಆಗಲಿದೆ. ಚಿತ್ರ ತೆರೆಕಾಣಲು ಇನ್ನು ಕೆಲವೇ ದಿನಗಳ ಬಾಕಿ ಉಳಿದಿರುವಾಗ ಜೋರಾಗಿ ಪ್ರಚಾರ ಮಾಡಲಾಗುತ್ತಿದೆ. ಕಿಚ್ಚ ಸುದೀಪ್​ ಅಭಿಮಾನಿಗಳು ಕೂಡ ಈ ಕಾರ್ಯದಲ್ಲಿ ಭಾಗಿ ಆಗುತ್ತಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ವಿಕ್ರಾಂತ್​ ರೋಣ’ (Vikrant Rona) ಅಬ್ಬರಿಸಲಿದೆ. ಬಿಗ್​ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗಿದೆ. ಅದಕ್ಕೆ ತಕ್ಕಂತೆಯೇ ಹೈಪ್​ ಸೃಷ್ಟಿ ಆಗಿದೆ. ಕಿಚ್ಚನ ಫೋಟೋ ಮತ್ತು ‘ವಿಕ್ರಾಂತ್​ ರೋಣ’ ಸಿನಿಮಾ ಟೈಟಲ್​ ಇರುವ ಕಾಫಿ ಮಗ್​, ಟಿ-ಶರ್ಟ್​, ಜಾಕೆಟ್​, ನೋಟ್​ ಪ್ಯಾಡ್​ ಮುಂತಾದ ವಸ್ತುಗಳು ಈಗ ಮಾರುಕಟ್ಟೆಯಲ್ಲಿ ಲಭ್ಯವಾಗಿವೆ. ಈ ಬಗ್ಗೆ ಸ್ವತಃ ಸುದೀಪ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಸುದೀಪ್​ ಅವರು ಟ್ವಿಟರ್​ ಮೂಲಕ ಪ್ರತಿ ದಿನ ಹೊಸ ಹೊಸ ಅಪ್​ಡೇಟ್​ ನೀಡುತ್ತಿದ್ದಾರೆ. ವಿಶೇಷವಾಗಿ ಪ್ರಿಂಟ್​ ಮಾಡಲಾಗಿರುವ ಕಾಫಿ ಮಗ್​, ಟಿ-ಶರ್ಟ್​, ಜಾಕೆಟ್​, ನೋಟ್​ ಪ್ಯಾಡ್​ ಸೇರಿದಂತೆ ಹಲವು ವಸ್ತುಗಳು ಲಭ್ಯವಿರುವ ಕುರಿತು ಕೂಡ ಅವರು ಟ್ವಿಟರ್​ ಮೂಲಕ ತಿಳಿಸಿದ್ದಾರೆ. ತಾವು ಈ ಡ್ರೆಸ್​ನಲ್ಲಿ ಅಭಿಮಾನಿಗಳನ್ನು ನೋಡಲು ಬಯಸುತ್ತಿರುವುದಾಗಿ ಸುದೀಪ್​ ಪೋಸ್ಟ್​ ಮಾಡಿದ್ದಾರೆ. ಈ ವಸ್ತುಗಳು ಎಲ್ಲಿ ಸಿಗುತ್ತದೆ ಎಂಬುದರ ಲಿಂಕ್​ ಕೂಡ ಅವರು ಶೇರ್​ ಮಾಡಿದ್ದಾರೆ.

ಇದನ್ನೂ ಓದಿ
Image
ಬಾಗಲಕೋಟೆಯಲ್ಲಿ ರಾ.. ರಾ.. ರಕ್ಕಮ್ಮ ಹಾಡಿಗೆ ನೂರಾರು ಜನರಿಂದ ಭರ್ಜರಿ ಸ್ಟೆಪ್
Image
Jacqueline Fernandez: ಸೆನ್ಸೇಶನ್ ಸೃಷ್ಟಿಸಿದ ‘ರಾ ರಾ ರಕ್ಕಮ್ಮ’; ಕನ್ನಡದಲ್ಲೇ ಧನ್ಯವಾದ ಹೇಳಿದ ಜಾಕ್ವೆಲಿನ್​
Image
 ‘ರಾ ರಾ ರಕ್ಕಮ್ಮಾ..’ ಹಾಡಿಗೆ ಮಸ್ತ್​ ಆಗಿ ಹೆಜ್ಜೆ ಹಾಕಿದ ಅರವಿಂದ್ ಕೆಪಿ-ದಿವ್ಯಾ ಉರುಡುಗ
Image
Vikrant Rona: ಕನ್ನಡದಲ್ಲೇ ಮಾತನಾಡಿದ ಜಾಕ್ವೆಲಿನ್; ‘ರಕ್ಕಮ್ಮ’ಗಾಗಿ ಮೊದಲ ಬಾರಿಗೆ ರೀಲ್ಸ್ ಮಾಡಿದ ಕಿಚ್ಚ ಸುದೀಪ್

‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅನೂಪ್​ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಜಾಕ್​ ಮಂಜು ಅವರು ಬಂಡವಾಳ ಹೂಡಿದ್ದಾರೆ. ನಿರೂಪ್​ ಭಂಡಾರಿ, ನೀತಾ ಅಶೋಕ್​, ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದವರು ನಟಿಸಿದ್ದಾರೆ. ಅಜನೀಶ್​ ಲೋಕನಾಥ್​ ಅವರ ಬತ್ತಳಿಕೆಯಿಂದ ಬಂದ ಹಾಡುಗಳು ಸೂಪರ್​ ಹಿಟ್​ ಆಗಿವೆ. ಎಲ್ಲೆಲ್ಲೂ ‘ರಾ..ರಾ.. ರಕ್ಕಮ್ಮ..’ ಹಾಡು ರಾರಾಜಿಸುತ್ತಿದೆ.

ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಮಲಯಾಳಂ, ಹಿಂದಿ ಮುಂತಾದ ಭಾಷೆಗಳಲ್ಲಿ ‘ವಿಕ್ರಾಂತ್​ ರೋಣ’ ರಿಲೀಸ್​ ಆಗಲಿದೆ. ದೇಶದ ಪ್ರಮುಖ ನಗರಗಳಿಗೆ ತೆರಳಿ ಸುದೀಪ್​ ಮತ್ತು ತಂಡದವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಆ ಮೂಲಕ ಪರರಾಜ್ಯದ ಹೆಚ್ಚು ಜನರಿಗೆ ಸಿನಿಮಾವನ್ನು ತಲುಪಿಸಲು ಪ್ರಯತ್ನಿಸಲಾಗುತ್ತಿದೆ. 3ಡಿಯಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಖತ್​ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ.

Published On - 12:48 pm, Wed, 20 July 22

Follow Us
Web contact
Web contact

TV9 Kannada

Read More
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ