AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್ ಬಯೋಗ್ರಫಿ ಬಿಡುಗಡೆ ಮಾಡಿ, ಭಾವುಕರಾದ ಕಿಚ್ಚ ಸುದೀಪ್​

ಕಿಚ್ಚ ಸುದೀಪ್ ಇಂದು (ಮಾರ್ಚ್​ 15) ಬೆಂಗಳೂರಿನಲ್ಲಿ ‘ನೀನೆ ರಾಜಕುಮಾರ’ ಕೃತಿಯನ್ನು ಬಿಡುಗಡೆ ಮಾಡಿದರು. ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದಿರುವ ಈ ಕೃತಿ ಬಿಡುಗಡೆಗೂ ಮುನ್ನ ಎರಡನೇ ಮುದ್ರಣ ಕಂಡಿರುವುದು ವಿಶೇಷ.

ಪುನೀತ್​ ರಾಜ್​ಕುಮಾರ್ ಬಯೋಗ್ರಫಿ ಬಿಡುಗಡೆ ಮಾಡಿ, ಭಾವುಕರಾದ ಕಿಚ್ಚ ಸುದೀಪ್​
ಪುನೀತ್​ ರಾಜ್​ಕುಮಾರ್ ಬಯೋಗ್ರಫಿ
TV9 Web
| Edited By: |

Updated on:Mar 15, 2022 | 7:06 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar) ಇಲ್ಲ ಎಂಬ ನೋವನ್ನು ಅರಗಿಸಿಕೊಳ್ಳೋಕೆ ಇನ್ನೂ ಸಾಧ್ಯವಾಗುತ್ತಿಲ್ಲ. ಅವರನ್ನು ಕಳೆದುಕೊಂಡು ನಾಲ್ಕು ತಿಂಗಳು ಕಳೆದಿದೆ. ಮಾರ್ಚ್​ 17ಕ್ಕೆ ಅವರ ಬರ್ತ್​ಡೇ ಆಚರಿಸಿಕೊಳ್ಳಲಾಗುತ್ತಿದೆ. ಅವರು ಮಾಡಿದ ಒಳ್ಳೆಯ ಕೆಲಸಗಳನ್ನು ನಾನಾ ರೀತಿಯಲ್ಲಿ ನೆನೆಯಲಾಗುತ್ತಿದೆ. ಪುನೀತ್​ ಅವರು ಹಲವರ ಜತೆ ಒಳ್ಳೆಯ ಒಡನಾಟ ಹೊಂದಿದ್ದರು. ಈಗ ಪುನೀತ್​ ಅವರ ಜೀವನ ಕಥನದ ಕೃತಿ (Puneeth Rajkumar Biography) ಹೊರ ಬಂದಿದೆ. ಸಿನಿಮಾ ಪತ್ರಕರ್ತ ಡಾ. ಶರಣು ಹುಲ್ಲೂರು ಅವರು ಈ ಕೃತಿಯನ್ನು ಬರೆದಿದ್ದು, ಕಿಚ್ಚ ಸುದೀಪ್ (Kichcha Sudeep)​ ಇದನ್ನು ಬಿಡುಗಡೆ ಮಾಡಿದ್ದಾರೆ.

ಕಿಚ್ಚ ಸುದೀಪ್ ಇಂದು (ಮಾರ್ಚ್​ 15) ಬೆಂಗಳೂರಿನಲ್ಲಿ ‘ನೀನೆ ರಾಜಕುಮಾರ’ ಕೃತಿಯನ್ನು ಬಿಡುಗಡೆ ಮಾಡಿದರು. ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದಿರುವ ಈ ಕೃತಿ ಬಿಡುಗಡೆಗೂ ಮುನ್ನ ಎರಡನೇ ಮುದ್ರಣ ಕಂಡಿರುವುದು ವಿಶೇಷ. ಕೃತಿಯ ಬಿಡುಗಡೆ ಮಾಡಿದ ನಂತರ ಮಾತನಾಡಿದ ಸುದೀಪ್, ‘ಒಂದೊಳ್ಳೆಯ ಕೃತಿಯ ಮೂಲಕ ಪುನೀತ್ ರಾಜ್​​ಕುಮಾರ್ ಅವರಿಗೆ ಶರಣು ಹುಲ್ಲೂರು ನಮನ ಸಲ್ಲಿಸಿದ್ದಾರೆ. ಪುನೀತ್ ಅವರದ್ದು ಪುಸ್ತಕವಾಗುವಂತಹ ವ್ಯಕ್ತಿತ್ವ. ಈ ಕೃತಿ ಅವರ ಜೀವನವನ್ನು ಸೊಗಸಾಗಿ ಹಿಡಿದಿಟ್ಟಿದೆ. ಯಾವತ್ತಿಗೂ ನಾನು ಪುನೀತ್ ಅವರನ್ನು ಮೀಸ್ ಮಾಡಿಕೊಳ್ಳುತ್ತೇನೆ’ ಎಂದರು.

ಕಿಚ್ಚ ಸುದೀಪ್ ಅವರ ಕುರಿತು ಶರಣು ಹುಲ್ಲೂರು ಪುಸ್ತಕ ಬರೆದಿದ್ದರು. ಎರಡು ವರ್ಷಗಳ ಹಿಂದೆ ಪುನೀತ್ ರಾಜ್ ಕುಮಾರ್ ಅವರು ಈ ಪುಸ್ತಕ ಬಿಡುಗಡೆ ಮಾಡಿದ್ದರು. ಪುನೀತ್ ಅವರ ಬಯೋಗ್ರಫಿಯನ್ನು ಇದೀಗ ಸುದೀಪ್ ಅವರು ರಿಲೀಸ್ ಮಾಡಿದ್ದಾರೆ. ಈ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ನಿರ್ಮಾಪಕರಾದ ಜಾಕ್ ಮಂಜು, ಕುಮಾರ್ ಹಾಗೂ ಸಾವಣ್ಣ ಪ್ರಕಾಶನದ ಜಮೀಲ್ ಮತ್ತು ಲೇಖಕ ಶರಣು ಹುಲ್ಲೂರು ಉಪಸ್ಥಿತರಿದ್ದರು.

ಬಯೋಗ್ರಫಿಯಲ್ಲಿ ಏನಿದೆ?

ಪುನೀತ್ ರಾಜ್​ಕುಮಾರ್ ಕುರಿತಾಗಿ ಬರುತ್ತಿರುವ ಮೊದಲ ಬಯೋಗ್ರಫಿ ಇದು. ಇದರಲ್ಲಿ ಪುನೀತ್ ಜೀವನ ಕುರಿತಾದ ವಿಷಯಗಳು ಮಾತ್ರ ಇಲ್ಲ. ಅವರ ವೃತ್ತಿ ಮತ್ತು ಖಾಸಗಿ ಜೀವನ ಕುರಿತಾದ ಅಪರೂಪದ ವಿಷಯಗಳನ್ನು ಮತ್ತು ಛಾಯಾಚಿತ್ರಗಳನ್ನು ಈ ಪುಸ್ತಕ ಒಳಗೊಂಡಿದೆ. ಪುನೀತ್​ ಬಾಲ್ಯ, ಬಾಲ್ಯದಲ್ಲಿ ನಟಿಸಿದ ಸಿನಿಮಾಗಳು ಮತ್ತು ಅರಸು ಚಿತ್ರದಿಂದ ಜೇಮ್ಸ್ ಚಿತ್ರದವರೆಗಿನ ಸಮಗ್ರ ನೋಟ ಈ ಪುಸ್ತಕದಲ್ಲಿದೆ. 264 ಪುಟಗಳನ್ನು ಈ ಪುಸ್ತಕ ಹೊಂದಿದ್ದು, ಒಟ್ಟು 34 ಅಧ್ಯಾಯಗಳನ್ನು ಇದು ಒಳಗೊಂಡಿದೆ.

ಇದನ್ನೂ ಓದಿ: James Pre-Release Event: ‘ನಮ್ಮ ಪಕ್ಕದಲ್ಲೇ ದೇವರಿದ್ದರು’; ಪುನೀತ್ ಬಗ್ಗೆ ಶ್ರೀಮುರಳಿ ಭಾವುಕ ಮಾತು

Puneeth Rajkumar: ಕನ್ನಡಿಗರ ಕಣ್ಮಣಿ ನಮ್ಮ ಅಪ್ಪು ಇನ್ಮುಂದೆ, ಡಾಕ್ಟರ್ ಪುನೀತ್ ರಾಜ್‍ಕುಮಾರ್..!

Published On - 3:27 pm, Tue, 15 March 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ