AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಗೆ ಸುದೀಪ್ ಭೇಟಿ: ಅಭಿಮಾನಿಗಳ ಸೆಲ್ಫಿಗೆ ಕಿಚ್ಚನ ಸ್ಮೈಲ್

Sudeep: ನಟ ಸುದೀಪ್, ಪತ್ನಿ ಪ್ರಿಯಾ ಹಾಗೂ ಪೋಷಕರೊಟ್ಟಿಗೆ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ. ವಿಡಿಯೋ ಇಲ್ಲಿದೆ..

ಮಂಜುನಾಥ ಸಿ.
|

Updated on:Jul 29, 2023 | 2:32 PM

Share

ನಟ ಸುದೀಪ್ (Sudeep) ಇತ್ತೀಚೆಗೆ ಸಣ್ಣ ವಿವಾದದಲ್ಲಿ ಸಿಲುಕಿದ್ದರು. ಕೆಲವು ನಿರ್ಮಾಪಕರು ಸುದೀಪ್ ವಿರುದ್ಧ ಮಾಧ್ಯಮಗಳ ಮುಂದೆ ಆರೋಪ ಮಾಡಿದ್ದರು. ಚಿತ್ರರಂಗದಲ್ಲಿ (Sandalwood) ದಶಕಗಳ ಕಾಲ ಸೇವೆ ಸಲ್ಲಿಸಿದ ಬಳಿಕವೂ ಈ ಹಣ, ಡೇಟ್ಸ್ ವಿಚಾರದಲ್ಲಿ ಆರೋಪಗಳಿಗೆ ಗುರಿಯಾದ ಬಗ್ಗೆ ಬೇಸರಗೊಂಡಿದ್ದ ಸುದೀಪ್ ಆರೋಪ ಮಾಡಿದ ನಿರ್ಮಾಪಕರ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಆ ಬಳಿಕ ಚಿತ್ರರಂಗದ ದಿಗ್ಗಜರ ಮಧ್ಯಸ್ಥಿಕೆಯಿಂದ ವಿವಾದ ಇತ್ಯರ್ಥವಾದಂತಿದೆ.

ಇದೀಗ ನಟ ಸುದೀಪ್ ಪತ್ನಿ ಪ್ರಿಯಾ ಹಾಗೂ ಇತರ ಕೆಲವು ಆಪ್ತರೊಟ್ಟಿಗೆ ಸೇರಿ ಆಂಧ್ರ ಪ್ರದೇಶದ ಧಾರ್ಮಿಕ ಸ್ಥಳ ತಿರುಪತಿಗೆ ಭೇಟಿ ನೀಡಿದ್ದಾರೆ. ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸುದೀಪ್ ಅವರನ್ನು ಅಭಿಮಾನಿಗಳು ಮುತ್ತಿಕೊಂಡು ಸೆಲ್ಫಿಗಳನ್ನು ತೆಗೆದುಕೊಂಡಿದ್ದಾರೆ. ಸುದೀಪ್ ಸಹ ಎಂದಿನಂತೆ ನಗುಮುಖದಿಂದ ಅಭಿಮಾನಿಗಳೊಟ್ಟಿಗೆ ಸೆಲ್ಫಿಗೆ ಫೋಸು ನೀಡಿದ್ದಾರೆ.

ನಟ ಸುದೀಪ್ ತೆಲುಗು ಚಿತ್ರರಂಗಕ್ಕೂ ಚಿರಪರಿಚಿತವಾಗಿರುವ ನಟ. ತೆಲುಗು ಸಿನಿ ಪ್ರೇಕ್ಷಕರು ಅತ್ಯುತ್ತಮ ಎಂದು ಒಪ್ಪಿರುವ ನಿರ್ದೇಶಕರಲ್ಲಿ ಇಬ್ಬರಾದ ಎಸ್​ಎಸ್ ರಾಜಮೌಳಿ ಹಾಗೂ ರಾಮ್ ಗೋಪಾಲ್ ವರ್ಮಾ ಅವರ ತೆಲುಗು ಸಿನಿಮಾಗಳಲ್ಲಿ ಸುದೀಪ್ ನಟಿಸಿದ್ದಾರೆ. ರಾಜಮೌಳಿ ನಿರ್ದೇಶನದ ‘ಈಗ’ ಸಿನಿಮಾದಲ್ಲಿ ಸುದೀಪ್ ನಟನೆಯನ್ನು ಯಾವ ಸಿನಿಮಾ ಪ್ರೇಮಿಯೂ ಮರೆಯುವಂತಿಲ್ಲ. ಅಂತೆಯೇ ‘ಬಾಹುಬಲಿ’ ಸಿನಿಮಾದಲ್ಲಿ ಸುದೀಪ್​ರ ಅತಿಥಿ ಪಾತ್ರಕ್ಕೂ ಅದರದ್ದೇ ಆದ ತೂಕವಿದೆ.

ಇದನ್ನೂ ಓದಿ:ಚಿತ್ರರಂಗಕ್ಕೆ ಯಾರಾಗಬೇಕು ನಾಯಕ? ಹಲವರ ಹೆಸರು ಹೇಳಿದ ಶಿವರಾಜ್ ಕುಮಾರ್

ಇನ್ನು ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಕೆಲವಾರು ಸಿನಿಮಾಗಳಲ್ಲಿ ಸುದೀಪ್ ನಟಿಸಿದ್ದಾರೆ, ವರ್ಮಾರ ಮೆಚ್ಚಿನ ನಟರಲ್ಲಿ ಸುದೀಪ್ ಸಹ ಒಬ್ಬರು. ಆದರೆ ರಾಮ್ ಗೋಪಾಲ್ ವರ್ಮಾರ ‘ರಕ್ತ ಚರಿತ್ರ’, ‘ರಕ್ತ ಚರಿತ್ರ 2’ ಸಿನಿಮಾದಲ್ಲಿನ ಸುದೀಪ್ ಪಾತ್ರಗಳು ಭಾರಿ ಹಿಟ್ ಆಗಿದ್ದವು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Sat, 29 July 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ