AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಗೆ ಸುದೀಪ್ ಭೇಟಿ: ಅಭಿಮಾನಿಗಳ ಸೆಲ್ಫಿಗೆ ಕಿಚ್ಚನ ಸ್ಮೈಲ್

Sudeep: ನಟ ಸುದೀಪ್, ಪತ್ನಿ ಪ್ರಿಯಾ ಹಾಗೂ ಪೋಷಕರೊಟ್ಟಿಗೆ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ. ವಿಡಿಯೋ ಇಲ್ಲಿದೆ..

Follow us
ಮಂಜುನಾಥ ಸಿ.
|

Updated on:Jul 29, 2023 | 2:32 PM

ನಟ ಸುದೀಪ್ (Sudeep) ಇತ್ತೀಚೆಗೆ ಸಣ್ಣ ವಿವಾದದಲ್ಲಿ ಸಿಲುಕಿದ್ದರು. ಕೆಲವು ನಿರ್ಮಾಪಕರು ಸುದೀಪ್ ವಿರುದ್ಧ ಮಾಧ್ಯಮಗಳ ಮುಂದೆ ಆರೋಪ ಮಾಡಿದ್ದರು. ಚಿತ್ರರಂಗದಲ್ಲಿ (Sandalwood) ದಶಕಗಳ ಕಾಲ ಸೇವೆ ಸಲ್ಲಿಸಿದ ಬಳಿಕವೂ ಈ ಹಣ, ಡೇಟ್ಸ್ ವಿಚಾರದಲ್ಲಿ ಆರೋಪಗಳಿಗೆ ಗುರಿಯಾದ ಬಗ್ಗೆ ಬೇಸರಗೊಂಡಿದ್ದ ಸುದೀಪ್ ಆರೋಪ ಮಾಡಿದ ನಿರ್ಮಾಪಕರ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಆ ಬಳಿಕ ಚಿತ್ರರಂಗದ ದಿಗ್ಗಜರ ಮಧ್ಯಸ್ಥಿಕೆಯಿಂದ ವಿವಾದ ಇತ್ಯರ್ಥವಾದಂತಿದೆ.

ಇದೀಗ ನಟ ಸುದೀಪ್ ಪತ್ನಿ ಪ್ರಿಯಾ ಹಾಗೂ ಇತರ ಕೆಲವು ಆಪ್ತರೊಟ್ಟಿಗೆ ಸೇರಿ ಆಂಧ್ರ ಪ್ರದೇಶದ ಧಾರ್ಮಿಕ ಸ್ಥಳ ತಿರುಪತಿಗೆ ಭೇಟಿ ನೀಡಿದ್ದಾರೆ. ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸುದೀಪ್ ಅವರನ್ನು ಅಭಿಮಾನಿಗಳು ಮುತ್ತಿಕೊಂಡು ಸೆಲ್ಫಿಗಳನ್ನು ತೆಗೆದುಕೊಂಡಿದ್ದಾರೆ. ಸುದೀಪ್ ಸಹ ಎಂದಿನಂತೆ ನಗುಮುಖದಿಂದ ಅಭಿಮಾನಿಗಳೊಟ್ಟಿಗೆ ಸೆಲ್ಫಿಗೆ ಫೋಸು ನೀಡಿದ್ದಾರೆ.

ನಟ ಸುದೀಪ್ ತೆಲುಗು ಚಿತ್ರರಂಗಕ್ಕೂ ಚಿರಪರಿಚಿತವಾಗಿರುವ ನಟ. ತೆಲುಗು ಸಿನಿ ಪ್ರೇಕ್ಷಕರು ಅತ್ಯುತ್ತಮ ಎಂದು ಒಪ್ಪಿರುವ ನಿರ್ದೇಶಕರಲ್ಲಿ ಇಬ್ಬರಾದ ಎಸ್​ಎಸ್ ರಾಜಮೌಳಿ ಹಾಗೂ ರಾಮ್ ಗೋಪಾಲ್ ವರ್ಮಾ ಅವರ ತೆಲುಗು ಸಿನಿಮಾಗಳಲ್ಲಿ ಸುದೀಪ್ ನಟಿಸಿದ್ದಾರೆ. ರಾಜಮೌಳಿ ನಿರ್ದೇಶನದ ‘ಈಗ’ ಸಿನಿಮಾದಲ್ಲಿ ಸುದೀಪ್ ನಟನೆಯನ್ನು ಯಾವ ಸಿನಿಮಾ ಪ್ರೇಮಿಯೂ ಮರೆಯುವಂತಿಲ್ಲ. ಅಂತೆಯೇ ‘ಬಾಹುಬಲಿ’ ಸಿನಿಮಾದಲ್ಲಿ ಸುದೀಪ್​ರ ಅತಿಥಿ ಪಾತ್ರಕ್ಕೂ ಅದರದ್ದೇ ಆದ ತೂಕವಿದೆ.

ಇದನ್ನೂ ಓದಿ:ಚಿತ್ರರಂಗಕ್ಕೆ ಯಾರಾಗಬೇಕು ನಾಯಕ? ಹಲವರ ಹೆಸರು ಹೇಳಿದ ಶಿವರಾಜ್ ಕುಮಾರ್

ಇನ್ನು ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಕೆಲವಾರು ಸಿನಿಮಾಗಳಲ್ಲಿ ಸುದೀಪ್ ನಟಿಸಿದ್ದಾರೆ, ವರ್ಮಾರ ಮೆಚ್ಚಿನ ನಟರಲ್ಲಿ ಸುದೀಪ್ ಸಹ ಒಬ್ಬರು. ಆದರೆ ರಾಮ್ ಗೋಪಾಲ್ ವರ್ಮಾರ ‘ರಕ್ತ ಚರಿತ್ರ’, ‘ರಕ್ತ ಚರಿತ್ರ 2’ ಸಿನಿಮಾದಲ್ಲಿನ ಸುದೀಪ್ ಪಾತ್ರಗಳು ಭಾರಿ ಹಿಟ್ ಆಗಿದ್ದವು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Sat, 29 July 23

ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ