AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಗೆ ಸುದೀಪ್ ಭೇಟಿ: ಅಭಿಮಾನಿಗಳ ಸೆಲ್ಫಿಗೆ ಕಿಚ್ಚನ ಸ್ಮೈಲ್

Sudeep: ನಟ ಸುದೀಪ್, ಪತ್ನಿ ಪ್ರಿಯಾ ಹಾಗೂ ಪೋಷಕರೊಟ್ಟಿಗೆ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ. ವಿಡಿಯೋ ಇಲ್ಲಿದೆ..

ಮಂಜುನಾಥ ಸಿ.
|

Updated on:Jul 29, 2023 | 2:32 PM

Share

ನಟ ಸುದೀಪ್ (Sudeep) ಇತ್ತೀಚೆಗೆ ಸಣ್ಣ ವಿವಾದದಲ್ಲಿ ಸಿಲುಕಿದ್ದರು. ಕೆಲವು ನಿರ್ಮಾಪಕರು ಸುದೀಪ್ ವಿರುದ್ಧ ಮಾಧ್ಯಮಗಳ ಮುಂದೆ ಆರೋಪ ಮಾಡಿದ್ದರು. ಚಿತ್ರರಂಗದಲ್ಲಿ (Sandalwood) ದಶಕಗಳ ಕಾಲ ಸೇವೆ ಸಲ್ಲಿಸಿದ ಬಳಿಕವೂ ಈ ಹಣ, ಡೇಟ್ಸ್ ವಿಚಾರದಲ್ಲಿ ಆರೋಪಗಳಿಗೆ ಗುರಿಯಾದ ಬಗ್ಗೆ ಬೇಸರಗೊಂಡಿದ್ದ ಸುದೀಪ್ ಆರೋಪ ಮಾಡಿದ ನಿರ್ಮಾಪಕರ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಆ ಬಳಿಕ ಚಿತ್ರರಂಗದ ದಿಗ್ಗಜರ ಮಧ್ಯಸ್ಥಿಕೆಯಿಂದ ವಿವಾದ ಇತ್ಯರ್ಥವಾದಂತಿದೆ.

ಇದೀಗ ನಟ ಸುದೀಪ್ ಪತ್ನಿ ಪ್ರಿಯಾ ಹಾಗೂ ಇತರ ಕೆಲವು ಆಪ್ತರೊಟ್ಟಿಗೆ ಸೇರಿ ಆಂಧ್ರ ಪ್ರದೇಶದ ಧಾರ್ಮಿಕ ಸ್ಥಳ ತಿರುಪತಿಗೆ ಭೇಟಿ ನೀಡಿದ್ದಾರೆ. ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸುದೀಪ್ ಅವರನ್ನು ಅಭಿಮಾನಿಗಳು ಮುತ್ತಿಕೊಂಡು ಸೆಲ್ಫಿಗಳನ್ನು ತೆಗೆದುಕೊಂಡಿದ್ದಾರೆ. ಸುದೀಪ್ ಸಹ ಎಂದಿನಂತೆ ನಗುಮುಖದಿಂದ ಅಭಿಮಾನಿಗಳೊಟ್ಟಿಗೆ ಸೆಲ್ಫಿಗೆ ಫೋಸು ನೀಡಿದ್ದಾರೆ.

ನಟ ಸುದೀಪ್ ತೆಲುಗು ಚಿತ್ರರಂಗಕ್ಕೂ ಚಿರಪರಿಚಿತವಾಗಿರುವ ನಟ. ತೆಲುಗು ಸಿನಿ ಪ್ರೇಕ್ಷಕರು ಅತ್ಯುತ್ತಮ ಎಂದು ಒಪ್ಪಿರುವ ನಿರ್ದೇಶಕರಲ್ಲಿ ಇಬ್ಬರಾದ ಎಸ್​ಎಸ್ ರಾಜಮೌಳಿ ಹಾಗೂ ರಾಮ್ ಗೋಪಾಲ್ ವರ್ಮಾ ಅವರ ತೆಲುಗು ಸಿನಿಮಾಗಳಲ್ಲಿ ಸುದೀಪ್ ನಟಿಸಿದ್ದಾರೆ. ರಾಜಮೌಳಿ ನಿರ್ದೇಶನದ ‘ಈಗ’ ಸಿನಿಮಾದಲ್ಲಿ ಸುದೀಪ್ ನಟನೆಯನ್ನು ಯಾವ ಸಿನಿಮಾ ಪ್ರೇಮಿಯೂ ಮರೆಯುವಂತಿಲ್ಲ. ಅಂತೆಯೇ ‘ಬಾಹುಬಲಿ’ ಸಿನಿಮಾದಲ್ಲಿ ಸುದೀಪ್​ರ ಅತಿಥಿ ಪಾತ್ರಕ್ಕೂ ಅದರದ್ದೇ ಆದ ತೂಕವಿದೆ.

ಇದನ್ನೂ ಓದಿ:ಚಿತ್ರರಂಗಕ್ಕೆ ಯಾರಾಗಬೇಕು ನಾಯಕ? ಹಲವರ ಹೆಸರು ಹೇಳಿದ ಶಿವರಾಜ್ ಕುಮಾರ್

ಇನ್ನು ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಕೆಲವಾರು ಸಿನಿಮಾಗಳಲ್ಲಿ ಸುದೀಪ್ ನಟಿಸಿದ್ದಾರೆ, ವರ್ಮಾರ ಮೆಚ್ಚಿನ ನಟರಲ್ಲಿ ಸುದೀಪ್ ಸಹ ಒಬ್ಬರು. ಆದರೆ ರಾಮ್ ಗೋಪಾಲ್ ವರ್ಮಾರ ‘ರಕ್ತ ಚರಿತ್ರ’, ‘ರಕ್ತ ಚರಿತ್ರ 2’ ಸಿನಿಮಾದಲ್ಲಿನ ಸುದೀಪ್ ಪಾತ್ರಗಳು ಭಾರಿ ಹಿಟ್ ಆಗಿದ್ದವು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Sat, 29 July 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು