AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ಭಾಷೆ ವಿವಾದದ ಬಳಿಕ ಗಲ್ಲಾ ಪೆಟ್ಟಿಗೆಯಲ್ಲೂ ಕಿಚ್ಚ ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಪೈಪೋಟಿ

Kichcha Sudeep vs Ajay Devgn: ಕಿಚ್ಚ ಸುದೀಪ್​ ಮತ್ತು ಅಜಯ್​ ದೇವಗನ್​ ನಡುವಿನ ಟ್ವಿಟರ್​ ಜಟಾಪಟಿ ತಣ್ಣಗಾಯಿತು. ಈಗ ಈ ಇಬ್ಬರು ಸ್ಟಾರ್​ ನಟರ ಸಿನಿಮಾಗಳ ನಡುವಿನ ಬಾಕ್ಸ್​ ಆಫೀಸ್​ ಕ್ಲ್ಯಾಶ್​ ಬಗ್ಗೆ ಚರ್ಚೆ ಶುರುವಾಗಿದೆ.

ರಾಷ್ಟ್ರ ಭಾಷೆ ವಿವಾದದ ಬಳಿಕ ಗಲ್ಲಾ ಪೆಟ್ಟಿಗೆಯಲ್ಲೂ ಕಿಚ್ಚ ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಪೈಪೋಟಿ
ಕಿಚ್ಚ ಸುದೀಪ್, ಅಜಯ್ ದೇವಗನ್
TV9 Web
| Edited By: |

Updated on: May 08, 2022 | 1:40 PM

Share

ರಾಷ್ಟ್ರ ಭಾಷೆಯ ವಿಚಾರ ಕೆಲವೇ ದಿನಗಳ ಹಿಂದೆ ಭಾರಿ ಸದ್ದು ಮಾಡಿತ್ತು. ‘ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ’ ಎಂದು ಕಿಚ್ಚ ಸುದೀಪ್​ (Kichcha Sudeep) ಅವರು ಹೇಳಿದ್ದಕ್ಕೆ ಬಾಲಿವುಡ್​ ನಟ ಅಜಯ್​ ದೇವಗನ್​ ವಿರೋಧ ವ್ಯಕ್ತಪಡಿಸಿದ್ದರು. ‘ಹಿಂದಿ ರಾಷ್ಟ್ರ ಭಾಷೆ ಅಲ್ಲ ಎನ್ನುವುದಾದರೆ ನಿಮ್ಮ ಸಿನಿಮಾಗಳನ್ನು ಹಿಂದಿಗೆ ಯಾಕೆ ಡಬ್​ ಮಾಡ್ತೀರಿ’ ಎಂದು ಕಿಚ್ಚ ಸುದೀಪ್​ಗೆ ಅಜಯ್​ ದೇವಗನ್​ ಅಸಂಬದ್ಧವಾಗಿ ಪ್ರಶ್ನೆ ಕೇಳಿದ್ದರು. ಈ ಜಟಾಪಟಿಯಲ್ಲಿ ಎಲ್ಲರೂ ಸುದೀಪ್​ಗೆ ಬೆಂಬಲ ನೀಡಿದ್ದರು. ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂದು ದಕ್ಷಿಣ ಭಾರತದ ಅನೇಕ ಸೆಲೆಬ್ರಿಟಿಗಳು ಒಮ್ಮತದ ಧ್ವನಿ ಮೊಳಗಿಸಿದರು. ಒಟ್ಟಾರೆ ಚರ್ಚೆ ನಡೆಯುವಾಗ ಸುದೀಪ್​ ವರ್ಸಸ್​ ಅಜಯ್​ ದೇವಗನ್​ (Kichcha Sudeep vs Ajay Devgn) ಎಂಬಂತಹ ವಾತಾವರಣ ನಿರ್ಮಾಣ ಆಗಿತ್ತು. ಸುದೀಪ್​ ಅವರು ಟ್ವಿಟರ್​ ಮೂಲಕ ಸೂಕ್ತ ಪ್ರತಿಕ್ರಿಯೆ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಈಗ ಸಿನಿಮಾ ವಿಚಾರದಲ್ಲಿ ಮತ್ತೆ ಅಜಯ್​ ದೇವಗನ್​ ವರ್ಸಸ್​ ಕಿಚ್ಚ ಸುದೀಪ್​ ಎಂಬ ಫೈಟ್​ ನಿರ್ಮಾಣ ಆಗುವ ಸಾಧ್ಯತೆ ದಟ್ಟವಾಗಿದೆ. ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ (Vikrant Rona Movie) ಎದುರಿಗೆ ಅಜಯ್​ ದೇವಗನ್​ ಅವರ ‘ಥ್ಯಾಂಕ್ ಗಾಡ್​’ ಸಿನಿಮಾ ರಿಲೀಸ್​ ಆಗಲಿದೆ!

‘ವಿಕ್ರಾಂತ್​ ರೋಣ’ ಸಿನಿಮಾ ಮೇಲೆ ಕಿಚ್ಚ ಸುದೀಪ್​ ಅವರ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 3ಡಿ ಅವತರಣಿಕೆಯಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಅನೂಪ್​ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಜಾಕ್​ ಮಂಜು ಮತ್ತು ಅಲಂಕಾರ್​ ಪಾಂಡಿಯನ್​ ಅವರು ನಿರ್ಮಾಣ ಮಾಡಿದ್ದಾರೆ. ಹಲವು ಕಾರಣಗಳಿಂದ ಕೌತುಕ ಮೂಡಿಸಿರುವ ಈ ಚಿತ್ರ ಜು.28ರಂದು ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಅದೇ ಸಮಯಕ್ಕೆ ಸರಿಯಾಗಿ ಅಜಯ್​ ದೇವಗನ್​ ನಟನೆಯ ‘ಥ್ಯಾಂಕ್​ ಗಾಡ್​’ ಸಿನಿಮಾ ಕೂಡ ಬಿಡುಗಡೆ ಆಗುತ್ತಿರುವುದು ಗಮನಾರ್ಹ ಸಂಗತಿ.

ಅಜಯ್​ ದೇವಗನ್​ ಅವರು ನಟಿಸಿದ ‘ರನ್​ವೇ 34’ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿ ಸೋಲು ಅನುಭವಿಸಿತು. ಮುಂದಿನ ಸಿನಿಮಾದಲ್ಲಾದರೂ ಅವರು ಗೆಲ್ಲಬೇಕಿದೆ. ‘ಥ್ಯಾಂಕ್​ ಗಾಡ್​’ ಚಿತ್ರಕ್ಕೆ ಇಂದ್ರ ಕುಮಾರ್​ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅಜಯ್​ ದೇವಗನ್​ ಜೊತೆ ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ರಾಕುಲ್​ ಪ್ರೀತ್​ ಸಿಂಗ್​ ಕೂಡ ನಟಿಸಿದ್ದಾರೆ. ಈ ಸಿನಿಮಾ ಜ.29ರಂದು ರಿಲೀಸ್​ ಆಗಲಿದೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಅನೇಕ ತಿಂಗಳ ಹಿಂದೆಯೇ ಘೋಷಿಸಲಾಗಿತ್ತು. ಆಗ ಕಿಚ್ಚ ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಎಂಬ ಪರಿಸ್ಥಿತಿ ಇರಲಿಲ್ಲ. ಆದರೆ ಇತ್ತೀಚೆಗೆ ನಡೆದ ರಾಷ್ಟ್ರ ಭಾಷೆಯ ಜಟಾಪಟಿಯಿಂದ ಇಬ್ಬರು ಸ್ಟಾರ್​ ನಟರ ಸಿನಿಮಾಗಳನ್ನೂ ಕೂಡ ಎದುರುಬದರಾಗಿ ನೋಡುವ ವಾತಾವರಣ ನಿರ್ಮಾಣ ಆಗಿದೆ.

ಇದನ್ನೂ ಓದಿ
Image
Vikrant Rona: ಬಿಡುಗಡೆಗೂ ಮುನ್ನ ವಿದೇಶದಲ್ಲಿ 10 ಕೋಟಿ ರೂ. ಬಿಸ್ನೆಸ್​ ಮಾಡಿದ ‘ವಿಕ್ರಾಂತ್​ ರೋಣ’: ಸುದೀಪ್​ ಫ್ಯಾನ್ಸ್​ ಖುಷ್​
Image
ಸ್ಟಾರ್​ ಹೀರೋ ಜತೆಗಿನ ಜಗಳದ ಬಗ್ಗೆ ಮೌನ ಮುರಿದ ಅಜಯ್​ ದೇವಗನ್​: ‘ಇದೆಲ್ಲ ಫ್ಯಾನ್ಸ್​ ಕೆಲಸ’ ಎಂದ ನಟ
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು
Image
ಹಿಂದಿ ವಿವಾದ: ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಕಾಂಟ್ರವರ್ಸಿ ಶುರು ಆಗಿದ್ದು ಹೇಗೆ? ಇಲ್ಲಿದೆ ವಿವರ..

ಕೇವಲ ಒಂದು ದಿನದ ಅಂತರದಲ್ಲಿ ಬಿಡುಗಡೆ ಆಗಲಿರುವ ‘ವಿಕ್ರಾಂತ್​ ರೋಣ’ (ಜು.28) ಹಾಗೂ ‘ಥ್ಯಾಂಕ್​ ಗಾಡ್​’ (ಜು.29) ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ಯಾವ ರೀತಿ ಹಣಾಹಣಿ ನಡೆಸಲಿವೆ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ. ‘ವಿಕ್ರಾಂತ್​ ರೋಣ’ ಸಿನಿಮಾ ಈಗಾಗಲೇ ಸಖತ್​ ಸದ್ದು ಮಾಡುತ್ತಿದೆ. ಈ ಸಿನಿಮಾದ ವಿದೇಶಿ ವಿತರಣೆಯ ಹಕ್ಕುಗಳು 10 ಕೋಟಿ ರೂಪಾಯಿಗೆ ಮಾರಾಟ ಆಗಿದೆ ಎಂಬ ಸುದ್ದಿ ಕೂಡ ಕೇಳಿಬರುತ್ತಿದೆ. ಮೇ 3ನೇ ವಾರದಿಂದ ಚಿತ್ರದ ಪ್ರಚಾರ ಕಾರ್ಯ ಆರಂಭ ಆಗಲಿದೆ. ಈ ಸಿನಿಮಾದಲ್ಲಿ ಸುದೀಪ್​ ಜೊತೆ ನೀತಾ ಅಶೋಕ್​, ನಿರೂಪ್​ ಭಂಡಾರಿ, ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ನಟಿಸಿರುವುದರಿಂದ ನಿರೀಕ್ಷೆ ಹೆಚ್ಚಿದೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ಮಿಲಿಯನ್​ಗಟ್ಟಲೆ ವೀಕ್ಷಣೆ ಪಡೆದುಕೊಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು