Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕನಾಗಬೇಕಿದ್ದ ಸುದೀಪ್ ಅವರು ಹೀರೋ ಆಗಿದ್ದು ಹೇಗೆ?

Kichcha Sudeep: ಕಿಚ್ಚ ಸುದೀಪ್ ಕನ್ನಡ ಚಿತ್ರರಂಗದ ಸ್ಟಾರ್ ನಟ ಮಾತ್ರವಲ್ಲದೆ ಸ್ಟಾರ್ ಪ್ಯಾನ್ ಇಂಡಿಯಾ ನಟರೂ ಸಹ ಹೌದು. ಆದರೆ ಸುದೀಪ್​ಗೆ ನಟನೆ ಇಷ್ಟವಿರಲಿಲ್ಲ, ಅವರಿಗೆ ತಾವೊಬ್ಬ ಒಳ್ಳೆಯ ಸಿನಿಮಾ ನಿರ್ದೇಶಕ ಆಗಬೇಕು ಎಂಬ ಆಸೆಯಿತ್ತು. ನಿರ್ದೇಶಕನಾಗಬೇಕು ಎಂದುಕೊಂಡಿದ್ದ ಸುದೀಪ್ ನಟನಾಗಿದ್ದು ಹೇಗೆ?

ನಿರ್ದೇಶಕನಾಗಬೇಕಿದ್ದ ಸುದೀಪ್ ಅವರು ಹೀರೋ ಆಗಿದ್ದು ಹೇಗೆ?
Sudeep
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on:Feb 21, 2025 | 4:14 PM

ಸುದೀಪ್ ಅವರು ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಗಮನ ಸೆಳೆದಿದ್ದಾರೆ. ಅವರು ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಕಳೆದ ವರ್ಷ ರಿಲೀಸ್ ಆದ ‘ಮ್ಯಾಕ್ಸ್’ ಸಿನಿಮಾ ಯಶಸ್ಸು ಕಂಡಿದೆ. ಅವರು ಹೀರೋ ಆಗೋಕೆ ಕಾರಣ ಆಗಿದ್ದು ಉಪೇಂದ್ರ ಎಂಬ ವಿಚಾರ ನಿಮಗೆ ಗೊತ್ತೇ? ಆ ಬಗ್ಗೆ ನಾವು ಹೇಳುತ್ತಿದ್ದೇವೆ ಕೇಳಿ. ಈ ವಿಚಾರವನ್ನು ಉಪೇಂದ್ರ ಅವರು ಅನೇಕ ಬಾರಿ ಹೇಳಿಕೊಂಡಿದ್ದಾರೆ.

ಕಿಚ್ಚ ಸುದೀಪ್ ಅವರು ಹೀರೋ ಆಗಿ ಮಿಂಚುತ್ತಿದ್ದಾರೆ. ಆದರೆ, ಮೊದಲು ಅವರಲ್ಲಿ ಆ ರೀತಿಯ ಆಸೆಗಳೇ ಇರಲಿಲ್ಲ. ಅವರು ನಿರ್ದೇಶಕರಾಗಬೇಕು ಎಂದುಕೊಂಡಿದ್ದರು. ಇದನ್ನು ಉಪೇಂದ್ರ ಅವರು ಒಮ್ಮೆ ರಿವೀಲ್ ಮಾಡಿದ್ದರು. ಸುದೀಪ್ ಚಿತ್ರರಂಗಕ್ಕೆ ಬರುವಾಗ ಉಪೇಂದ್ರ ನಿರ್ದೇಶನದಲ್ಲಿ ಸಾಕಷ್ಟು ಹೆಸರು ಮಾಡಿದ್ದರು. ಈ ಕಾರಣಕ್ಕೆ ಉಪೇಂದ್ರ ಬಳಿ ಅವಕಾಶ ಕೇಳಿಕೊಂಡು ಸುದೀಪ್ ಹೋಗಿದ್ದರಂತೆ.

‘ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಲು ಅವಕಾಶ ಕೊಡಿ’ ಎಂದು ಉಪೇಂದ್ರ ಬಳಿ ಸುದೀಪ್ ಅವರು ಕೋರಿದ್ದರು. ಅವರ ಎತ್ತರ ಹಾಗೂ ಪರ್ಸನಾಲಿಟಿ ನೋಡಿ ‘ನೀವು ಯಾಕೆ ಡೈರೆಕ್ಟರ್ ಆಗ್ತೀರಾ. ಇಷ್ಟು ಹೈಟ್ ಇದೆ ಹೀರೋ ಆಗಿ’ ಎಂದು ಕಿವಿಮಾತು ಹೇಳಿ ಕಳುಹಿಸಿದ್ದರು. ಈ ಕಿವಿಮಾತು ಕೆಲಸ ಮಾಡಿತ್ತು. ಸುದೀಪ್ ಅವರು ಹೀರೋ ಆದರು.

ಇದನ್ನೂ ಓದಿ:‘ಮಲಗಿದ್ದವನಿಗೆ ಕರೆ ಮಾಡಿ ಹಾಡು ಹೇಳಿಸ್ತಾರೆ’: ಸುದೀಪ್ ಬಗ್ಗೆ ವಿಜಯ್ ಪ್ರಕಾಶ್ ಮಾತು

ಸುದೀಪ್ ಅವರು ಹೀರೋ ಆದ ಹೊರತಾಗಿಯೂ ನಿರ್ದೇಶಕನಾಗಬೇಕು ಎಂಬ ಆಸೆಯನ್ನು ಬಿಟ್ಟಿಲ್ಲ. ಹೀರೋ ಆಗಿ ಯಶಸ್ಸು ಕಂಡ ಬಳಿಕ ಅವರು ಡೈರೆಕ್ಷನ್ಗೆ ಇಳಿದರು. ಡೈರೆಕ್ಷನ್ ಮಾಡಿ ಅವರು ಫೇಮಸ್ ಆದರು. ಹಲವು ಹಿಟ್ ಚಿತ್ರಗಳನ್ನು ಡೈರೆಕ್ಟ್ ಮಾಡಿದ್ದಾರೆ.

ಸದ್ಯ ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರದ ಬಳಿಕ ಅವರು ‘ಬಿಲ್ಲ ರಂಗ ಭಾಷ’ ಸಿನಿಮಾಗಳಲ್ಲಿ ಮಾಡುತ್ತಿದ್ದಾರೆ. ಈ ಚಿತ್ರದ ಬಳಿಕ ಅವರು ಒಂದು ಚಿತ್ರವನ್ನು ನಿರ್ದೇಶನ ಕೂಡ ಮಾಬಡೇಕಿದೆ. ಈ ಸಿನಿಮಾ ಯಾವಾಗ ಸೆಟ್ಟೇರುತ್ತದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಸದ್ಯ ಸುದೀಪ್ ಅವರು ಸಿಸಿಎಲ್ ಪಂದ್ಯಗಳಲ್ಲಿ ಬ್ಯುಸಿ ಇದ್ದಾರೆ. ಅವರು ಒಂದು ಚಿತ್ರವನ್ನು ನಿರ್ದೇಶನ ಮಾಡೋದಾಗಿಯೂ ಘೋಷಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Fri, 21 February 25

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ