AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಸುದೀಪ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಪತ್ನಿ ಪ್ರಿಯಾ; ಈಗ ಹೇಗಿದ್ದಾರೆ ಕಿಚ್ಚ?

ಬಿಗ್ ಬಾಸ್ ಸ್ಪರ್ಧಿಗಳು ಬರೆದ ಪತ್ರವನ್ನು ಪ್ರಿಯಾ ಸುದೀಪ್ ಓದಿದ್ದಾರೆ. ಎಲ್ಲರ ಪ್ರೀತಿ ಕಂಡು ಅವರು ಖುಷಿ ಆಗಿದ್ದಾರೆ. ಜೊತೆಗೆ ಕಿಚ್ಚನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

Kichcha Sudeep: ಸುದೀಪ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಪತ್ನಿ ಪ್ರಿಯಾ; ಈಗ ಹೇಗಿದ್ದಾರೆ ಕಿಚ್ಚ?
ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Apr 19, 2021 | 2:17 PM

Share

ನಟ ಸುದೀಪ್​ ಅವರಿಗೆ ಆರೋಗ್ಯದಲ್ಲಿ ವ್ಯತ್ಯಯ ಆಗಿದ್ದು, ಆ ಬಗ್ಗೆ ಅಭಿಮಾನಿಗಳು ಬೇಸರಪಟ್ಟುಕೊಂಡಿದ್ದಾರೆ. ಅನಾರೋಗ್ಯದ ಕಾರಣ ಕಿಚ್ಚ ಎಲ್ಲ ಕೆಲಸಗಳಿಗೂ ಬ್ರೇಕ್​ ನೀಡಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಯಾವಾಗಲೂ ಆ್ಯಕ್ಟೀವ್​ ಆಗಿರುವ ಸುದೀಪ್​ ಅವರಿಗೆ ಈಗ ಆರೋಗ್ಯ ಕೈ ಕೊಟ್ಟಿರುವುದು ಫ್ಯಾನ್ಸ್​ ಚಿಂತೆಗೆ ಕಾರಣ ಆಗಿದೆ. ಹಾಗಾದರೆ ಕಿಚ್ಚ ಈಗ ಹೇಗಿದ್ದಾರೆ? ಆ ಬಗ್ಗೆ ಅಪ್​ಡೇಟ್​ ಸಿಕ್ಕಿದೆ.

ಅನಾರೋಗ್ಯದ ಕಾರಣದಿಂದಾಗಿ ಕಿಚ್ಚ ಸುದೀಪ್​ ಅವರು ಬಿಗ್​ ಬಾಸ್​ 7ನೇ ವಾರದ ವೀಕೆಂಡ್ ಎಪಿಸೋಡ್​ಗಳನ್ನು ನಡೆಸಿಕೊಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ವೀಕ್ಷಕರು ಮತ್ತು ಬಿಗ್​ ಬಾಸ್​ ಸ್ಪರ್ಧಿಗಳು ಬೇಸರ ಮಾಡಿಕೊಂಡಿದ್ದರು. ಸುದೀಪ್​ ಬೇಗ ಗುಣಮುಖರಾಗಲಿ ಎಂದು ಹಾರೈಸಿ, ಬಿಗ್​ ಬಾಸ್​ ಮನೆಯಿಂದಲೇ ಕಿಚ್ಚಿನಿಗೆ ಪ್ರೀತಿಯ ಪತ್ರ ಬರೆಯಲಾಗಿದೆ. ಆ ಪತ್ರ ಓದಿ ಸುದೀಪ್​ ಪತ್ನಿ ಪ್ರಿಯಾ ಪತ್ರಿಕ್ರಿಯೆ ನೀಡಿದ್ದಾರೆ.

ಬಿಗ್​ ಬಾಸ್​ ಸ್ಪರ್ಧಿಗಳು ಬರೆದ ಪತ್ರವನ್ನು ಪ್ರಿಯಾ ಓದಿದ್ದಾರೆ. ಎಲ್ಲರ ಪ್ರೀತಿ ಕಂಡು ಅವರು ಖುಷಿ ಆಗಿದ್ದಾರೆ. ಆ ಬಗ್ಗೆ ಟ್ವಿಟರ್​ನಲ್ಲಿ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಈ ಪ್ರೀತಿಭರಿತ ಪತ್ರ ಮತ್ತು ರುಚಿಕರವಾದ ಅಡುಗೆ ಕಳಿಸಿದ್ದಕ್ಕೆ ಬಿಗ್​ ಬಾಸ್​ ಸ್ಪರ್ಧಿಗಳು ಮತ್ತು ಕಲರ್ಸ್​ ಕನ್ನಡ ವಾಹಿನಿಗೆ ಧನ್ಯವಾದಗಳು’ ಎಂದು ಪ್ರಿಯಾ ಟ್ವೀಟ್​ ಮಾಡಿದ್ದಾರೆ. ಅದರ ಜೊತೆಗೆ ಸುದೀಪ್​ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

‘ಸುದೀಪ್​ ತುಂಬ ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ನಿಮ್ಮೆಲ್ಲರ ಜೊತೆ ಮಾತನಾಡಲು ಅವರು ಆದಷ್ಟು ಬೇಗ ಬರುತ್ತಾರೆ’ ಎನ್ನುವ ಮೂಲಕ ಎಲ್ಲ ಅಭಿಮಾನಿಗಳಿಗೂ ಕಿಚ್ಚ ಆರೋಗ್ಯದ ಬಗ್ಗೆ ಪ್ರಿಯಾ ಅಪ್​ಡೇಟ್​ ನೀಡಿದ್ದಾರೆ. ಇನ್ನು, ಬಿಗ್​ ಬಾಸ್​ ಸ್ಪರ್ಧಿಗಳು ಬರೆದ ಪತ್ರವನ್ನು ಸುದೀಪ್​ ಕೂಡ ಓದಿದ್ದಾರೆ. ಎಲ್ಲರ ಪ್ರೀತಿ ಕಂಡು ಭಾವುಕರಾಗಿರುವ ಅವರು ದೊಡ್ಮನೆಯ ಸದಸ್ಯರಿಗಾಗಿ ಒಂದು ವಾಯ್ಸ್​ ಮೆಸೇಜ್​ ಕಳಿಸಿದ್ದಾರೆ.

ಎಲ್ಲರಿಗೂ ನನ್ನ ಹಾಯ್​. ನೀವು ಬರೆದ ಪತ್ರ ಓದಿದ್ದೇನೆ. ಪ್ರತಿಕ್ರಿಯಿಸಲು ನನಗೆ ಪದಗಳೇ ಸಿಗುತ್ತಿಲ್ಲ. ಎಲ್ಲರಿಗೂ ಧನ್ಯವಾದಗಳು. ಸ್ವಲ್ಪ ಆರೋಗ್ಯ ಸರಿ ಇಲ್ಲ. ಆದಷ್ಟು ಬೇಗ ಗುಣವಾಗುವ ಭರವಸೆ ಇದೆ. ನೀವು ಕಳಿಸಿದ ಅಡುಗೆಯ ರುಚಿ ಸವಿದೆ. ತುಂಬಾ ಚೆನ್ನಾಗಿ ಮಾಡಿದ್ದೀರಿ. ಇಷ್ಟೊಂದು ಪ್ರೀತಿಯಿಂದ ನೀವು ಮಾಡಿ ಕಳಿಸಿದ್ದರ ಬಗ್ಗೆ ಪ್ರೀತಿ ಇದೆ. ನಾವು ಮಾಡುವ ಕೆಲವು ಕೆಲಸ ಸಾರ್ಥಕ ಅಂತ ಅನಿಸುತ್ತದೆ. ವೀಕೆಂಡ್​ ಎಪಿಸೋಡ್​ ಮಿಸ್​ ಮಾಡಲು ನನಗೂ ಇಷ್ಟ ಇಲ್ಲ. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದೇನೆ’ ಎಂದು ಸುದೀಪ್​ ಹೇಳಿದ್ದಾರೆ.

ಇದನ್ನೂ ಓದಿ: Kichcha Sudeep: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಮನೆಯಲ್ಲಿ ಕೊನೆಗೂ ಕೇಳ್ತು ಸುದೀಪ್​ ಧ್ವನಿ!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ