ಸುದೀಪ್​-ಪ್ರಿಯಾ ದಾಂಪತ್ಯಕ್ಕೆ 20 ವರ್ಷ; ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ವಿಶೇಷ ಕವನ

Sudeep Priya Wedding Anniversary: ಸುದೀಪ್​ ಮತ್ತು ಪ್ರಿಯಾ ಅವರ ವಿವಾಹ ವಾರ್ಷಿಕೋತ್ಸವದ ಸಲುವಾಗಿ ಆತ್ಮೀಯರು ಬರೆದ ಕವನವನ್ನು ಪ್ರಿಯಾ ಶೇರ್​ ಮಾಡಿಕೊಂಡಿದ್ದಾರೆ. ಇಂಗ್ಲಿಷ್​ನಲ್ಲಿರುವ ಆ ಕವನವನ್ನು ಸುದೀಪ್​ ಕೂಡ ಮೆಚ್ಚಿಕೊಂಡಿದ್ದಾರೆ.

ಸುದೀಪ್​-ಪ್ರಿಯಾ ದಾಂಪತ್ಯಕ್ಕೆ 20 ವರ್ಷ; ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ವಿಶೇಷ ಕವನ
ಪ್ರಿಯಾ - ಸುದೀಪ್​
Follow us
| Updated By: ಮದನ್​ ಕುಮಾರ್​

Updated on: Oct 19, 2021 | 3:46 PM

ನಟ ಕಿಚ್ಚ ಸುದೀಪ್​ ಅವರು ‘ಕೋಟಿಗೊಬ್ಬ 3’ ಚಿತ್ರದ ಗೆಲುವಿನ ಸಂಭ್ರಮದಲ್ಲಿದ್ದಾರೆ. ಅ.15ರಂದು ತೆರೆಕಂಡ ಈ ಚಿತ್ರಕ್ಕೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಇದರ ನಡುವೆ ಅವರ ಸಂತಸ ಹೆಚ್ಚಿಸಿದ ಮತ್ತೊಂದು ಸಂಗತಿ ಅಂದರೆ ಅದು ವಿವಾಹ ವಾರ್ಷಿಕೋತ್ಸವ. ಹೌದು, ಸುದೀಪ್​ ಮತ್ತು ಪ್ರಿಯಾ ದಾಂಪತ್ಯಕ್ಕೆ ಈಗ 20 ವರ್ಷ ತುಂಬಿದೆ. ಈ ಸಂಭ್ರಮವನ್ನು ಅವರು ಒಟ್ಟಾಗಿ ಆಚರಿಸಿದ್ದಾರೆ. ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಈ ಜೋಡಿಗೆ ವೆಡ್ಡಿಂಗ್​ ಆ್ಯನಿವರ್ಸರಿಯ ಶುಭಾಶಯ ಕೋರುತ್ತಿದ್ದಾರೆ.

ಸುದೀಪ್​ ಮತ್ತು ಪ್ರಿಯಾ ಅವರ ವಿವಾಹ ವಾರ್ಷಿಕೋತ್ಸವಕ್ಕೆ ಆತ್ಮೀಯರು ಬರೆದ ಕವನವನ್ನು ಪ್ರಿಯಾ ಶೇರ್​ ಮಾಡಿಕೊಂಡಿದ್ದಾರೆ. ಇಂಗ್ಲಿಷ್​ನಲ್ಲಿರುವ ಆ ಕವನವನ್ನು ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಕಿಚ್ಚ ಸುದೀಪ್​ ಮೆಚ್ಚುಗೆ ಸೂಚಿಸಿದ್ದಾರೆ.

‘ಈಗಾಗಲೇ 20 ವರ್ಷ ಆಯ್ತು. ಸಮಯ ತುಂಬ ಬೇಗ ಸಾಗುತ್ತಿದೆ. ಖುಷಿಯ 20 ವರ್ಷಗಳು. ಧನ್ಯವಾದಗಳು ಪ್ರಿಯಾ. ಈ ಪ್ರೀತಿಯ ಕವನಕ್ಕೂ ಧನ್ಯವಾದ’ ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ. ಪತ್ನಿಯ ಜೊತೆಗಿರುವ ಫೋಟೋವನ್ನು ಅವರು ಶೇರ್​ ಮಾಡಿಕೊಂಡಿದ್ದಾರೆ.

ಅಪ್ಪ-ಅಮ್ಮನ ವಿವಾಹ ವಾರ್ಷಿಕೋತ್ಸವಕ್ಕೆ ಮಗಳು ಸಾನ್ವಿ ಸುದೀಪ್​ ಕೂಡ ವಿಶ್​ ಮಾಡಿದ್ದಾರೆ. ವೆಡ್ಡಿಂಗ್​ ಆ್ಯನಿವರ್ಸರಿ ಸಂಭ್ರಮಕ್ಕೆ ಕೇಕ್​ ಕತ್ತರಿಸಲಾಗಿದೆ. ಆಪ್ತರ ಜೊತೆ ಸೇರಿ ಸಂಭ್ರಮಿಸಲಾಗಿದೆ. ಆ ಫೋಟೋಗಳನ್ನು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಳ್ಳುವ ಮೂಲಕ ತಂದೆ-ತಾಯಿಗೆ ಸಾನ್ವಿ ವಿಶ್​ ಮಾಡಿದ್ದಾರೆ. 2001ರ ಅಕ್ಟೋಬರ್​ನಲ್ಲಿ ಸುದೀಪ್​ ಮತ್ತು ಪ್ರಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಗೆ 2004ರಲ್ಲಿ ಸಾನ್ವಿ ಜನಿಸಿದರು. ಇವೆಂಟ್​ ಮ್ಯಾನೇಜ್​ಮೆಂಟ್​ ಕ್ಷೇತ್ರದಲ್ಲಿ ಪ್ರಿಯಾ ಸಕ್ರಿಯರಾಗಿದ್ದಾರೆ. ಪತಿಯ ಸಿನಿಮಾ ಜರ್ನಿಗೆ ಅವರು ಬೆಂಬಲವಾಗಿ ನಿಂತಿದ್ದಾರೆ.

‘ಕೋಟಿಗೊಬ್ಬ 3’ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿ ಅಭಿಮಾನಿಗಳನ್ನು ರಂಜಿಸುತ್ತಿದೆ. ಪ್ರೇಕ್ಷಕರಿಂದ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆರಂಭದಲ್ಲಿ ‘ಕೋಟಿಗೊಬ್ಬ 3’ ಬಿಡುಗಡೆಗೆ ವಿಘ್ನ ಎದುರಾಗಿತ್ತು. ವಿತರಕರು ಮತ್ತು ನಿರ್ಮಾಪಕರ ನಡುವೆ ಹಣಕಾಸಿನ ಕಿರಿಕ್​ ಉಂಟಾಗಿದ್ದರಿಂದ ಅ.14ರಂದು ರಿಲೀಸ್​ ಆಗಬೇಕಿದ್ದ ಚಿತ್ರ ಒಂದು ದಿನ ತಡವಾಗಿ (ಅ.15) ಬಿಡುಗಡೆ ಆಯಿತು.

ಇದನ್ನೂ ಓದಿ:

‘ಕೋಟಿಗೊಬ್ಬ 4’ ಮಾಡುವ ಬಗ್ಗೆ ಸೂರಪ್ಪ ಬಾಬು ಮಾತು; ಸುದೀಪ್​ ಅಭಿಮಾನಿಗಳೇ ಇಲ್ಲಿ ಕೇಳಿ

‘ಕೋಟಿಗೊಬ್ಬ 3’ ರಿಲೀಸ್​ ಮಾಡಬೇಡಿ ಅಂತ ಚಿತ್ರಮಂದಿರಕ್ಕೆ ಫೋನ್​ ಮಾಡಿದ್ರು: ಸುದೀಪ್​ ಸ್ಫೋಟಕ ಆರೋಪ

ತಾಜಾ ಸುದ್ದಿ
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು