AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕ್ರಿಕೆಟ್​ ಮಾತ್ರವಲ್ಲ, ಚೆಸ್​ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡಲು ರೆಡಿಯಾದ ಕಿಚ್ಚ ಸುದೀಪ್​

Viswanathan Anand: ಈ ಆಟದಲ್ಲಿ ವಿಶ್ವನಾಥನ್​ ಆನಂದ್​ ಜೊತೆ ಕಿಚ್ಚ ಸುದೀಪ್​ ಮಾತ್ರವಲ್ಲದೆ ಅನೇಕ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ. ಬಾಲಿವುಡ್​ ನಟ ಆಮೀರ್​ ಖಾನ್​ ಕೂಡ ವಿಶ್ವನಾಥನ್​​ ಆನಂದ್​ಗೆ​ ಪೈಪೋಟಿ ನೀಡಲಿದ್ದಾರೆ.

Kichcha Sudeep: ಕ್ರಿಕೆಟ್​ ಮಾತ್ರವಲ್ಲ, ಚೆಸ್​ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡಲು ರೆಡಿಯಾದ ಕಿಚ್ಚ ಸುದೀಪ್​
ಕಿಚ್ಚ ಸುದೀಪ್​, ವಿಶ್ವನಾಥನ್​ ಆನಂದ್​
ಮದನ್​ ಕುಮಾರ್​
| Edited By: |

Updated on:Jun 12, 2021 | 10:21 AM

Share

ಕಿಚ್ಚ ಸುದೀಪ್​ ಅವರದ್ದು ಬಹುಮುಖ ಪ್ರತಿಭೆ. ನಟನೆ, ನಿರ್ದೇಶನ, ಸಿನಿಮಾ ನಿರ್ಮಾಣ, ರಿಯಾಲಿಟಿ ಶೋ ನಿರೂಪಣೆ, ಅಡುಗೆ ಸೇರಿದಂತೆ ಹಲವು ವಿಷಯಗಳಲ್ಲಿ ಅವರು ಈಗಾಗಲೇ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಇನ್ನು, ಕ್ರೀಡೆಯಲ್ಲೂ ಅವರಿಗೆ ಇರುವ ಆಸಕ್ತಿ ಅಪಾರ. ವೃತ್ತಿಪರ ಕ್ರಿಕೆಟರ್​ಗಳ ಜೊತೆ ಅವರು ಮೈದಾನದಲ್ಲಿ ಕಾದಾಡಿದ್ದಾರೆ. ಸೆಲೆಬ್ರಿಟಿ ಕ್ರಿಕೆಟ್​ ಲೀಗ್​ನಲ್ಲಿ ಮಿಂಚಿದ್ದಾರೆ. ಅಷ್ಟೇ ಅಲ್ಲ, ಈಗ ಅವರು ಚೆಸ್​ನಲ್ಲಿ ಗಮನ ಸೆಳೆಯಲು ಸಜ್ಜಾಗಿದ್ದಾರೆ.

ಭಾರತೀಯರಿಗೆ ಚೆಸ್ ಎಂದ ತಕ್ಷಣ ನೆನಪಾಗುವುದು ವಿಶ್ವನಾಥನ್​ ಆನಂದ್​. 5 ಬಾರಿ ವರ್ಲ್ಡ್​ ಚಾಂಪಿಯನ್​ ಆದ ವಿಶ್ವನಾಥನ್​ ಆನಂದ್​ ಅವರ ಖ್ಯಾತಿ ದೊಡ್ಡದು. ಚೆಸ್​ನಲ್ಲಿ ಅವರಿಗೆ ಪೈಪೋಟಿ ನೀಡುವುದು ಎಂದರೆ ಸುಲಭದ ಮಾತಲ್ಲ. ಈಗ ಅವರ ಜೊತೆ ಕಿಚ್ಚ ಸುದೀಪ್​ ಸ್ಪರ್ಧೆ ನಡೆಸಲಿದ್ದಾರೆ! ಅದಕ್ಕಾಗಿ ಅಖಾಡ ಸಜ್ಜಾಗಿದೆ.

ಅರೆರೆ, ಇದೇನಿದು ಏಕಾಏಕಿ ಇಂಥ ಆಟ ಎಂದು ಅಭಿಮಾನಿಗಳ ಮನದಲ್ಲಿ ಪ್ರಶ್ನೆ ಮೂಡುವುದು ಸಹಜ. ಅದಕ್ಕೆ ಉತ್ತರವೂ ಇಲ್ಲಿದೆ. ವಿಶ್ವನಾಥನ್​ ಆನಂದ್​ ಜೊತೆ ಸುದೀಪ್​ ಚೆಸ್​ ಆಡಲಿರುವುದು ಒಂದು ಒಳ್ಳೆಯ ಉದ್ದೇಶಕ್ಕಾಗಿ. ಕೊವಿಡ್​ನಿಂದಾಗಿ ಇಡೀ ದೇಶವೇ ಕಷ್ಟದ ಪರಿಸ್ಥಿತಿಯಲ್ಲಿದೆ. ಕೊರೊನಾ ವಿರುದ್ಧ ಹೋರಾಡಲು ಹಣ ಸಂಗ್ರಹ ಮಾಡುವ ಸಲುವಾಗಿ ಈ ಆಟ ಆಯೋಜಿಸಲಾಗಿದೆ.

ಜೂ.13ರಂದು ಸಂಜೆ 5 ಗಂಟೆಗೆ ‘ಚೆಕ್​ಮೇಟ್​ ಕೊವಿಡ್​- ಸೆಲೆಬ್ರಿಟಿ ಎಡಿಷನ್​’ ಆರಂಭ ಆಗಲಿದೆ. ಇದರಲ್ಲಿ ವಿಶ್ವನಾಥನ್​ ಆನಂದ್​ ಜೊತೆ ಕಿಚ್ಚ ಸುದೀಪ್​ ಮಾತ್ರವಲ್ಲದೆ ಅನೇಕ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ. ಬಾಲಿವುಡ್​ ನಟ ಆಮೀರ್​ ಖಾನ್​ ಕೂಡ ವಿಶ್ವನಾಥನ್​​ ಆನಂದ್​ಗೆ​ ಪೈಪೋಟಿ ನೀಡಲಿದ್ದಾರೆ. ಆ ಮೂಲಕ ನಿಧಿ ಸಂಗ್ರಹ ಮಾಡಲು ಉದ್ದೇಶಿಸಲಾಗಿದೆ.

ಇಷ್ಟು ದಿನ ಕ್ರಿಕೆಟ್​ ಮೈದಾನದಲ್ಲಿ ಕಿಚ್ಚನ ಖದರ್​ ನೋಡಿದವರು ಈಗ ಚೆಸ್​ನಲ್ಲಿ ಅವರ ಪ್ರತಿಭೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ. ಅಕ್ಷಯ ಪಾತ್ರಾ ಫೌಂಡೇಶನ್​ ಹಾಗೂ ಚೆಸ್​ ಡಾಟ್​ ಕಾಮ್​ ಜೊತೆಯಾಗಿ ಈ ಆಟವನ್ನು ಆಯೋಜಿಸಿವೆ. Chess.com – India ಯೂಟ್ಯೂಬ್ ಚಾನೆಲ್​​ನಲ್ಲಿ ಆಟ ಪ್ರಸಾರ ಆಗಲಿದೆ.

ಇದನ್ನೂ ಓದಿ:

ಸುದೀಪ್​ಗೆ ಅಚ್ಚರಿ ಮೂಡಿಸಿದ ‘ವಿಕ್ರಾಂತ್​ ರೋಣ’ ಪೋಸ್ಟರ್​; ಚಿತ್ರತಂಡಕ್ಕೂ ಇದಕ್ಕೂ ಸಂಬಂಧವಿಲ್ಲ

ಅನ್ನ ಅಮೃತ’ ಕಾರ್ಯಕ್ರಮದ ಮೂಲಕ 1 ಸಾವಿರ ಜನರಿಗೆ ಕಿಚ್ಚ ಸುದೀಪ್​ ಕಡೆಯಿಂದ ದಿನಸಿ ಕಿಟ್

Published On - 8:08 am, Sat, 12 June 21

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ