Kichcha Sudeep: ಕ್ರಿಕೆಟ್​ ಮಾತ್ರವಲ್ಲ, ಚೆಸ್​ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡಲು ರೆಡಿಯಾದ ಕಿಚ್ಚ ಸುದೀಪ್​

Viswanathan Anand: ಈ ಆಟದಲ್ಲಿ ವಿಶ್ವನಾಥನ್​ ಆನಂದ್​ ಜೊತೆ ಕಿಚ್ಚ ಸುದೀಪ್​ ಮಾತ್ರವಲ್ಲದೆ ಅನೇಕ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ. ಬಾಲಿವುಡ್​ ನಟ ಆಮೀರ್​ ಖಾನ್​ ಕೂಡ ವಿಶ್ವನಾಥನ್​​ ಆನಂದ್​ಗೆ​ ಪೈಪೋಟಿ ನೀಡಲಿದ್ದಾರೆ.

Kichcha Sudeep: ಕ್ರಿಕೆಟ್​ ಮಾತ್ರವಲ್ಲ, ಚೆಸ್​ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡಲು ರೆಡಿಯಾದ ಕಿಚ್ಚ ಸುದೀಪ್​
ಕಿಚ್ಚ ಸುದೀಪ್​, ವಿಶ್ವನಾಥನ್​ ಆನಂದ್​
Follow us
| Updated By: Digi Tech Desk

Updated on:Jun 12, 2021 | 10:21 AM

ಕಿಚ್ಚ ಸುದೀಪ್​ ಅವರದ್ದು ಬಹುಮುಖ ಪ್ರತಿಭೆ. ನಟನೆ, ನಿರ್ದೇಶನ, ಸಿನಿಮಾ ನಿರ್ಮಾಣ, ರಿಯಾಲಿಟಿ ಶೋ ನಿರೂಪಣೆ, ಅಡುಗೆ ಸೇರಿದಂತೆ ಹಲವು ವಿಷಯಗಳಲ್ಲಿ ಅವರು ಈಗಾಗಲೇ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಇನ್ನು, ಕ್ರೀಡೆಯಲ್ಲೂ ಅವರಿಗೆ ಇರುವ ಆಸಕ್ತಿ ಅಪಾರ. ವೃತ್ತಿಪರ ಕ್ರಿಕೆಟರ್​ಗಳ ಜೊತೆ ಅವರು ಮೈದಾನದಲ್ಲಿ ಕಾದಾಡಿದ್ದಾರೆ. ಸೆಲೆಬ್ರಿಟಿ ಕ್ರಿಕೆಟ್​ ಲೀಗ್​ನಲ್ಲಿ ಮಿಂಚಿದ್ದಾರೆ. ಅಷ್ಟೇ ಅಲ್ಲ, ಈಗ ಅವರು ಚೆಸ್​ನಲ್ಲಿ ಗಮನ ಸೆಳೆಯಲು ಸಜ್ಜಾಗಿದ್ದಾರೆ.

ಭಾರತೀಯರಿಗೆ ಚೆಸ್ ಎಂದ ತಕ್ಷಣ ನೆನಪಾಗುವುದು ವಿಶ್ವನಾಥನ್​ ಆನಂದ್​. 5 ಬಾರಿ ವರ್ಲ್ಡ್​ ಚಾಂಪಿಯನ್​ ಆದ ವಿಶ್ವನಾಥನ್​ ಆನಂದ್​ ಅವರ ಖ್ಯಾತಿ ದೊಡ್ಡದು. ಚೆಸ್​ನಲ್ಲಿ ಅವರಿಗೆ ಪೈಪೋಟಿ ನೀಡುವುದು ಎಂದರೆ ಸುಲಭದ ಮಾತಲ್ಲ. ಈಗ ಅವರ ಜೊತೆ ಕಿಚ್ಚ ಸುದೀಪ್​ ಸ್ಪರ್ಧೆ ನಡೆಸಲಿದ್ದಾರೆ! ಅದಕ್ಕಾಗಿ ಅಖಾಡ ಸಜ್ಜಾಗಿದೆ.

ಅರೆರೆ, ಇದೇನಿದು ಏಕಾಏಕಿ ಇಂಥ ಆಟ ಎಂದು ಅಭಿಮಾನಿಗಳ ಮನದಲ್ಲಿ ಪ್ರಶ್ನೆ ಮೂಡುವುದು ಸಹಜ. ಅದಕ್ಕೆ ಉತ್ತರವೂ ಇಲ್ಲಿದೆ. ವಿಶ್ವನಾಥನ್​ ಆನಂದ್​ ಜೊತೆ ಸುದೀಪ್​ ಚೆಸ್​ ಆಡಲಿರುವುದು ಒಂದು ಒಳ್ಳೆಯ ಉದ್ದೇಶಕ್ಕಾಗಿ. ಕೊವಿಡ್​ನಿಂದಾಗಿ ಇಡೀ ದೇಶವೇ ಕಷ್ಟದ ಪರಿಸ್ಥಿತಿಯಲ್ಲಿದೆ. ಕೊರೊನಾ ವಿರುದ್ಧ ಹೋರಾಡಲು ಹಣ ಸಂಗ್ರಹ ಮಾಡುವ ಸಲುವಾಗಿ ಈ ಆಟ ಆಯೋಜಿಸಲಾಗಿದೆ.

ಜೂ.13ರಂದು ಸಂಜೆ 5 ಗಂಟೆಗೆ ‘ಚೆಕ್​ಮೇಟ್​ ಕೊವಿಡ್​- ಸೆಲೆಬ್ರಿಟಿ ಎಡಿಷನ್​’ ಆರಂಭ ಆಗಲಿದೆ. ಇದರಲ್ಲಿ ವಿಶ್ವನಾಥನ್​ ಆನಂದ್​ ಜೊತೆ ಕಿಚ್ಚ ಸುದೀಪ್​ ಮಾತ್ರವಲ್ಲದೆ ಅನೇಕ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ. ಬಾಲಿವುಡ್​ ನಟ ಆಮೀರ್​ ಖಾನ್​ ಕೂಡ ವಿಶ್ವನಾಥನ್​​ ಆನಂದ್​ಗೆ​ ಪೈಪೋಟಿ ನೀಡಲಿದ್ದಾರೆ. ಆ ಮೂಲಕ ನಿಧಿ ಸಂಗ್ರಹ ಮಾಡಲು ಉದ್ದೇಶಿಸಲಾಗಿದೆ.

ಇಷ್ಟು ದಿನ ಕ್ರಿಕೆಟ್​ ಮೈದಾನದಲ್ಲಿ ಕಿಚ್ಚನ ಖದರ್​ ನೋಡಿದವರು ಈಗ ಚೆಸ್​ನಲ್ಲಿ ಅವರ ಪ್ರತಿಭೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ. ಅಕ್ಷಯ ಪಾತ್ರಾ ಫೌಂಡೇಶನ್​ ಹಾಗೂ ಚೆಸ್​ ಡಾಟ್​ ಕಾಮ್​ ಜೊತೆಯಾಗಿ ಈ ಆಟವನ್ನು ಆಯೋಜಿಸಿವೆ. Chess.com – India ಯೂಟ್ಯೂಬ್ ಚಾನೆಲ್​​ನಲ್ಲಿ ಆಟ ಪ್ರಸಾರ ಆಗಲಿದೆ.

ಇದನ್ನೂ ಓದಿ:

ಸುದೀಪ್​ಗೆ ಅಚ್ಚರಿ ಮೂಡಿಸಿದ ‘ವಿಕ್ರಾಂತ್​ ರೋಣ’ ಪೋಸ್ಟರ್​; ಚಿತ್ರತಂಡಕ್ಕೂ ಇದಕ್ಕೂ ಸಂಬಂಧವಿಲ್ಲ

ಅನ್ನ ಅಮೃತ’ ಕಾರ್ಯಕ್ರಮದ ಮೂಲಕ 1 ಸಾವಿರ ಜನರಿಗೆ ಕಿಚ್ಚ ಸುದೀಪ್​ ಕಡೆಯಿಂದ ದಿನಸಿ ಕಿಟ್

Published On - 8:08 am, Sat, 12 June 21

ತಾಜಾ ಸುದ್ದಿ
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ