AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕ್ರಿಕೆಟ್​ ಮಾತ್ರವಲ್ಲ, ಚೆಸ್​ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡಲು ರೆಡಿಯಾದ ಕಿಚ್ಚ ಸುದೀಪ್​

Viswanathan Anand: ಈ ಆಟದಲ್ಲಿ ವಿಶ್ವನಾಥನ್​ ಆನಂದ್​ ಜೊತೆ ಕಿಚ್ಚ ಸುದೀಪ್​ ಮಾತ್ರವಲ್ಲದೆ ಅನೇಕ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ. ಬಾಲಿವುಡ್​ ನಟ ಆಮೀರ್​ ಖಾನ್​ ಕೂಡ ವಿಶ್ವನಾಥನ್​​ ಆನಂದ್​ಗೆ​ ಪೈಪೋಟಿ ನೀಡಲಿದ್ದಾರೆ.

Kichcha Sudeep: ಕ್ರಿಕೆಟ್​ ಮಾತ್ರವಲ್ಲ, ಚೆಸ್​ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡಲು ರೆಡಿಯಾದ ಕಿಚ್ಚ ಸುದೀಪ್​
ಕಿಚ್ಚ ಸುದೀಪ್​, ವಿಶ್ವನಾಥನ್​ ಆನಂದ್​
ಮದನ್​ ಕುಮಾರ್​
| Edited By: |

Updated on:Jun 12, 2021 | 10:21 AM

Share

ಕಿಚ್ಚ ಸುದೀಪ್​ ಅವರದ್ದು ಬಹುಮುಖ ಪ್ರತಿಭೆ. ನಟನೆ, ನಿರ್ದೇಶನ, ಸಿನಿಮಾ ನಿರ್ಮಾಣ, ರಿಯಾಲಿಟಿ ಶೋ ನಿರೂಪಣೆ, ಅಡುಗೆ ಸೇರಿದಂತೆ ಹಲವು ವಿಷಯಗಳಲ್ಲಿ ಅವರು ಈಗಾಗಲೇ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಇನ್ನು, ಕ್ರೀಡೆಯಲ್ಲೂ ಅವರಿಗೆ ಇರುವ ಆಸಕ್ತಿ ಅಪಾರ. ವೃತ್ತಿಪರ ಕ್ರಿಕೆಟರ್​ಗಳ ಜೊತೆ ಅವರು ಮೈದಾನದಲ್ಲಿ ಕಾದಾಡಿದ್ದಾರೆ. ಸೆಲೆಬ್ರಿಟಿ ಕ್ರಿಕೆಟ್​ ಲೀಗ್​ನಲ್ಲಿ ಮಿಂಚಿದ್ದಾರೆ. ಅಷ್ಟೇ ಅಲ್ಲ, ಈಗ ಅವರು ಚೆಸ್​ನಲ್ಲಿ ಗಮನ ಸೆಳೆಯಲು ಸಜ್ಜಾಗಿದ್ದಾರೆ.

ಭಾರತೀಯರಿಗೆ ಚೆಸ್ ಎಂದ ತಕ್ಷಣ ನೆನಪಾಗುವುದು ವಿಶ್ವನಾಥನ್​ ಆನಂದ್​. 5 ಬಾರಿ ವರ್ಲ್ಡ್​ ಚಾಂಪಿಯನ್​ ಆದ ವಿಶ್ವನಾಥನ್​ ಆನಂದ್​ ಅವರ ಖ್ಯಾತಿ ದೊಡ್ಡದು. ಚೆಸ್​ನಲ್ಲಿ ಅವರಿಗೆ ಪೈಪೋಟಿ ನೀಡುವುದು ಎಂದರೆ ಸುಲಭದ ಮಾತಲ್ಲ. ಈಗ ಅವರ ಜೊತೆ ಕಿಚ್ಚ ಸುದೀಪ್​ ಸ್ಪರ್ಧೆ ನಡೆಸಲಿದ್ದಾರೆ! ಅದಕ್ಕಾಗಿ ಅಖಾಡ ಸಜ್ಜಾಗಿದೆ.

ಅರೆರೆ, ಇದೇನಿದು ಏಕಾಏಕಿ ಇಂಥ ಆಟ ಎಂದು ಅಭಿಮಾನಿಗಳ ಮನದಲ್ಲಿ ಪ್ರಶ್ನೆ ಮೂಡುವುದು ಸಹಜ. ಅದಕ್ಕೆ ಉತ್ತರವೂ ಇಲ್ಲಿದೆ. ವಿಶ್ವನಾಥನ್​ ಆನಂದ್​ ಜೊತೆ ಸುದೀಪ್​ ಚೆಸ್​ ಆಡಲಿರುವುದು ಒಂದು ಒಳ್ಳೆಯ ಉದ್ದೇಶಕ್ಕಾಗಿ. ಕೊವಿಡ್​ನಿಂದಾಗಿ ಇಡೀ ದೇಶವೇ ಕಷ್ಟದ ಪರಿಸ್ಥಿತಿಯಲ್ಲಿದೆ. ಕೊರೊನಾ ವಿರುದ್ಧ ಹೋರಾಡಲು ಹಣ ಸಂಗ್ರಹ ಮಾಡುವ ಸಲುವಾಗಿ ಈ ಆಟ ಆಯೋಜಿಸಲಾಗಿದೆ.

ಜೂ.13ರಂದು ಸಂಜೆ 5 ಗಂಟೆಗೆ ‘ಚೆಕ್​ಮೇಟ್​ ಕೊವಿಡ್​- ಸೆಲೆಬ್ರಿಟಿ ಎಡಿಷನ್​’ ಆರಂಭ ಆಗಲಿದೆ. ಇದರಲ್ಲಿ ವಿಶ್ವನಾಥನ್​ ಆನಂದ್​ ಜೊತೆ ಕಿಚ್ಚ ಸುದೀಪ್​ ಮಾತ್ರವಲ್ಲದೆ ಅನೇಕ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ. ಬಾಲಿವುಡ್​ ನಟ ಆಮೀರ್​ ಖಾನ್​ ಕೂಡ ವಿಶ್ವನಾಥನ್​​ ಆನಂದ್​ಗೆ​ ಪೈಪೋಟಿ ನೀಡಲಿದ್ದಾರೆ. ಆ ಮೂಲಕ ನಿಧಿ ಸಂಗ್ರಹ ಮಾಡಲು ಉದ್ದೇಶಿಸಲಾಗಿದೆ.

ಇಷ್ಟು ದಿನ ಕ್ರಿಕೆಟ್​ ಮೈದಾನದಲ್ಲಿ ಕಿಚ್ಚನ ಖದರ್​ ನೋಡಿದವರು ಈಗ ಚೆಸ್​ನಲ್ಲಿ ಅವರ ಪ್ರತಿಭೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ. ಅಕ್ಷಯ ಪಾತ್ರಾ ಫೌಂಡೇಶನ್​ ಹಾಗೂ ಚೆಸ್​ ಡಾಟ್​ ಕಾಮ್​ ಜೊತೆಯಾಗಿ ಈ ಆಟವನ್ನು ಆಯೋಜಿಸಿವೆ. Chess.com – India ಯೂಟ್ಯೂಬ್ ಚಾನೆಲ್​​ನಲ್ಲಿ ಆಟ ಪ್ರಸಾರ ಆಗಲಿದೆ.

ಇದನ್ನೂ ಓದಿ:

ಸುದೀಪ್​ಗೆ ಅಚ್ಚರಿ ಮೂಡಿಸಿದ ‘ವಿಕ್ರಾಂತ್​ ರೋಣ’ ಪೋಸ್ಟರ್​; ಚಿತ್ರತಂಡಕ್ಕೂ ಇದಕ್ಕೂ ಸಂಬಂಧವಿಲ್ಲ

ಅನ್ನ ಅಮೃತ’ ಕಾರ್ಯಕ್ರಮದ ಮೂಲಕ 1 ಸಾವಿರ ಜನರಿಗೆ ಕಿಚ್ಚ ಸುದೀಪ್​ ಕಡೆಯಿಂದ ದಿನಸಿ ಕಿಟ್

Published On - 8:08 am, Sat, 12 June 21

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?