AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಂಗ್ ರಕ್ಕಮನ ಮೇಲೆ ಕೊಲೆ ಆರೋಪ ಇದೆ ಎಂಬುದನ್ನು ತಿಳಿಸಿಯೇ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಸುದೀಪ್​

Jacqueline Fernandez: ಕಳೆದ ತಿಂಗಳು ಗಡಂಗ್​ ರಕ್ಕಮ್ಮನ ಫಸ್ಟ್​ಲುಕ್​ ಬಿಡುಗಡೆ ಮಾಡಲಾಗಿತ್ತು. ಇಂದು (ಆ.11) ಬರ್ತ್​ಡೇ ಪ್ರಯುಕ್ತ ಚಿತ್ರತಂಡದ ಕಡೆಯಿಂದ ಹೊಸ ಪೋಸ್ಟರ್​ ಅನಾವರಣ ಮಾಡಲಾಗಿದೆ. ಜೊತೆಗೆ ಒಂದು ಸುಳಿವು ಬಿಟ್ಟುಕೊಡಲಾಗಿದೆ.

ಗಡಂಗ್ ರಕ್ಕಮನ ಮೇಲೆ ಕೊಲೆ ಆರೋಪ ಇದೆ ಎಂಬುದನ್ನು ತಿಳಿಸಿಯೇ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಸುದೀಪ್​
ಗಡಂಗ್ ರಕ್ಕಮನ ಮೇಲೆ ಕೊಲೆ ಆರೋಪ ಇದೆ ಎಂಬುದನ್ನು ತಿಳಿಸಿಯೇ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಸುದೀಪ್​
TV9 Web
| Edited By: |

Updated on: Aug 11, 2021 | 3:27 PM

Share

ಸ್ಯಾಂಡಲ್​ವುಡ್​ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ವಿಕ್ರಾಂತ್​ ರೋಣ’ ಚಿತ್ರ ಕೂಡ ಮುಂಚೂಣಿಯಲ್ಲಿದೆ. ಹಲವು ಕಾರಣಗಳಿಗಾಗಿ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ನಿರ್ದೇಶನ ಮಾಡುತ್ತಿರುವ ‘ವಿಕ್ರಾಂತ್​ ರೋಣ’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಲು ಪಾತ್ರವರ್ಗವೂ ಕಾರಣ ಆಗಿದೆ. ಈ ಸಿನಿಮಾದಲ್ಲಿ ಬಾಲಿವುಡ್​ ಬೆಡಗಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ನಟಿಸಿರುವುದು ವಿಶೇಷ. ಗಡಂಗ್​ ರಕ್ಕಮ್ಮ ಎಂಬ ಪಾತ್ರವನ್ನು ಅವರಿಗೆ ನೀಡಲಾಗಿದೆ. ಇಂದು (ಆ.11) ಜಾಕ್ವೆಲಿನ್​ ಫರ್ನಾಂಡಿಸ್​ಗೆ ಜನ್ಮದಿನದ ಸಂಭ್ರಮ. ಆ ಪ್ರಯುಕ್ತ ಅವರಿಗೆ ಕಿಚ್ಚ ಸುದೀಪ್​ ಶುಭಕೋರಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್​ ಅವರು ‘ವಿಕ್ರಾಂತ್​ ರೋಣ’ ಚಿತ್ರತಂಡಕ್ಕೆ ಕಾಲಿಟ್ಟಾಗಿನಿಂದ ಅವರಿಗೆ ಸುದೀಪ್​ ಮತ್ತು ಚಿತ್ರತಂಡದವರು ಭರ್ಜರಿ ಆತಿಥ್ಯವನ್ನೇ ನೀಡುತ್ತಿದ್ದಾರೆ. ಕಳೆದ ತಿಂಗಳು ರಕ್ಕಮ್ಮನ ಫಸ್ಟ್​ಲುಕ್​ ಬಿಡುಗಡೆ ಮಾಡಲಾಗಿತ್ತು. ಇಂದು ಬರ್ತ್​ಡೇ ಪ್ರಯುಕ್ತ ಚಿತ್ರತಂಡದ ಕಡೆಯಿಂದ ಹೊಸ ಪೋಸ್ಟರ್​ ಅನಾವರಣ ಮಾಡಲಾಗಿದೆ. ‘ನಿಮಗೆ ಸದಾ ಒಳ್ಳೆಯಾಗಲಿ ಎಂದು ಹಾರೈಸುತ್ತೇನೆ. ಹುಟ್ಟುಹಬ್ಬದ ಶುಭಾಶಯಗಳು’ ಎಂದು ಟ್ವೀಟ್​ ಮಾಡಿರುವ ಸುದೀಪ್ ಅವರು ಗಡಂಗ್​ ರಕ್ಕಮ್ಮ ಪಾತ್ರದ ಹೊಸ ಪೋಸ್ಟರ್​ ಅನ್ನು ಹಂಚಿಕೊಂಡಿದ್ದಾರೆ.

ಈ ಸಿನಿಮಾದಲ್ಲಿ ಜಾಕ್ವೆಲಿನ್​ ಅವರು ಕೇವಲ ಹಾಡಿನಲ್ಲಿ ಡ್ಯಾನ್ಸ್​ ಮಾಡಿ ಸುಮ್ಮನಾಗಿಲ್ಲ. ಅವರದ್ದು ಒಂದು ವಿಶೇಷ ಪಾತ್ರ. ಇಂದು ರಿಲೀಸ್​ ಮಾಡಿರುವ ಪೋಸ್ಟರ್​ನಲ್ಲಿ ಆ ಬಗ್ಗೆ ಸುಳಿವು ನೀಡಲಾಗಿದೆ. ಜಾಕ್ವೆಲಿನ್​ ಭಾವಚಿತ್ರದ ಪಕ್ಕದಲ್ಲಿ ಟಾರ್ಗೆಟ್​ ಮಾಡಿರುವ ರೀತಿ ಚಾಕು ಚುಚ್ಚಲಾಗಿದೆ. ಜೊತೆಗೆ ನ್ಯೂಸ್​ ಪೇಪರ್​ ಕಟ್ಟಿಂಗ್ಸ್​ ಇವೆ. ಅದರಲ್ಲಿ ಬಂದ ಸುದ್ದಿ ನೋಡಿದರೆ ಕಥೆಯ ಬಗ್ಗೆ ಇನ್ನಷ್ಟು ಕೌತುಕ ಮೂಡುತ್ತದೆ. ‘ಸ್ಥಳೀಯ ಸಾರಾಯಿ ಮಾರಾಟಗಾರ್ತಿ ಮೇಲೆ ಕೊಲೆ ಆರೋಪ. ಹೆಸರು: ರಾಕೆಲ್​ ಡಿಕೋಸ್ತಾ ಅಲಿಯಾಸ್​ ಗಡಂಗ್​ ರಕ್ಕಮ್ಮ. ಜನ್ಮ ದಿನಾಂಕ: 11 ಆಗಸ್ಟ್​ 1948’ ಎಂದು ಬರೆಯಲಾಗಿದೆ. ಅಂದರೆ ಈ ಸಿನಿಮಾದಲ್ಲಿ ಜಾಕ್ವೆಲಿನ್​ ಅವರು ಕೊಲೆ ಆರೋಪ ಹೊತ್ತ ಸಾರಾಯಿ ಮಾರಾಟಗಾರ್ತಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಖಚಿತ ಆದಂತಾಗಿದೆ.

ಇದನ್ನೂ ಓದಿ:

‘ವಿಕ್ರಾಂತ್​ ರೋಣ’ ಚಿತ್ರದ ನಟಿ ಜಾಕ್ವೆಲಿನ್​ ಹಾಟ್​ ಫೋಟೋ ವೈರಲ್​

ವಿಕ್ರಾಂತ್​ ರೋಣ ಚಿತ್ರದಲ್ಲಿ ಕಿಚ್ಚನ ಜೊತೆ ಕಿಚ್ಚು ಹೆಚ್ಚಿಸಿದ ಜಾಕ್ವೆಲಿನ್​ ಫರ್ನಾಂಡಿಸ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?