ಗಡಂಗ್ ರಕ್ಕಮನ ಮೇಲೆ ಕೊಲೆ ಆರೋಪ ಇದೆ ಎಂಬುದನ್ನು ತಿಳಿಸಿಯೇ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಸುದೀಪ್​

Jacqueline Fernandez: ಕಳೆದ ತಿಂಗಳು ಗಡಂಗ್​ ರಕ್ಕಮ್ಮನ ಫಸ್ಟ್​ಲುಕ್​ ಬಿಡುಗಡೆ ಮಾಡಲಾಗಿತ್ತು. ಇಂದು (ಆ.11) ಬರ್ತ್​ಡೇ ಪ್ರಯುಕ್ತ ಚಿತ್ರತಂಡದ ಕಡೆಯಿಂದ ಹೊಸ ಪೋಸ್ಟರ್​ ಅನಾವರಣ ಮಾಡಲಾಗಿದೆ. ಜೊತೆಗೆ ಒಂದು ಸುಳಿವು ಬಿಟ್ಟುಕೊಡಲಾಗಿದೆ.

ಗಡಂಗ್ ರಕ್ಕಮನ ಮೇಲೆ ಕೊಲೆ ಆರೋಪ ಇದೆ ಎಂಬುದನ್ನು ತಿಳಿಸಿಯೇ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಸುದೀಪ್​
ಗಡಂಗ್ ರಕ್ಕಮನ ಮೇಲೆ ಕೊಲೆ ಆರೋಪ ಇದೆ ಎಂಬುದನ್ನು ತಿಳಿಸಿಯೇ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಸುದೀಪ್​
Follow us
| Updated By: ಮದನ್​ ಕುಮಾರ್​

Updated on: Aug 11, 2021 | 3:27 PM

ಸ್ಯಾಂಡಲ್​ವುಡ್​ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ವಿಕ್ರಾಂತ್​ ರೋಣ’ ಚಿತ್ರ ಕೂಡ ಮುಂಚೂಣಿಯಲ್ಲಿದೆ. ಹಲವು ಕಾರಣಗಳಿಗಾಗಿ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ನಿರ್ದೇಶನ ಮಾಡುತ್ತಿರುವ ‘ವಿಕ್ರಾಂತ್​ ರೋಣ’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಲು ಪಾತ್ರವರ್ಗವೂ ಕಾರಣ ಆಗಿದೆ. ಈ ಸಿನಿಮಾದಲ್ಲಿ ಬಾಲಿವುಡ್​ ಬೆಡಗಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ನಟಿಸಿರುವುದು ವಿಶೇಷ. ಗಡಂಗ್​ ರಕ್ಕಮ್ಮ ಎಂಬ ಪಾತ್ರವನ್ನು ಅವರಿಗೆ ನೀಡಲಾಗಿದೆ. ಇಂದು (ಆ.11) ಜಾಕ್ವೆಲಿನ್​ ಫರ್ನಾಂಡಿಸ್​ಗೆ ಜನ್ಮದಿನದ ಸಂಭ್ರಮ. ಆ ಪ್ರಯುಕ್ತ ಅವರಿಗೆ ಕಿಚ್ಚ ಸುದೀಪ್​ ಶುಭಕೋರಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್​ ಅವರು ‘ವಿಕ್ರಾಂತ್​ ರೋಣ’ ಚಿತ್ರತಂಡಕ್ಕೆ ಕಾಲಿಟ್ಟಾಗಿನಿಂದ ಅವರಿಗೆ ಸುದೀಪ್​ ಮತ್ತು ಚಿತ್ರತಂಡದವರು ಭರ್ಜರಿ ಆತಿಥ್ಯವನ್ನೇ ನೀಡುತ್ತಿದ್ದಾರೆ. ಕಳೆದ ತಿಂಗಳು ರಕ್ಕಮ್ಮನ ಫಸ್ಟ್​ಲುಕ್​ ಬಿಡುಗಡೆ ಮಾಡಲಾಗಿತ್ತು. ಇಂದು ಬರ್ತ್​ಡೇ ಪ್ರಯುಕ್ತ ಚಿತ್ರತಂಡದ ಕಡೆಯಿಂದ ಹೊಸ ಪೋಸ್ಟರ್​ ಅನಾವರಣ ಮಾಡಲಾಗಿದೆ. ‘ನಿಮಗೆ ಸದಾ ಒಳ್ಳೆಯಾಗಲಿ ಎಂದು ಹಾರೈಸುತ್ತೇನೆ. ಹುಟ್ಟುಹಬ್ಬದ ಶುಭಾಶಯಗಳು’ ಎಂದು ಟ್ವೀಟ್​ ಮಾಡಿರುವ ಸುದೀಪ್ ಅವರು ಗಡಂಗ್​ ರಕ್ಕಮ್ಮ ಪಾತ್ರದ ಹೊಸ ಪೋಸ್ಟರ್​ ಅನ್ನು ಹಂಚಿಕೊಂಡಿದ್ದಾರೆ.

ಈ ಸಿನಿಮಾದಲ್ಲಿ ಜಾಕ್ವೆಲಿನ್​ ಅವರು ಕೇವಲ ಹಾಡಿನಲ್ಲಿ ಡ್ಯಾನ್ಸ್​ ಮಾಡಿ ಸುಮ್ಮನಾಗಿಲ್ಲ. ಅವರದ್ದು ಒಂದು ವಿಶೇಷ ಪಾತ್ರ. ಇಂದು ರಿಲೀಸ್​ ಮಾಡಿರುವ ಪೋಸ್ಟರ್​ನಲ್ಲಿ ಆ ಬಗ್ಗೆ ಸುಳಿವು ನೀಡಲಾಗಿದೆ. ಜಾಕ್ವೆಲಿನ್​ ಭಾವಚಿತ್ರದ ಪಕ್ಕದಲ್ಲಿ ಟಾರ್ಗೆಟ್​ ಮಾಡಿರುವ ರೀತಿ ಚಾಕು ಚುಚ್ಚಲಾಗಿದೆ. ಜೊತೆಗೆ ನ್ಯೂಸ್​ ಪೇಪರ್​ ಕಟ್ಟಿಂಗ್ಸ್​ ಇವೆ. ಅದರಲ್ಲಿ ಬಂದ ಸುದ್ದಿ ನೋಡಿದರೆ ಕಥೆಯ ಬಗ್ಗೆ ಇನ್ನಷ್ಟು ಕೌತುಕ ಮೂಡುತ್ತದೆ. ‘ಸ್ಥಳೀಯ ಸಾರಾಯಿ ಮಾರಾಟಗಾರ್ತಿ ಮೇಲೆ ಕೊಲೆ ಆರೋಪ. ಹೆಸರು: ರಾಕೆಲ್​ ಡಿಕೋಸ್ತಾ ಅಲಿಯಾಸ್​ ಗಡಂಗ್​ ರಕ್ಕಮ್ಮ. ಜನ್ಮ ದಿನಾಂಕ: 11 ಆಗಸ್ಟ್​ 1948’ ಎಂದು ಬರೆಯಲಾಗಿದೆ. ಅಂದರೆ ಈ ಸಿನಿಮಾದಲ್ಲಿ ಜಾಕ್ವೆಲಿನ್​ ಅವರು ಕೊಲೆ ಆರೋಪ ಹೊತ್ತ ಸಾರಾಯಿ ಮಾರಾಟಗಾರ್ತಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಖಚಿತ ಆದಂತಾಗಿದೆ.

ಇದನ್ನೂ ಓದಿ:

‘ವಿಕ್ರಾಂತ್​ ರೋಣ’ ಚಿತ್ರದ ನಟಿ ಜಾಕ್ವೆಲಿನ್​ ಹಾಟ್​ ಫೋಟೋ ವೈರಲ್​

ವಿಕ್ರಾಂತ್​ ರೋಣ ಚಿತ್ರದಲ್ಲಿ ಕಿಚ್ಚನ ಜೊತೆ ಕಿಚ್ಚು ಹೆಚ್ಚಿಸಿದ ಜಾಕ್ವೆಲಿನ್​ ಫರ್ನಾಂಡಿಸ್

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ