AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಕಿಚ್ಚ ಸುದೀಪ್, ಪತ್ರದಲ್ಲೇನಿದೆ?

Kichcha Sudeep: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ನಾಗರೀಕರು ಒಗ್ಗಟ್ಟಿನಿಂದ ಭಾರತೀಯ ಸೇನೆಯ ಪರ ನಿಂತಿದ್ದಾರೆ. ಇದೀಗ ನಟ ಸುದೀಪ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಮೋದಿ ಅವರ ನಾಯಕತ್ವವನ್ನು ಕೊಂಡಾಡಿದ್ದಾರೆ. ಮೋದಿ ಅವರು ಈ ಹಿಂದೆ ತಮಗೆ ಬರೆದ ಪತ್ರದ ಬಗ್ಗೆಯೂ ಸುದೀಪ್ ಉಲ್ಲೇಖ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಕಿಚ್ಚ ಸುದೀಪ್, ಪತ್ರದಲ್ಲೇನಿದೆ?
Narendra Modi
ಮಂಜುನಾಥ ಸಿ.
|

Updated on: May 10, 2025 | 3:58 PM

Share

ನಟ ಕಿಚ್ಚ ಸುದೀಪ್ (Sudeep) ರಾಜ್ಯ ಮತ್ತು ರಾಷ್ಟ್ರದ ವಿಷಯಗಳ ಬಗ್ಗೆ ದನಿ ಎತ್ತುತ್ತಲೇ ಬಂದಿದ್ದಾರೆ. ಅಗತ್ಯ ಬಿದ್ದಾಗ ಪ್ರತಿಭಟಿಸಿದ್ದಾರೆ. ಒಳ್ಳೆಯ ಕಾರ್ಯಗಳನ್ನು ಕೊಂಡಾಡಿದ್ದಾರೆ. ಕಳೆದ ತಿಂಗಳು ಪಹಲ್ಗಾಮ್ ದಾಳಿ ಆಗಿದ್ದಾಗ ಗಟ್ಟಿ ಧ್ವನಿಯಲ್ಲಿ ದಾಳಿಯನ್ನು ಖಂಡಿಸಿದ್ದ ಸುದೀಪ್, ಆ ಬಳಿಕ ಭಾರತ ಸೇನೆ ಮಾಡಿದ್ದ ಆಪರೇಷನ್ ಸಿಂಧೂರ್ ಅನ್ನು ಕೊಂಡಾಡಿದ್ದರು. ನಾವು ಸೈನ್ಯದ ಪರ ಇರುವುದಾಗಿ ಹೇಳಿದ್ದರು. ಇದೀಗ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣ ಆಗಿರುವ ಸಮಯದಲ್ಲಿ ಸುದೀಪ್, ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಮೋದಿಯವರು ಈ ಹಿಂದೆ ತಮಗೆ ಬರೆದಿದ್ದ ಪತ್ರದ ಉಲ್ಲೇಖವನ್ನೂ ಸಹ ಮಾಡಿದ್ದಾರೆ.

‘ನನ್ನ ತಾಯಿ ಸರೋಜಾ ಸಂಜೀವ್ ಅವರು ನಿಧನರಾದಾಗ ನೀವು ಬರೆದ ಪತ್ರ, ವೈಯಕ್ತಿಕ ನಷ್ಟದ ಆ ಕಠಿಣ ಸಮಯದಲ್ಲಿ ನನಗೆ ಶಕ್ತಿ, ಧೈರ್ಯವನ್ನು ತುಂಬಿತ್ತು. ಅದು ನನಗೆ ಜೀವನ ಪರ್ಯಂತ ನೆನಪು ಉಳಿಯಲಿವೆ. ಇಂದು ನಾನು ಈ ಪತ್ರವನ್ನು ಕೇವಲ ಒಬ್ಬ ಮಗನಾಗಿ ಬರೆಯುತ್ತಿಲ್ಲ ಬದಲಿಗೆ ದೇಶದ ನಾಗರೀಕನಾಗಿ ಬರೆಯುತ್ತಿದ್ದೇನೆ, ಆಪರೇಷನ್ ಸಿಂಧೂರ್‌ನ ವಿಜಯೋತ್ಸವಕ್ಕೆ ರಾಷ್ಟ್ರವೇ ನಮಿಸಿದೆ. ನಾನು ನಿಮಗೆ ಆಳವಾದ ಅಭಿಮಾನದಿಂದ ಬರೆಯುತ್ತೇನೆ. ಆಪರೇಷನ್ ಸಿಂಧೂರ್ ಕೇವಲ ಪ್ರತಿಕ್ರಿಯೆಯಾಗಿರಲಿಲ್ಲ, ಅದೊಂದು ಹೇಳಿಕೆಯಾಗಿತ್ತು. ಭಾರತವು ಅಲುಗಾಡುವುದಿಲ್ಲ, ಭಾರತವು ಮರೆಯುವುದಿಲ್ಲ ಮತ್ತು ಭಾರತವು ಯಾವಾಗಲೂ ಉದಯಿಸುತ್ತದೆ ಎಂಬ ದಿಟ್ಟ, ನಿರ್ಣಾಯಕ ಸಂದೇಶವನ್ನು ಜಗತ್ತಿಗೆ ನೀಡಿದೆ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ:ಮದುವೆ ವಿಚಾರದಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತಿನಂತೆ ನಡೆದುಕೊಂಡ ಚೈತ್ರಾ ಕುಂದಾಪುರ

ನಿಮ್ಮಲ್ಲಿ, ನಾವು ಕೇವಲ ಪದಗಳಿಂದ ಮಾರ್ಗದರ್ಶನ ಮಾಡದ ನಾಯಕನನ್ನು ನೋಡುತ್ತೇವೆ, ಆದರೆ ದೃಢವಿಶ್ವಾಸದಿಂದ. ಈ ಕಾರ್ಯಾಚರಣೆಯನ್ನು ನಡೆಸಿದ ಸ್ಪಷ್ಟತೆ ಮತ್ತು ಆತ್ಮವಿಶ್ವಾಸವು ನಮ್ಮ ನಾಗರಿಕತೆಯ ಆತ್ಮವನ್ನು ಪ್ರತಿಬಿಂಬಿಸುತ್ತದೆ, ಅದು ಯಾವಾಗಲೂ ನಿರ್ಭೀತ, ಧಾರ್ವಿುಕ ಮತ್ತು ದೃಢನಿಶ್ಚಯವನ್ನು ಹೊಂದಿದೆ. ಪ್ರತಿಯೊಬ್ಬ ಕನ್ನಡಿಗ ಮತ್ತು ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗೆ ಗಟ್ಟಿಯಾಗಿ ನಿಂತಿದೆ. ನಿಮ್ಮ ಧೈರ್ಯದಿಂದ ನಾವು ಸ್ಫೂರ್ತಿ ಪಡೆಯುತ್ತೇವೆ’ ಎಂದಿದ್ದಾರೆ ಸುದೀಪ್.

ನಿಮ್ಮ ನಾಯಕತ್ವದಲ್ಲಿ, ನಮ್ಮ ರಕ್ಷಣಾ ಪಡೆಗಳು ಸಾಟಿಯಿಲ್ಲದ ನಿಖರತೆ, ಶಿಸ್ತು ಮತ್ತು ಶೌರ್ಯವನ್ನು ಪ್ರದರ್ಶಿಸಿವೆ. ಅವರ ಯಶಸ್ಸು ನಮ್ಮ ಹೆಮ್ಮೆ. ನಾವು ಒಗ್ಗಟಿನಲ್ಲಿದ್ದೇನೆ, ಒಂದು ಧ್ವನಿ, ಒಂದು ರಾಷ್ಟ್ರವಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ. ಜೈ ಹಿಂದ್. ಜೈ ಕರ್ನಾಟಕ. ಜೈ ಭಾರತ್’ ಎಂದಿದ್ದಾರೆ ನಟ ಸುದೀಪ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್