AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಲ್ಲ ರಂಗ ಬಾಷಾ’ ಚಿತ್ರಕ್ಕೆ ಮುಹೂರ್ತ ಫಿಕ್ಸ್; ನಡೆದಿದೆ ದೊಡ್ಡ ಪ್ಲ್ಯಾನ್

ಕಿಚ್ಚ ಸುದೀಪ್ ಅವರು 'ಬಿಲ್ಲ ರಂಗ ಬಾಷಾ' ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಈ ಚಿತ್ರದ ಶೂಟಿಂಗ್ ಮಾರ್ಚ್ ಮೂರನೇ ವಾರದಲ್ಲಿ ಆರಂಭವಾಗುವ ನಿರೀಕ್ಷೆಯಿದೆ. ಅನೂಪ್ ಭಂಡಾರಿ ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕಾಗಿ ಬೃಹತ್ ಸೆಟ್ ನಿರ್ಮಾಣ ಮಾಡಲಾಗಿದ್ದು, 8 ಎಕರೆ ಜಾಗದಲ್ಲಿ ವಿದೇಶಿ ಶೈಲಿಯ ಸೆಟ್‌ಗಳನ್ನು ನಿರ್ಮಿಸಲಾಗಿದೆ.

‘ಬಿಲ್ಲ ರಂಗ ಬಾಷಾ’ ಚಿತ್ರಕ್ಕೆ ಮುಹೂರ್ತ ಫಿಕ್ಸ್; ನಡೆದಿದೆ ದೊಡ್ಡ ಪ್ಲ್ಯಾನ್
ಸುದೀಪ್-ಅನುಪ್
Malatesh Jaggin
| Edited By: |

Updated on: Feb 05, 2025 | 2:29 PM

Share

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಹಿಟ್ ಆಗಿದೆ. ಈಗ ಅವರು ಬಿಗ್ ಬಾಸ್ ಆ್ಯಂಕರಿಂಗ್ ಕೂಡ ಪೂರ್ಣಗೊಳಿಸಿದ್ದು, ಶೀಘ್ರವೇ ಅವರು ‘ಬಿಲ್ಲ ರಂಗ ಬಾಷಾ’ ಚಿತ್ರದ ಕೆಲಸಗಳಲ್ಲಿ ಶೀಘ್ರವೇ ತೊಡಗಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ ಅನೂಪ್ ಭಂಡಾರಿ ನಿರ್ದೇಶನ ಮಾಡುತ್ತಿದ್ದು, ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಒಂದನ್ನು ನೀಡಲಾಗಿದೆ.

ಕಿಚ್ಚ ಸುದೀಪ್ ಹಾಗೂ ಅನೂಪ್ ಈ ಮೊದಲು ‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇದಾದ ಬಳಿಕ ‘ಬಿಲ್ಲ ರಂಗ ಬಾಷಾ’ ಚಿತ್ರದ ಕೆಲಸಗಳಲ್ಲಿ ಇವರು ತೊಡಗಿಕೊಳ್ಳಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಿನಿಮಾದ ಕೆಲಸ ವಿಳಂಬ ಆಗಿದೆ. ಈಗ ಸುದೀಪ್ ಅವರು ಈ ಚಿತ್ರದ ಶೂಟ್​ನಲ್ಲಿ ಭಾಗಿ ಆಗಲು ರೆಡಿ ಆಗುತ್ತಿದ್ದಾರೆ.

ಕಿಚ್ಚ ಸುದೀಪ್ ಅವರು ‘ಸಿಸಿಎಲ್​’ ಬ್ಯುಸಿ ಇದ್ದಾರೆ. ಅವರು ‘ಕರ್ನಾಟಕ ಬುಲ್ಡೋಜರ್ಸ್’ ಪರ ಆಟ ಆಡುತ್ತಿದ್ದಾರೆ. ಹಲವು ಹಂತಗಳಲ್ಲಿ ಪಂದ್ಯಗಳು ನಡೆಯಲಿವೆ. ಮುಂದಿನ ಕೆಲ ವಾರ ಸುದೀಪ್ ಸಿಸಿಎಲ್​ನಲ್ಲಿ ಬ್ಯುಸಿ ಇರಲಿದ್ದಾರೆ. ಆ ಬಳಿಕ ‘ಬಿಲ್ಲ ರಂಗ ಬಾಷಾ’ ಸಿನಿಮಾ ಕೆಲಸಗಳಲ್ಲಿ ಸುದೀಪ್ ತೊಡಗಿಕೊಳ್ಳಲಿದ್ದಾರೆ.

ಇದನ್ನೂ ಓದಿ: ‘ಬಿಲ್ಲ ರಂಗ ಬಾಷಾ’ ಚಿತ್ರ ಅನೌನ್ಸ್; ಇದು 2209ರಲ್ಲಿ ನಡೆಯೋ ಕಥೆ

ಅದ್ದೂರಿ ವೆಚ್ಚದ ಸೆಟ್​

‘ಬಿಲ್ಲ ರಂಗ ಬಾಷಾ’ ಚಿತ್ರಕ್ಕಾಗಿ ಅದ್ದೂರಿ ವೆಚ್ಚದ ಸೆಟ್ ನಿರ್ಮಾಣ ಮಾಡಲಾಗುತ್ತಿದೆ. ಬೆಂಗಳೂರಿನ ನೈಸ್ ರಸ್ತೆಯ ಬಳಿ ಯುಐ ಸೆಟ್ ಹಾಕಲಾಗಿತ್ತು. ಇದೇ ಜಾಗದಲ್ಲಿ ‘ಬಿಲ್ಲ ರಂಗ ಬಾಷಾ’ ಸೆಟ್ ಹಾಕಲಾಗಿತ್ತು.  8 ಎಕರೆ ಜಾಗದಲ್ಲಿ ವಿದೇಶಿ ರಸ್ತೆಗಳ ಸೆಟ್​ ತಲೆ ಎತ್ತುತ್ತಿದೆ. ಕಲಾ ನಿರ್ದೇಶಕ ಶಿವಕುಮಾರ್ ಸೆಟ್ ಹಾಕುವ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಐದು ದೊಡ್ಡ ಸೆಟ್​

‘ಬಿಲ್ಲ ರಂಗ ಬಾಷಾ’ ಚಿತ್ರದ ಶೇ. 70ರಷ್ಟು ಶೂಟ್ ಸೆಟ್​ನಲ್ಲೇ ಸಾಗಲಿದೆ. ನಾಲ್ಕರಿಂದ ಐದು ಬಿಗ್ ಬಜೆಟ್​ ಸೆಟ್ ಮಾಡಲು ಪ್ಲ್ಯಾನ್ ನಡೆದಿದೆ.  ಮಾರ್ಚ್ ಮೂರನೇ ವಾರದಿಂದ ಬಿಲ್ಲ ರಂಗ ಬಾಷಾ ಶೂಟಿಂಗ್ ಆರಂಭ ಆಗುವ ಸಾಧ್ಯತೆ ಇದೆ. ಸುದೀಪ್ ಅವರು ಇದಕ್ಕಾಗಿ ದಪ್ಪ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Malatesh Jaggin
Malatesh Jaggin
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು