‘ಬಿಲ್ಲ ರಂಗ ಬಾಷಾ’ ಚಿತ್ರಕ್ಕೆ ಮುಹೂರ್ತ ಫಿಕ್ಸ್; ನಡೆದಿದೆ ದೊಡ್ಡ ಪ್ಲ್ಯಾನ್

ಕಿಚ್ಚ ಸುದೀಪ್ ಅವರು 'ಬಿಲ್ಲ ರಂಗ ಬಾಷಾ' ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಈ ಚಿತ್ರದ ಶೂಟಿಂಗ್ ಮಾರ್ಚ್ ಮೂರನೇ ವಾರದಲ್ಲಿ ಆರಂಭವಾಗುವ ನಿರೀಕ್ಷೆಯಿದೆ. ಅನೂಪ್ ಭಂಡಾರಿ ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕಾಗಿ ಬೃಹತ್ ಸೆಟ್ ನಿರ್ಮಾಣ ಮಾಡಲಾಗಿದ್ದು, 8 ಎಕರೆ ಜಾಗದಲ್ಲಿ ವಿದೇಶಿ ಶೈಲಿಯ ಸೆಟ್‌ಗಳನ್ನು ನಿರ್ಮಿಸಲಾಗಿದೆ.

‘ಬಿಲ್ಲ ರಂಗ ಬಾಷಾ’ ಚಿತ್ರಕ್ಕೆ ಮುಹೂರ್ತ ಫಿಕ್ಸ್; ನಡೆದಿದೆ ದೊಡ್ಡ ಪ್ಲ್ಯಾನ್
ಸುದೀಪ್-ಅನುಪ್
Follow us
Malatesh Jaggin
| Updated By: ರಾಜೇಶ್ ದುಗ್ಗುಮನೆ

Updated on: Feb 05, 2025 | 2:29 PM

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಹಿಟ್ ಆಗಿದೆ. ಈಗ ಅವರು ಬಿಗ್ ಬಾಸ್ ಆ್ಯಂಕರಿಂಗ್ ಕೂಡ ಪೂರ್ಣಗೊಳಿಸಿದ್ದು, ಶೀಘ್ರವೇ ಅವರು ‘ಬಿಲ್ಲ ರಂಗ ಬಾಷಾ’ ಚಿತ್ರದ ಕೆಲಸಗಳಲ್ಲಿ ಶೀಘ್ರವೇ ತೊಡಗಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ ಅನೂಪ್ ಭಂಡಾರಿ ನಿರ್ದೇಶನ ಮಾಡುತ್ತಿದ್ದು, ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಒಂದನ್ನು ನೀಡಲಾಗಿದೆ.

ಕಿಚ್ಚ ಸುದೀಪ್ ಹಾಗೂ ಅನೂಪ್ ಈ ಮೊದಲು ‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇದಾದ ಬಳಿಕ ‘ಬಿಲ್ಲ ರಂಗ ಬಾಷಾ’ ಚಿತ್ರದ ಕೆಲಸಗಳಲ್ಲಿ ಇವರು ತೊಡಗಿಕೊಳ್ಳಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಿನಿಮಾದ ಕೆಲಸ ವಿಳಂಬ ಆಗಿದೆ. ಈಗ ಸುದೀಪ್ ಅವರು ಈ ಚಿತ್ರದ ಶೂಟ್​ನಲ್ಲಿ ಭಾಗಿ ಆಗಲು ರೆಡಿ ಆಗುತ್ತಿದ್ದಾರೆ.

ಕಿಚ್ಚ ಸುದೀಪ್ ಅವರು ‘ಸಿಸಿಎಲ್​’ ಬ್ಯುಸಿ ಇದ್ದಾರೆ. ಅವರು ‘ಕರ್ನಾಟಕ ಬುಲ್ಡೋಜರ್ಸ್’ ಪರ ಆಟ ಆಡುತ್ತಿದ್ದಾರೆ. ಹಲವು ಹಂತಗಳಲ್ಲಿ ಪಂದ್ಯಗಳು ನಡೆಯಲಿವೆ. ಮುಂದಿನ ಕೆಲ ವಾರ ಸುದೀಪ್ ಸಿಸಿಎಲ್​ನಲ್ಲಿ ಬ್ಯುಸಿ ಇರಲಿದ್ದಾರೆ. ಆ ಬಳಿಕ ‘ಬಿಲ್ಲ ರಂಗ ಬಾಷಾ’ ಸಿನಿಮಾ ಕೆಲಸಗಳಲ್ಲಿ ಸುದೀಪ್ ತೊಡಗಿಕೊಳ್ಳಲಿದ್ದಾರೆ.

ಇದನ್ನೂ ಓದಿ: ‘ಬಿಲ್ಲ ರಂಗ ಬಾಷಾ’ ಚಿತ್ರ ಅನೌನ್ಸ್; ಇದು 2209ರಲ್ಲಿ ನಡೆಯೋ ಕಥೆ

ಅದ್ದೂರಿ ವೆಚ್ಚದ ಸೆಟ್​

‘ಬಿಲ್ಲ ರಂಗ ಬಾಷಾ’ ಚಿತ್ರಕ್ಕಾಗಿ ಅದ್ದೂರಿ ವೆಚ್ಚದ ಸೆಟ್ ನಿರ್ಮಾಣ ಮಾಡಲಾಗುತ್ತಿದೆ. ಬೆಂಗಳೂರಿನ ನೈಸ್ ರಸ್ತೆಯ ಬಳಿ ಯುಐ ಸೆಟ್ ಹಾಕಲಾಗಿತ್ತು. ಇದೇ ಜಾಗದಲ್ಲಿ ‘ಬಿಲ್ಲ ರಂಗ ಬಾಷಾ’ ಸೆಟ್ ಹಾಕಲಾಗಿತ್ತು.  8 ಎಕರೆ ಜಾಗದಲ್ಲಿ ವಿದೇಶಿ ರಸ್ತೆಗಳ ಸೆಟ್​ ತಲೆ ಎತ್ತುತ್ತಿದೆ. ಕಲಾ ನಿರ್ದೇಶಕ ಶಿವಕುಮಾರ್ ಸೆಟ್ ಹಾಕುವ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಐದು ದೊಡ್ಡ ಸೆಟ್​

‘ಬಿಲ್ಲ ರಂಗ ಬಾಷಾ’ ಚಿತ್ರದ ಶೇ. 70ರಷ್ಟು ಶೂಟ್ ಸೆಟ್​ನಲ್ಲೇ ಸಾಗಲಿದೆ. ನಾಲ್ಕರಿಂದ ಐದು ಬಿಗ್ ಬಜೆಟ್​ ಸೆಟ್ ಮಾಡಲು ಪ್ಲ್ಯಾನ್ ನಡೆದಿದೆ.  ಮಾರ್ಚ್ ಮೂರನೇ ವಾರದಿಂದ ಬಿಲ್ಲ ರಂಗ ಬಾಷಾ ಶೂಟಿಂಗ್ ಆರಂಭ ಆಗುವ ಸಾಧ್ಯತೆ ಇದೆ. ಸುದೀಪ್ ಅವರು ಇದಕ್ಕಾಗಿ ದಪ್ಪ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ನಾಯಕರ ಭೇಟಿ ಬಳಿಕ ಶಾಸಕ ಯತ್ನಾಳ್​ ಹೇಳಿದ್ದಿಷ್ಟು
ದೆಹಲಿ ನಾಯಕರ ಭೇಟಿ ಬಳಿಕ ಶಾಸಕ ಯತ್ನಾಳ್​ ಹೇಳಿದ್ದಿಷ್ಟು
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್