AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಲೈಫ್ ನಿಧಾನ ಎನಿಸುತ್ತಿದೆಯೇ? ಸುದೀಪ್ ಹೇಳಿದ ಈ ಜೀವನ ಪಾಠ ಕೇಳಿ

ಕಿಚ್ಚ ಸುದೀಪ್ ಅವರ ಜನ್ಮದಿನದಂದು, ಅವರ ಅಭಿಮಾನಿಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ. ಸುದೀಪ್ ಅವರು ರಾಕ್‌ಲೈನ್ ವೆಂಕಟೇಶ್ ಅವರನ್ನು ತಮ್ಮ ಫೇವರಿಟ್ ನಿರ್ಮಾಪಕ ಎಂದು ಹೇಳಿಕೊಂಡಿದ್ದಾರೆ. ಏಕೆಂದರೆ ವೆಂಕಟೇಶ್ ಅವರು ಯಶಸ್ಸು ಅಥವಾ ವಿಫಲತೆಯಲ್ಲಿ ಯಾರನ್ನೂ ದೂಷಿಸುವುದಿಲ್ಲ. ಆ ಬಗ್ಗೆ ಇಲ್ಲಿದೆ ವಿವರ.

ನಿಮ್ಮ ಲೈಫ್ ನಿಧಾನ ಎನಿಸುತ್ತಿದೆಯೇ? ಸುದೀಪ್ ಹೇಳಿದ ಈ ಜೀವನ ಪಾಠ ಕೇಳಿ
ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 02, 2025 | 6:00 AM

Share

ಕಿಚ್ಚ ಸುದೀಪ್ (Sudeep) ಅವರಿಗೆ ಇಂದು (ಸೆಪ್ಟೆಂಬರ್ 2) ಜನ್ಮದಿನ. ಅವರಿಗೆ ಅಭಿಮಾನಿಗಳು ಶುಭಾಶಯ ಕೋರುತ್ತಾ ಇದ್ದಾರೆ. ಸುದೀಪ್ ಅವರ ಬರ್ತ್​ಡೇ ಸೆಲೆಬ್ರೇಷನ್ ಸೆಪ್ಟೆಂಬರ್ 1ರಂದೇ ನಡೆದಿದೆ. ಈ ಮಧ್ಯೆ ಸುದೀಪ್ ಅವರಿಗೆ ಓರ್ವ ನಿರ್ಮಾಪಕ ಸಖತ್ ವಿಶೇಷ ಹಾಗೂ ಫೇವರಿಟ್​. ಈ ಬಗ್ಗೆ ಅವರು ಈ ಮೊದಲಿನ ಸಂದರ್ಶನ ಒಂದರಲ್ಲಿ ಹೇಳಿಕೊಂಡಿದ್ದರು. ಇದೇ ವೇಳೆ ಅವರು ಜೀವನ ಪಾಠ ಕೂಡ ಮಾಡಿದ್ದರು. ಆ ಬಗ್ಗೆ ಇಲ್ಲಿದೆ ವಿವರ.

ಕೆಲವು ನಿರ್ಮಾಪಕರು ಸಿನಿಮಾ ಸೋತ ಬಳಿಕ ಅದರ ಹೊಣೆಯನ್ನು ನಿರ್ದೇಶಕರು ಹಾಗೂ ಹೀರೋಗಳ ಮೇಲೆ ಹಾಕಿರೋದನ್ನು ಕಾಣಬಹುದು. ಆದರೆ, ರಾಕ್​​ಲೈನ್ ವೆಂಕಟೇಶ್ ಅವರು ಆ ರೀತಿ ಯಾವಾಗಲೂ ಮಾಡಿಲ್ಲ ಎಂಬುದು ಸುದೀಪ್ ಮಾತು. ಈ ಕಾರಣದಿಂದಲೇ ರಾಕ್​ಲೈನ್ ವೆಂಕಟೇಶ್ ಯಾವಾಗಲೂ ಸುದೀಪ್​ಗೆ ಇಷ್ಟ ಆಗುತ್ತಾರೆ. ಈ ಮೊದಲು ಅವರ ಆ ಬಗ್ಗೆ ಹೇಳಿಕೊಂಡಿದ್ದರು.

‘ರಾಕ್​ಲೈನ್ ಅವರು ಸಿನಿಮಾ ಗೆದ್ದ ಮಾತ್ರಕ್ಕೆ ಹೀರೋನ ತಲೆಯಮೇಲೆ ಕೂರಿಸಿಕೊಂಡಿಲ್ಲ. ಸಿನಿಮಾ ಸೋತರೆ ಅವರು ಯಾರನ್ನೂ ಬೈಯಲ್ಲ. ಕಥೆ ಕೇಳುವಾಗ ನಾವೂ ಇದ್ದೆವಲ್ಲ, ಹೋಗಲಿ ಬಿಡಿ ಅಂತ ಹೇಳ್ತಾರೆ. ಈ ವಿಚಾರವನ್ನು ನಾವು ಕಲಿಯಬೇಕು’ ಎಂದು ಸುದೀಪ್ ಅವರು ಈ ಮೊದಲು ಹೇಳಿದ್ದರು.

‘ಗೆದ್ದವನು ಸೋಲೋಕು ರೆಡಿ ಇರಬೇಕು. ಗೆಲ್ತಾ ಇರ್ತೀನಿ ಅನ್ನೋದು ಭ್ರಮೆ. ಸೋತವನು ಎದ್ದೇಳೆಲ್ಲ ಎಂಬ ನಂಬಿಕೆ ಇದ್ದರೆ ಅಂತಹ ಮುಟ್ಟಾಳತನ ಮತ್ತೊಂದು ಇಲ್ಲ. ಎಣ್ಣೆ, ಬಾಳೆಣ್ಣು  ಸಿಪ್ಪೆ ಹಾಕಿದ್ದನ್ನು ನೋಡಿದ ಮೇಲೂ ಹೋಗಿ ಜಾರಿ ಬಿದ್ದಿದ್ದು ನಿನ್ನ ತಪ್ಪು. ಮಲಗಿದ್ಮೇಳೆ ಎದ್ದೇ ಏಳ್ತೀರಾ. ಬೀಳೋದನ್ನು ವಿಶ್ರಾಂತಿ ಎಂದುಕೊಳ್ಳಿ. ನಿಮ್ಮ ಜೀವನ ಚೆನ್ನಾಗಿದ್ದರೆ ಅದೇ ಸಾಕಲ್ವ’ ಎಂದಿದ್ದರು ಸುದೀಪ್.

ಇದನ್ನೂ ಓದಿ: K 47: ‘ಯಾವುದೇ ಸಿನಿಮಾ ಇದ್ರೂ ಸರಿ, ನಮ್ಮ ಚಿತ್ರ ಕ್ರಿಸ್​ಮಸ್​​ಗೆ ಬರೋದು ಪಕ್ಕಾ’; ಸುದೀಪ್

‘ಹಣಕಾಸಿಗೆ ಕೈ ಚಾಚ್ತಾ ಇಲ್ಲ, ದೇವರು ಆರೋಗ್ಯ ಕೊಟ್ಟಿದ್ದಾನೆ. ಸಾಲ ಮಾಡಿಲ್ಲ. ಬ್ಯಾಂಕ್ ಲೋನ್ ತಲೆಯಮೇಲೆ ಇಲ್ಲ. ಅಡುಗೆ ಮಾಡೋಕೆ ಪದಾರ್ಥ ಕಡಿಮೆ ಆಗಿಲ್ಲ ಎಂದಮೇಲೆ ಚಿಂತೆ ಏಕೆ? ಬೇರೆಯವರ ಸ್ಪೀಡ್​ನಿಂದ ನಿಮ್ಮ ಜೀವನ ಸ್ಲೋ ಎನಿಸಿರಬಹುದು ಅಷ್ಟೇ. ಎಲ್ಲವೂ ನಮ್ಮ ಮೇಲೆ ಡಿಪೆಂಡ್ ಆಗಬೇಕು’ ಎಂದಿದ್ದರು ಸುದೀಪ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?