AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಲೈಫ್ ನಿಧಾನ ಎನಿಸುತ್ತಿದೆಯೇ? ಸುದೀಪ್ ಹೇಳಿದ ಈ ಜೀವನ ಪಾಠ ಕೇಳಿ

ಕಿಚ್ಚ ಸುದೀಪ್ ಅವರ ಜನ್ಮದಿನದಂದು, ಅವರ ಅಭಿಮಾನಿಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ. ಸುದೀಪ್ ಅವರು ರಾಕ್‌ಲೈನ್ ವೆಂಕಟೇಶ್ ಅವರನ್ನು ತಮ್ಮ ಫೇವರಿಟ್ ನಿರ್ಮಾಪಕ ಎಂದು ಹೇಳಿಕೊಂಡಿದ್ದಾರೆ. ಏಕೆಂದರೆ ವೆಂಕಟೇಶ್ ಅವರು ಯಶಸ್ಸು ಅಥವಾ ವಿಫಲತೆಯಲ್ಲಿ ಯಾರನ್ನೂ ದೂಷಿಸುವುದಿಲ್ಲ. ಆ ಬಗ್ಗೆ ಇಲ್ಲಿದೆ ವಿವರ.

ನಿಮ್ಮ ಲೈಫ್ ನಿಧಾನ ಎನಿಸುತ್ತಿದೆಯೇ? ಸುದೀಪ್ ಹೇಳಿದ ಈ ಜೀವನ ಪಾಠ ಕೇಳಿ
ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 02, 2025 | 6:00 AM

Share

ಕಿಚ್ಚ ಸುದೀಪ್ (Sudeep) ಅವರಿಗೆ ಇಂದು (ಸೆಪ್ಟೆಂಬರ್ 2) ಜನ್ಮದಿನ. ಅವರಿಗೆ ಅಭಿಮಾನಿಗಳು ಶುಭಾಶಯ ಕೋರುತ್ತಾ ಇದ್ದಾರೆ. ಸುದೀಪ್ ಅವರ ಬರ್ತ್​ಡೇ ಸೆಲೆಬ್ರೇಷನ್ ಸೆಪ್ಟೆಂಬರ್ 1ರಂದೇ ನಡೆದಿದೆ. ಈ ಮಧ್ಯೆ ಸುದೀಪ್ ಅವರಿಗೆ ಓರ್ವ ನಿರ್ಮಾಪಕ ಸಖತ್ ವಿಶೇಷ ಹಾಗೂ ಫೇವರಿಟ್​. ಈ ಬಗ್ಗೆ ಅವರು ಈ ಮೊದಲಿನ ಸಂದರ್ಶನ ಒಂದರಲ್ಲಿ ಹೇಳಿಕೊಂಡಿದ್ದರು. ಇದೇ ವೇಳೆ ಅವರು ಜೀವನ ಪಾಠ ಕೂಡ ಮಾಡಿದ್ದರು. ಆ ಬಗ್ಗೆ ಇಲ್ಲಿದೆ ವಿವರ.

ಕೆಲವು ನಿರ್ಮಾಪಕರು ಸಿನಿಮಾ ಸೋತ ಬಳಿಕ ಅದರ ಹೊಣೆಯನ್ನು ನಿರ್ದೇಶಕರು ಹಾಗೂ ಹೀರೋಗಳ ಮೇಲೆ ಹಾಕಿರೋದನ್ನು ಕಾಣಬಹುದು. ಆದರೆ, ರಾಕ್​​ಲೈನ್ ವೆಂಕಟೇಶ್ ಅವರು ಆ ರೀತಿ ಯಾವಾಗಲೂ ಮಾಡಿಲ್ಲ ಎಂಬುದು ಸುದೀಪ್ ಮಾತು. ಈ ಕಾರಣದಿಂದಲೇ ರಾಕ್​ಲೈನ್ ವೆಂಕಟೇಶ್ ಯಾವಾಗಲೂ ಸುದೀಪ್​ಗೆ ಇಷ್ಟ ಆಗುತ್ತಾರೆ. ಈ ಮೊದಲು ಅವರ ಆ ಬಗ್ಗೆ ಹೇಳಿಕೊಂಡಿದ್ದರು.

‘ರಾಕ್​ಲೈನ್ ಅವರು ಸಿನಿಮಾ ಗೆದ್ದ ಮಾತ್ರಕ್ಕೆ ಹೀರೋನ ತಲೆಯಮೇಲೆ ಕೂರಿಸಿಕೊಂಡಿಲ್ಲ. ಸಿನಿಮಾ ಸೋತರೆ ಅವರು ಯಾರನ್ನೂ ಬೈಯಲ್ಲ. ಕಥೆ ಕೇಳುವಾಗ ನಾವೂ ಇದ್ದೆವಲ್ಲ, ಹೋಗಲಿ ಬಿಡಿ ಅಂತ ಹೇಳ್ತಾರೆ. ಈ ವಿಚಾರವನ್ನು ನಾವು ಕಲಿಯಬೇಕು’ ಎಂದು ಸುದೀಪ್ ಅವರು ಈ ಮೊದಲು ಹೇಳಿದ್ದರು.

‘ಗೆದ್ದವನು ಸೋಲೋಕು ರೆಡಿ ಇರಬೇಕು. ಗೆಲ್ತಾ ಇರ್ತೀನಿ ಅನ್ನೋದು ಭ್ರಮೆ. ಸೋತವನು ಎದ್ದೇಳೆಲ್ಲ ಎಂಬ ನಂಬಿಕೆ ಇದ್ದರೆ ಅಂತಹ ಮುಟ್ಟಾಳತನ ಮತ್ತೊಂದು ಇಲ್ಲ. ಎಣ್ಣೆ, ಬಾಳೆಣ್ಣು  ಸಿಪ್ಪೆ ಹಾಕಿದ್ದನ್ನು ನೋಡಿದ ಮೇಲೂ ಹೋಗಿ ಜಾರಿ ಬಿದ್ದಿದ್ದು ನಿನ್ನ ತಪ್ಪು. ಮಲಗಿದ್ಮೇಳೆ ಎದ್ದೇ ಏಳ್ತೀರಾ. ಬೀಳೋದನ್ನು ವಿಶ್ರಾಂತಿ ಎಂದುಕೊಳ್ಳಿ. ನಿಮ್ಮ ಜೀವನ ಚೆನ್ನಾಗಿದ್ದರೆ ಅದೇ ಸಾಕಲ್ವ’ ಎಂದಿದ್ದರು ಸುದೀಪ್.

ಇದನ್ನೂ ಓದಿ: K 47: ‘ಯಾವುದೇ ಸಿನಿಮಾ ಇದ್ರೂ ಸರಿ, ನಮ್ಮ ಚಿತ್ರ ಕ್ರಿಸ್​ಮಸ್​​ಗೆ ಬರೋದು ಪಕ್ಕಾ’; ಸುದೀಪ್

‘ಹಣಕಾಸಿಗೆ ಕೈ ಚಾಚ್ತಾ ಇಲ್ಲ, ದೇವರು ಆರೋಗ್ಯ ಕೊಟ್ಟಿದ್ದಾನೆ. ಸಾಲ ಮಾಡಿಲ್ಲ. ಬ್ಯಾಂಕ್ ಲೋನ್ ತಲೆಯಮೇಲೆ ಇಲ್ಲ. ಅಡುಗೆ ಮಾಡೋಕೆ ಪದಾರ್ಥ ಕಡಿಮೆ ಆಗಿಲ್ಲ ಎಂದಮೇಲೆ ಚಿಂತೆ ಏಕೆ? ಬೇರೆಯವರ ಸ್ಪೀಡ್​ನಿಂದ ನಿಮ್ಮ ಜೀವನ ಸ್ಲೋ ಎನಿಸಿರಬಹುದು ಅಷ್ಟೇ. ಎಲ್ಲವೂ ನಮ್ಮ ಮೇಲೆ ಡಿಪೆಂಡ್ ಆಗಬೇಕು’ ಎಂದಿದ್ದರು ಸುದೀಪ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ