AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಲೈಫ್ ನಿಧಾನ ಎನಿಸುತ್ತಿದೆಯೇ? ಸುದೀಪ್ ಹೇಳಿದ ಈ ಜೀವನ ಪಾಠ ಕೇಳಿ

ಕಿಚ್ಚ ಸುದೀಪ್ ಅವರ ಜನ್ಮದಿನದಂದು, ಅವರ ಅಭಿಮಾನಿಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ. ಸುದೀಪ್ ಅವರು ರಾಕ್‌ಲೈನ್ ವೆಂಕಟೇಶ್ ಅವರನ್ನು ತಮ್ಮ ಫೇವರಿಟ್ ನಿರ್ಮಾಪಕ ಎಂದು ಹೇಳಿಕೊಂಡಿದ್ದಾರೆ. ಏಕೆಂದರೆ ವೆಂಕಟೇಶ್ ಅವರು ಯಶಸ್ಸು ಅಥವಾ ವಿಫಲತೆಯಲ್ಲಿ ಯಾರನ್ನೂ ದೂಷಿಸುವುದಿಲ್ಲ. ಆ ಬಗ್ಗೆ ಇಲ್ಲಿದೆ ವಿವರ.

ನಿಮ್ಮ ಲೈಫ್ ನಿಧಾನ ಎನಿಸುತ್ತಿದೆಯೇ? ಸುದೀಪ್ ಹೇಳಿದ ಈ ಜೀವನ ಪಾಠ ಕೇಳಿ
ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 02, 2025 | 6:00 AM

Share

ಕಿಚ್ಚ ಸುದೀಪ್ (Sudeep) ಅವರಿಗೆ ಇಂದು (ಸೆಪ್ಟೆಂಬರ್ 2) ಜನ್ಮದಿನ. ಅವರಿಗೆ ಅಭಿಮಾನಿಗಳು ಶುಭಾಶಯ ಕೋರುತ್ತಾ ಇದ್ದಾರೆ. ಸುದೀಪ್ ಅವರ ಬರ್ತ್​ಡೇ ಸೆಲೆಬ್ರೇಷನ್ ಸೆಪ್ಟೆಂಬರ್ 1ರಂದೇ ನಡೆದಿದೆ. ಈ ಮಧ್ಯೆ ಸುದೀಪ್ ಅವರಿಗೆ ಓರ್ವ ನಿರ್ಮಾಪಕ ಸಖತ್ ವಿಶೇಷ ಹಾಗೂ ಫೇವರಿಟ್​. ಈ ಬಗ್ಗೆ ಅವರು ಈ ಮೊದಲಿನ ಸಂದರ್ಶನ ಒಂದರಲ್ಲಿ ಹೇಳಿಕೊಂಡಿದ್ದರು. ಇದೇ ವೇಳೆ ಅವರು ಜೀವನ ಪಾಠ ಕೂಡ ಮಾಡಿದ್ದರು. ಆ ಬಗ್ಗೆ ಇಲ್ಲಿದೆ ವಿವರ.

ಕೆಲವು ನಿರ್ಮಾಪಕರು ಸಿನಿಮಾ ಸೋತ ಬಳಿಕ ಅದರ ಹೊಣೆಯನ್ನು ನಿರ್ದೇಶಕರು ಹಾಗೂ ಹೀರೋಗಳ ಮೇಲೆ ಹಾಕಿರೋದನ್ನು ಕಾಣಬಹುದು. ಆದರೆ, ರಾಕ್​​ಲೈನ್ ವೆಂಕಟೇಶ್ ಅವರು ಆ ರೀತಿ ಯಾವಾಗಲೂ ಮಾಡಿಲ್ಲ ಎಂಬುದು ಸುದೀಪ್ ಮಾತು. ಈ ಕಾರಣದಿಂದಲೇ ರಾಕ್​ಲೈನ್ ವೆಂಕಟೇಶ್ ಯಾವಾಗಲೂ ಸುದೀಪ್​ಗೆ ಇಷ್ಟ ಆಗುತ್ತಾರೆ. ಈ ಮೊದಲು ಅವರ ಆ ಬಗ್ಗೆ ಹೇಳಿಕೊಂಡಿದ್ದರು.

‘ರಾಕ್​ಲೈನ್ ಅವರು ಸಿನಿಮಾ ಗೆದ್ದ ಮಾತ್ರಕ್ಕೆ ಹೀರೋನ ತಲೆಯಮೇಲೆ ಕೂರಿಸಿಕೊಂಡಿಲ್ಲ. ಸಿನಿಮಾ ಸೋತರೆ ಅವರು ಯಾರನ್ನೂ ಬೈಯಲ್ಲ. ಕಥೆ ಕೇಳುವಾಗ ನಾವೂ ಇದ್ದೆವಲ್ಲ, ಹೋಗಲಿ ಬಿಡಿ ಅಂತ ಹೇಳ್ತಾರೆ. ಈ ವಿಚಾರವನ್ನು ನಾವು ಕಲಿಯಬೇಕು’ ಎಂದು ಸುದೀಪ್ ಅವರು ಈ ಮೊದಲು ಹೇಳಿದ್ದರು.

‘ಗೆದ್ದವನು ಸೋಲೋಕು ರೆಡಿ ಇರಬೇಕು. ಗೆಲ್ತಾ ಇರ್ತೀನಿ ಅನ್ನೋದು ಭ್ರಮೆ. ಸೋತವನು ಎದ್ದೇಳೆಲ್ಲ ಎಂಬ ನಂಬಿಕೆ ಇದ್ದರೆ ಅಂತಹ ಮುಟ್ಟಾಳತನ ಮತ್ತೊಂದು ಇಲ್ಲ. ಎಣ್ಣೆ, ಬಾಳೆಣ್ಣು  ಸಿಪ್ಪೆ ಹಾಕಿದ್ದನ್ನು ನೋಡಿದ ಮೇಲೂ ಹೋಗಿ ಜಾರಿ ಬಿದ್ದಿದ್ದು ನಿನ್ನ ತಪ್ಪು. ಮಲಗಿದ್ಮೇಳೆ ಎದ್ದೇ ಏಳ್ತೀರಾ. ಬೀಳೋದನ್ನು ವಿಶ್ರಾಂತಿ ಎಂದುಕೊಳ್ಳಿ. ನಿಮ್ಮ ಜೀವನ ಚೆನ್ನಾಗಿದ್ದರೆ ಅದೇ ಸಾಕಲ್ವ’ ಎಂದಿದ್ದರು ಸುದೀಪ್.

ಇದನ್ನೂ ಓದಿ: K 47: ‘ಯಾವುದೇ ಸಿನಿಮಾ ಇದ್ರೂ ಸರಿ, ನಮ್ಮ ಚಿತ್ರ ಕ್ರಿಸ್​ಮಸ್​​ಗೆ ಬರೋದು ಪಕ್ಕಾ’; ಸುದೀಪ್

‘ಹಣಕಾಸಿಗೆ ಕೈ ಚಾಚ್ತಾ ಇಲ್ಲ, ದೇವರು ಆರೋಗ್ಯ ಕೊಟ್ಟಿದ್ದಾನೆ. ಸಾಲ ಮಾಡಿಲ್ಲ. ಬ್ಯಾಂಕ್ ಲೋನ್ ತಲೆಯಮೇಲೆ ಇಲ್ಲ. ಅಡುಗೆ ಮಾಡೋಕೆ ಪದಾರ್ಥ ಕಡಿಮೆ ಆಗಿಲ್ಲ ಎಂದಮೇಲೆ ಚಿಂತೆ ಏಕೆ? ಬೇರೆಯವರ ಸ್ಪೀಡ್​ನಿಂದ ನಿಮ್ಮ ಜೀವನ ಸ್ಲೋ ಎನಿಸಿರಬಹುದು ಅಷ್ಟೇ. ಎಲ್ಲವೂ ನಮ್ಮ ಮೇಲೆ ಡಿಪೆಂಡ್ ಆಗಬೇಕು’ ಎಂದಿದ್ದರು ಸುದೀಪ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ