AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

K 47: ‘ಯಾವುದೇ ಸಿನಿಮಾ ಇದ್ರೂ ಸರಿ, ನಮ್ಮ ಚಿತ್ರ ಕ್ರಿಸ್​ಮಸ್​​ಗೆ ಬರೋದು ಪಕ್ಕಾ’; ಸುದೀಪ್

ಕಿಚ್ಚ ಸುದೀಪ್ ಅವರ 'K47' ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸಿನಿಮಾ ಶೂಟ್ ಅಕ್ಟೋಬರ್‌ನಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ನವೆಂಬರ್​​ನಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಲಿವೆ ಮತ್ತು ಚಿತ್ರವು ಕ್ರಿಸ್‌ಮಸ್‌ಗೆ ಬಿಡುಗಡೆಯಾಗಲಿದೆ. ಈ ಚಿತ್ರದ ಬಿಡುಗಡೆ ದಿನಾಂಕವು 'ಡೆವಿಲ್' ಮತ್ತು '45' ಚಿತ್ರದ ಜೊತೆ ಕ್ಲ್ಯಾಶ್ ಆಗಲಿದೆ.

K 47: ‘ಯಾವುದೇ ಸಿನಿಮಾ ಇದ್ರೂ ಸರಿ, ನಮ್ಮ ಚಿತ್ರ ಕ್ರಿಸ್​ಮಸ್​​ಗೆ ಬರೋದು ಪಕ್ಕಾ’; ಸುದೀಪ್
ದರ್ಶನ್, ಸುದೀಪ್,45
ರಾಜೇಶ್ ದುಗ್ಗುಮನೆ
|

Updated on: Sep 01, 2025 | 2:37 PM

Share

ಕಿಚ್ಚ ಸುದೀಪ್ ನಟನೆಯ ‘K 47’ ಸಿನಿಮಾದ ಶೂಟ್ ಜುಲೈನಲ್ಲಿ ಆರಂಭ ಆಗಿದೆ. ಈ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಕೇವಲ ಆರು ತಿಂಗಳಲ್ಲಿ ಸಿನಿಮಾ ಕೆಲಸ ಮುಗಿಸಿ ಜನರ ಎದುರು ತಂದಿಡೋ ಪ್ಲ್ಯಾನ್ ಇದೆ ಎಂದು ಸುದೀಪ್ (Sudeep) ಅವರು ಸಿನಿಮಾ ಘೋಷಿಸೋ ಸಮಯದಲ್ಲಿ ಹೇಳಿದ್ದರು. ಈಗಲೂ ತಮ್ಮ ಮಾತಿಗೆ ಬದ್ಧರಾಗಿರೋದಾಗಿ ಅವರು ಹೇಳಿದ್ದಾರೆ. ಹಾಗಾದಲ್ಲಿ, ‘ಡೆವಿಲ್’ ಹಾಗೂ ‘45’ ಚಿತ್ರದ ಜೊತೆ ಈ ಸಿನಿಮಾ ಕ್ಲ್ಯಾಶ್ ಆಗಲಿದೆ.

ಸೆಪ್ಟೆಂಬರ್ 2ರಂದು ಸುದೀಪ್ ಬರ್ತ್​ಡೇ ಇದೆ. ಅದಕ್ಕೂ ಒಂದು ದಿನ ಮೊದಲು (ಸೆಪ್ಟೆಂಬರ್ 1) ಸೆಲೆಬ್ರೇಷನ್ ಮಾಡಲು ಸುದೀಪ್ ನಿರ್ಧರಿಸಿದ್ದಾರೆ. ಬೆಂಗಳೂರಿನ ನಂದಿ ಲಿಂಕ್​ ಗ್ರೌಂಡ್ಸ್​​ನಲ್ಲಿ ರಾತ್ರಿ ಸೆಲೆಬ್ರೇಷನ್ ಇರಲಿದೆ. ಮಧ್ಯಾಹ್ನ ಸುದೀಪ್ ಅವರು ಬರ್ತ್​ಡೇ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳನ್ನು ಹಂಚಿಕೊಂಡರು. ‘ಕೆ 47’ ಬಗ್ಗೆಯೂ ಅಪ್​ಡೇಟ್ ಕೊಟ್ಟರು.

‘ನಾವು ವೇಗವಾಗಿ ಶೂಟಿಂಗ್ ಮಾಡುತ್ತಿದ್ದೇವೆ. ಈಗಾಗಲೇ ಸಿನಿಮಾದ 60ರಷ್ಟು ಶೂಟ್ ಪೂರ್ಣಗೊಂಡಿದೆ. ಅಕ್ಟೋಬರ್ ವೇಳೆಗೆ ಸಿನಿಮಾದ ಶೂಟ್ ಪೂರ್ಣಗೊಳ್ಳಲಿದೆ. ನವೆಂಬರ್​​ನಲ್ಲಿ​ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯಲಿದೆ. ಇದಾದ ಬಳಿಕ ನಾನು ಬಿಲ್ಲ ರಂಗ ಬಾಷ ಸಿನಿಮಾದಲ್ಲಿ ತೊಡಗಿಕೊಳ್ಳಲಿದ್ದೇನೆ. ಕ್ರಿಸ್​ಮಸ್​ಗೆ ಕೆ 47 ಬಂದೇ ಬರುತ್ತದೆ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ
Image
‘ನನ್ನ ಗೇಲಿ ಮಾಡುವುದರಿಂದ ನಿಮಗೆ ಊಟ ಸಿಗುತ್ತಿದೆ ಎಂದರೆ ಖುಷಿ’; ಸಲ್ಮಾನ್
Image
‘ಸು ಫ್ರಮ್ ಸೋ ಅಬ್ಬರ’; 38ನೇ ದಿನ ದೊಡ್ಡ ಮೊತ್ತ ಬಾಚಿದ ಸಿನಿಮಾ
Image
‘ಕಡಿಮೆ ಬೆಲೆ ಎಂದು ಮುಸ್ಲಿಮರು ಗೋಮಾಂಸ ಸೇವಿಸುತ್ತಾರೆ, ನಾನು ತಿಂದೇ ಇಲ್ಲ’
Image
ಗರ್ಲ್​ಫ್ರೆಂಡ್​ಗೆ ಮನೆ ಕೊಟ್ಟು ಬಾಡಿಗೆ ಪಡೆದ ಹೃತಿಕ್ ರೋಷನ್

‘ಡೆವಿಲ್’ ಹಾಗೂ ‘45’ ಕೂಡ ಇದೇ ಸಂದರ್ಭದಲ್ಲಿ ರಿಲೀಸ್ ಆಗಲಿದೆ. ಇದು ಸೆಲೆಬ್ರೇಷನ್ನೋ ಅಥವಾ ಕಾಂಪಿಟೇಷನ್ನೋ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ನೀವು ಇದನ್ನು ಕಾಂಪಿಟೇಷನ್ ಎಂದಾದರೂ ತೆಗೆದುಕೊಳ್ಳಬಹುದು, ಸೆಲೆಬ್ರೇಷನ್ ಎಂದಾದರೂ ತೆಗೆದುಕೊಳ್ಳಬಹುದು. ನಾವು ಸಿನಿಮಾ ಮಾತ್ರ ಮಾಡುತ್ತಿದ್ದೇವೆ. ನನ್ನ ನಿರ್ಮಾಪಕರಿಗೆ, ನನ್ನ ಥಿಯೇಟರ್​ಗೆ, ನನ್ನ ಅಭಿಮಾನಿಗಳಿಗಾಗಿ ಸಿನಿಮಾ ಮಾಡುತ್ತಿದ್ದೇನೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಬರ್ತ್​​ಡೇಗೂ ಮೊದಲು ಪ್ರೆಸ್​ಮೀಟ್ ಮಾಡಿದ ಸುದೀಪ್; ಇಲ್ಲಿದೆ ಲೈವ್

‘ನಾನು ಜುಲೈ 5ರಂದೇ ನನ್ನ ಸಿನಿಮಾ ರಿಲೀಸ್ ಘೋಷಣೆ ಮಾಡಿದ್ದೆ. ಹೀಗಿರುವಾಗ, ಆ ಸಮಯದಲ್ಲಿ ಯಾವೆಲ್ಲ ಸಿನಿಮಾಗಳು ಘೋಷಣೆ ಆಗಿದ್ದವು ಎಂಬುದನ್ನು ನೋಡಿದರೆ ಗೊತ್ತಾಗಿ ಬಿಡುತ್ತದೆ. ನಾನು ಆ ಬಗ್ಗೆ ಹೆಚ್ಚು ಯೋಚಿಸಲ್ಲ’ ಎಂದು ಸುದೀಪ್ ಹೇಳಿದ್ದಾರೆ. ಈ ಮೂಲಕ ಆ ಸಮಯಕ್ಕೆ ಸಿನಿಮಾ ರಿಲೀಸ್ ಮಾಡೋದು ಖಚಿತ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!