AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

K 47: ‘ಯಾವುದೇ ಸಿನಿಮಾ ಇದ್ರೂ ಸರಿ, ನಮ್ಮ ಚಿತ್ರ ಕ್ರಿಸ್​ಮಸ್​​ಗೆ ಬರೋದು ಪಕ್ಕಾ’; ಸುದೀಪ್

ಕಿಚ್ಚ ಸುದೀಪ್ ಅವರ 'K47' ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸಿನಿಮಾ ಶೂಟ್ ಅಕ್ಟೋಬರ್‌ನಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ನವೆಂಬರ್​​ನಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಲಿವೆ ಮತ್ತು ಚಿತ್ರವು ಕ್ರಿಸ್‌ಮಸ್‌ಗೆ ಬಿಡುಗಡೆಯಾಗಲಿದೆ. ಈ ಚಿತ್ರದ ಬಿಡುಗಡೆ ದಿನಾಂಕವು 'ಡೆವಿಲ್' ಮತ್ತು '45' ಚಿತ್ರದ ಜೊತೆ ಕ್ಲ್ಯಾಶ್ ಆಗಲಿದೆ.

K 47: ‘ಯಾವುದೇ ಸಿನಿಮಾ ಇದ್ರೂ ಸರಿ, ನಮ್ಮ ಚಿತ್ರ ಕ್ರಿಸ್​ಮಸ್​​ಗೆ ಬರೋದು ಪಕ್ಕಾ’; ಸುದೀಪ್
ದರ್ಶನ್, ಸುದೀಪ್,45
ರಾಜೇಶ್ ದುಗ್ಗುಮನೆ
|

Updated on: Sep 01, 2025 | 2:37 PM

Share

ಕಿಚ್ಚ ಸುದೀಪ್ ನಟನೆಯ ‘K 47’ ಸಿನಿಮಾದ ಶೂಟ್ ಜುಲೈನಲ್ಲಿ ಆರಂಭ ಆಗಿದೆ. ಈ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಕೇವಲ ಆರು ತಿಂಗಳಲ್ಲಿ ಸಿನಿಮಾ ಕೆಲಸ ಮುಗಿಸಿ ಜನರ ಎದುರು ತಂದಿಡೋ ಪ್ಲ್ಯಾನ್ ಇದೆ ಎಂದು ಸುದೀಪ್ (Sudeep) ಅವರು ಸಿನಿಮಾ ಘೋಷಿಸೋ ಸಮಯದಲ್ಲಿ ಹೇಳಿದ್ದರು. ಈಗಲೂ ತಮ್ಮ ಮಾತಿಗೆ ಬದ್ಧರಾಗಿರೋದಾಗಿ ಅವರು ಹೇಳಿದ್ದಾರೆ. ಹಾಗಾದಲ್ಲಿ, ‘ಡೆವಿಲ್’ ಹಾಗೂ ‘45’ ಚಿತ್ರದ ಜೊತೆ ಈ ಸಿನಿಮಾ ಕ್ಲ್ಯಾಶ್ ಆಗಲಿದೆ.

ಸೆಪ್ಟೆಂಬರ್ 2ರಂದು ಸುದೀಪ್ ಬರ್ತ್​ಡೇ ಇದೆ. ಅದಕ್ಕೂ ಒಂದು ದಿನ ಮೊದಲು (ಸೆಪ್ಟೆಂಬರ್ 1) ಸೆಲೆಬ್ರೇಷನ್ ಮಾಡಲು ಸುದೀಪ್ ನಿರ್ಧರಿಸಿದ್ದಾರೆ. ಬೆಂಗಳೂರಿನ ನಂದಿ ಲಿಂಕ್​ ಗ್ರೌಂಡ್ಸ್​​ನಲ್ಲಿ ರಾತ್ರಿ ಸೆಲೆಬ್ರೇಷನ್ ಇರಲಿದೆ. ಮಧ್ಯಾಹ್ನ ಸುದೀಪ್ ಅವರು ಬರ್ತ್​ಡೇ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳನ್ನು ಹಂಚಿಕೊಂಡರು. ‘ಕೆ 47’ ಬಗ್ಗೆಯೂ ಅಪ್​ಡೇಟ್ ಕೊಟ್ಟರು.

‘ನಾವು ವೇಗವಾಗಿ ಶೂಟಿಂಗ್ ಮಾಡುತ್ತಿದ್ದೇವೆ. ಈಗಾಗಲೇ ಸಿನಿಮಾದ 60ರಷ್ಟು ಶೂಟ್ ಪೂರ್ಣಗೊಂಡಿದೆ. ಅಕ್ಟೋಬರ್ ವೇಳೆಗೆ ಸಿನಿಮಾದ ಶೂಟ್ ಪೂರ್ಣಗೊಳ್ಳಲಿದೆ. ನವೆಂಬರ್​​ನಲ್ಲಿ​ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯಲಿದೆ. ಇದಾದ ಬಳಿಕ ನಾನು ಬಿಲ್ಲ ರಂಗ ಬಾಷ ಸಿನಿಮಾದಲ್ಲಿ ತೊಡಗಿಕೊಳ್ಳಲಿದ್ದೇನೆ. ಕ್ರಿಸ್​ಮಸ್​ಗೆ ಕೆ 47 ಬಂದೇ ಬರುತ್ತದೆ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ
Image
‘ನನ್ನ ಗೇಲಿ ಮಾಡುವುದರಿಂದ ನಿಮಗೆ ಊಟ ಸಿಗುತ್ತಿದೆ ಎಂದರೆ ಖುಷಿ’; ಸಲ್ಮಾನ್
Image
‘ಸು ಫ್ರಮ್ ಸೋ ಅಬ್ಬರ’; 38ನೇ ದಿನ ದೊಡ್ಡ ಮೊತ್ತ ಬಾಚಿದ ಸಿನಿಮಾ
Image
‘ಕಡಿಮೆ ಬೆಲೆ ಎಂದು ಮುಸ್ಲಿಮರು ಗೋಮಾಂಸ ಸೇವಿಸುತ್ತಾರೆ, ನಾನು ತಿಂದೇ ಇಲ್ಲ’
Image
ಗರ್ಲ್​ಫ್ರೆಂಡ್​ಗೆ ಮನೆ ಕೊಟ್ಟು ಬಾಡಿಗೆ ಪಡೆದ ಹೃತಿಕ್ ರೋಷನ್

‘ಡೆವಿಲ್’ ಹಾಗೂ ‘45’ ಕೂಡ ಇದೇ ಸಂದರ್ಭದಲ್ಲಿ ರಿಲೀಸ್ ಆಗಲಿದೆ. ಇದು ಸೆಲೆಬ್ರೇಷನ್ನೋ ಅಥವಾ ಕಾಂಪಿಟೇಷನ್ನೋ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ನೀವು ಇದನ್ನು ಕಾಂಪಿಟೇಷನ್ ಎಂದಾದರೂ ತೆಗೆದುಕೊಳ್ಳಬಹುದು, ಸೆಲೆಬ್ರೇಷನ್ ಎಂದಾದರೂ ತೆಗೆದುಕೊಳ್ಳಬಹುದು. ನಾವು ಸಿನಿಮಾ ಮಾತ್ರ ಮಾಡುತ್ತಿದ್ದೇವೆ. ನನ್ನ ನಿರ್ಮಾಪಕರಿಗೆ, ನನ್ನ ಥಿಯೇಟರ್​ಗೆ, ನನ್ನ ಅಭಿಮಾನಿಗಳಿಗಾಗಿ ಸಿನಿಮಾ ಮಾಡುತ್ತಿದ್ದೇನೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಬರ್ತ್​​ಡೇಗೂ ಮೊದಲು ಪ್ರೆಸ್​ಮೀಟ್ ಮಾಡಿದ ಸುದೀಪ್; ಇಲ್ಲಿದೆ ಲೈವ್

‘ನಾನು ಜುಲೈ 5ರಂದೇ ನನ್ನ ಸಿನಿಮಾ ರಿಲೀಸ್ ಘೋಷಣೆ ಮಾಡಿದ್ದೆ. ಹೀಗಿರುವಾಗ, ಆ ಸಮಯದಲ್ಲಿ ಯಾವೆಲ್ಲ ಸಿನಿಮಾಗಳು ಘೋಷಣೆ ಆಗಿದ್ದವು ಎಂಬುದನ್ನು ನೋಡಿದರೆ ಗೊತ್ತಾಗಿ ಬಿಡುತ್ತದೆ. ನಾನು ಆ ಬಗ್ಗೆ ಹೆಚ್ಚು ಯೋಚಿಸಲ್ಲ’ ಎಂದು ಸುದೀಪ್ ಹೇಳಿದ್ದಾರೆ. ಈ ಮೂಲಕ ಆ ಸಮಯಕ್ಕೆ ಸಿನಿಮಾ ರಿಲೀಸ್ ಮಾಡೋದು ಖಚಿತ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ