AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್ ಕೊನೆಯ ವರ್ಷಗಳಲ್ಲಿ ಹಾಗೆ ನಡೆದುಕೊಂಡಿದ್ದೇಕೆ? ವಿವರಿಸಿದ ಕಿಚ್ಚ ಸುದೀಪ್

ಸುದೀಪ್ ಅವರ ‘ಮಾರ್ಕ್’ ಸಿನಿಮಾ ಪ್ರಚಾರದ ನಡುವೆ ಎದುರಾದ ವಿವಾದದ ಬಗ್ಗೆ ಮಾತನಾಡಿದ್ದಾರೆ. ಅವರು ನೀಡಿದ ಜೀವನ ಪಾಠ ಎಲ್ಲರಿಗೂ ಅನ್ವಯ ಆಗುವಂಥದ್ದು. ‘ನಮ್ಮ ಜೊತೆ ನಿಲ್ಲುವವರು ಇದ್ದರೆ ಮಾತ್ರ ಯುದ್ಧಕ್ಕೆ ಹೋಗಿ’ ಎಂಬ ಕಿವಿಮಾತು ಹೇಳಿದ್ದಾರೆ. ವಿಷ್ಣುವರ್ಧನ್ ಅವರ ಮೌನದ ತಾತ್ವಿಕತೆಯನ್ನು ಕಿಚ್ಚ ಹತ್ತಿರದಿಂದ ಕಂಡಿದ್ದರು.

ವಿಷ್ಣುವರ್ಧನ್ ಕೊನೆಯ ವರ್ಷಗಳಲ್ಲಿ ಹಾಗೆ ನಡೆದುಕೊಂಡಿದ್ದೇಕೆ? ವಿವರಿಸಿದ ಕಿಚ್ಚ ಸುದೀಪ್
ಸುದೀಪ್ ವಿಷ್ಣು
ರಾಜೇಶ್ ದುಗ್ಗುಮನೆ
|

Updated on:Dec 24, 2025 | 7:34 AM

Share

ಸುದೀಪ್ (Sudeep) ಅವರು ‘ಮಾರ್ಕ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಡಿಸೆಂಬರ್ 25ರಂದು ಸಿನಿಮಾ ತೆರೆಗೆ ಬರಲಿದೆ. ಈ ಮಧ್ಯೆ ಸುದೀಪ್ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ‘ಮಾರ್ಕ್’ ಪ್ರೀರಿಲೀಸ್ ಈವೆಂಟ್​​ನಲ್ಲಿ ಮಾತನಾಡುವಾಗ ಅವರು ಆಡಿದ ಮಾತು ಚರ್ಚೆಗೆ ಕಾರಣ ಆಗಿತ್ತು. ಈ ವಿವಾದ ಮಧ್ಯೆ ಸುದೀಪ್ ಅವರು ಒಂದು ಜೀವನದ ಪಾಠ ಹೇಳಿದ್ದಾರೆ. ‘ನಮ್ಮ ಜೊತೆ ನಿಂತುಕೊಳ್ಳುತ್ತಾರೆ ಎಂಬುದು ಗೊತ್ತಿದ್ದರೆ ಮಾತ್ರ ಯುದ್ಧಕ್ಕೆ ಹೋಗಿ’ ಎಂದು ಕಿವಿ ಮಾತು ಹೇಳಿದ್ದಾರೆ ಸುದೀಪ್.

ವಿಷ್ಣುವರ್ಧನ್ ಅವರಿಗೆ ಸುದೀಪ್ ತುಂಬಾನೇ ಆಪ್ತರಾಗಿದ್ದರು. ವಿಷ್ಣು ಅವರನ್ನು ಸುದೀಪ್ ಯಾವಾಗಲೂ ಪ್ರೀತಿಯಿಂದ ದಾದಾ ಎನ್ನುತ್ತಿದ್ದರು. ಕಿಚ್ಚ ಅವರು ವಿಷ್ಣುವರ್ಧನ್ ಕಂಡ ರೀತಿಯ ಬಗ್ಗೆ ಹೇಳಿದ್ದರು. ಅವರು ತಮ್ಮ ಕೊನೆಯ ವರ್ಷಗಳಲ್ಲಿ ತುಂಬಾನೇ ಸೈಲೆಂಟ್ ಆಗಿಯೇ ಇದ್ದರಂತೆ. ಹೀಗೇಕೆ ಎಂಬ ಪ್ರಶ್ನೆಗೆ ಸುದೀಪ್ ಉತ್ತರಿಸಿದರು.

‘ವಿಷ್ಣುವರ್ಧನ್ ದೊಡ್ಡ ವ್ಯಕ್ತಿ. ಅವರು ಬರ್ತಾ ಬರ್ತಾ ಮನೆಯಲ್ಲಿ ದೇವರು ರೀತಿ ಕೂತಿರುತ್ತಿದ್ದರು. ಅವರಿಗೆ ಇರೋ ತಾಕತ್ತಿಗೆ ಎಲ್ಲವನ್ನೂ ಬಗೆಹರಿಸಬಹುದಿತ್ತು. ಆದರೆ, ನೋಡಿ ನೋಡಿ ಸಾಕಾಗಿತ್ತು. ಅಪ್ಪಾಜಿ ಹೀಗಾಗ್ತಾ ಇದೆ ಎಂದು ಹೇಳಿದರೆ ಕಾಫಿ ಕುಡಿಯಿರಿ ಆರಾಮಾಗಿ ಇರಿ ಎನ್ನುತ್ತಿದ್ದರು. ನೀವು ಗಲಾಟೆಗೆ ಹೋದರೆ ನಿಮ್ಮ ಜೊತೆ ಇದ್ದವರು ಇರುತ್ತಲೇ ಇರಲಿಲ್ಲ’ ಎನ್ನುತ್ತಿದ್ದರು ಸುದೀಪ್.

ಇದನ್ನೂ ಓದಿ: ‘ಈ ಹಿಂದೆ ದರ್ಶನ್ ಬಗ್ಗೆ ಕೆಟ್ಟದ್ದು ಮಾತನಾಡಿದ್ರೆ ತೋರಿಸಲಿ’; ಕಿಚ್ಚ ಸುದೀಪ್ ಸವಾಲು

‘ಅದು ಅವರ ಅನುಭವ. ನಾವು ಹೇಗೆ ಇರಬೇಕು ಎಂಬುದನ್ನು ನೋಡಿಕೊಂಡರೆ ಸೊಸೈಟಿ ಇನ್ನೂ ಚೆನ್ನಾಗಿ ಆಗುತ್ತದೆ. ನಮ್ಮನೆ ಸ್ವಚ್ಛವಾಗಿಟ್ಟುಕೊಂಡರೆ ಅದರಿಂದ ಸ್ಫೂರ್ತಿ ಪಡೆದು ಪಕ್ಕದ ಮನೆಯವರು ಕ್ಲೀನ್ ಆಗಿ ಇಟ್ಟುಕೊಳ್ಳಬಹುದು. ಹೀಗೆ ಮುಂದುವರಿದು ಇಡೀ ದೇಶ ಕ್ಲೀನ್ ಆಗುತ್ತದೆ’ ಎನ್ನುತ್ತಾರೆ ಸುದೀಪ್. ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ವಿಜಯ್ ಕಾರ್ತಿಕೇಯನ್ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:34 am, Wed, 24 December 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?