AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 7ರಿಂದ ಶೂಟ್, ಡಿಸೆಂಬರ್​ನಲ್ಲಿ ಸಿನಿಮಾ ರಿಲೀಸ್; ಸುದೀಪ್ ದೊಡ್ಡ ಘೋಷಣೆ  

Kichcha Sudeep: ಕಿಚ್ಚ ಸುದೀಪ್ ಅವರು ತಮ್ಮ ಹೊಸ ಚಿತ್ರ 'ಕೆ47' ಅನ್ನು ಘೋಷಿಸಿದ್ದಾರೆ. ಈ ಚಿತ್ರವನ್ನು ಕೇವಲ ಆರು ತಿಂಗಳಲ್ಲಿ ಪೂರ್ಣಗೊಳಿಸಿ ಡಿಸೆಂಬರ್ 25ರಂದು ಬಿಡುಗಡೆ ಮಾಡುವ ಗುರಿ ಹೊಂದಿದ್ದಾರೆ. ‘ಮ್ಯಾಕ್ಸ್' ಚಿತ್ರದ ಯಶಸ್ಸಿನ ನಂತರ, ವಿಜಯ್ ಕಾರ್ತಿಕೇಯ್ ನಿರ್ದೇಶನದ ಮತ್ತೊಂದು ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.

ಜುಲೈ 7ರಿಂದ ಶೂಟ್, ಡಿಸೆಂಬರ್​ನಲ್ಲಿ ಸಿನಿಮಾ ರಿಲೀಸ್; ಸುದೀಪ್ ದೊಡ್ಡ ಘೋಷಣೆ  
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jul 05, 2025 | 11:51 AM

Share

ಕಿಚ್ಚ ಸುದೀಪ್ (Kichcha Sudeep) ಅವರು ಎನರ್ಜಿಟಿಕ್ ಆಗಿ ಇದ್ದಾರೆ. ಅವರು ವಿಶ್ರಾಂತಿ ಪಡೆಯದೆ ಎಡಬಿಡದೆ ಬಣ್ಣದ ಲೋಕದ ಕೆಲಸಗಳಲ್ಲಿ ತೊಡಗಿಕೊಂಡಿರುತ್ತಾರೆ. ಈಗ ಅವರು ಇಂದು (ಜುಲೈ 5) ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಕೆ 47’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಘೋಷಣೆ ವೇಳೆ ಸುದೀಪ್ ಅವರು ಫ್ಯಾನ್ಸ್​ಗೆ ಒಂದು ಸಿಹಿ ಸುದ್ದಿ ನೀಡಿದ್ದಾರೆ. ಕೇವಲ ಆರು ತಿಂಗಳಲ್ಲಿ ಸಿನಿಮಾ ಮಾಡಿ ಪ್ರೇಕ್ಷಕರ ಎದುರು ಇಡಲು ಅವರು ಪಣ ತೊಟ್ಟಿದ್ದಾರೆ.

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ನಿರ್ದೇಶನ ಮಾಡಿದ್ದು ತಮಿಳಿನ ವಿಜಯ್ ಕಾರ್ತಿಕೇಯ ಅವರು. ಈಗ ಅವರ ಜೊತೆಯೇ ಸುದೀಪ್ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ಜುಲೈ 7ರಿಂದ ಸಿನಿಮಾದ ಶೂಟ್ ತಮಿಳಿನಾಡಿನಲ್ಲಿ ಆರಂಭ ಆಗಲಿದೆ. ಈ ಸಿನಿಮಾನ ಡಿಸೆಂಬರ್ 25ಕ್ಕೆ ಪ್ರೇಕ್ಷಕರ ಎದುರು ಇಡುವ ಆಲೋಚನೆಯಲ್ಲಿ ಅವರಿದ್ದಾರೆ.

ಸುದೀಪ್ ಅವರು ಈಗಾಗಲೇ ‘ಬಿಲ್ಲ ರಂಗ ಬಾಷ’ ಚಿತ್ರದ ಶೂಟ್​ನಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಅವರು ಬಿಗ್ ಬಾಸ್ ಕೂಡ ನಿರೂಪಣೆ ಮಾಡಲಿದ್ದಾರೆ. ಇವುಗಳ ಮಧ್ಯೆ ಅವರು ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದಾರೆ. ಇದರ ಶೂಟಿಂಗ್ ಬಗ್ಗೆ ಹಾಗೂ ಸಿನಿಮಾ ರಿಲೀಸ್ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
ನಂಬಲೇ ಬೇಕು.. ಸ್ಕ್ವಿಡ್ ಗೇಮ್ ನಟನಿಗೆ ಕನ್ನಡದ ಈ ಚಿತ್ರ ಎಂದರೆ ಸಖತ್ ಇಷ್ಟ
Image
ಗೆಳತಿಯ ತುಟಿಗೆ ಮುತ್ತು; ಸೆನ್ಸೇಷನ್ ಸೃಷ್ಟಿ ಮಾಡಿದ ಸಂಯುಕ್ತಾ ಹೆಗಡೆ
Image
ಕನ್ನಡದ ಬಗ್ಗೆ ವಿವಾದ ಮಾಡಿಕೊಂಡ ಕಮಲ್​ಗೆ ಹೊಸ ನಿರ್ಬಂಧ ಹೇರಿದ ಕೋರ್ಟ್
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

‘ನಿಜಕ್ಕೂ ಟೈಟ್ ಶೆಡ್ಯೂಲ್ ಆಗಲಿದೆ. ಬಿಲ್ಲ ರಂಗ ಬಾಷ ಈ ವರ್ಷಕ್ಕೆ ರಿಲೀಸ್ ಆಗೋದಿಲ್ಲ. ಅದು ದೊಡ್ಡ ಪ್ರಾಜೆಕ್ಟ್. ಹೀಗಾಗಿ, ಈ ಸಿನಿಮಾ ಡಿಸೆಂಬರ್ 25ಕ್ಕೆ ರಿಲೀಸ್ ಮಾಡಬೇಕು ಎಂಬುದು ನಮ್ಮ ಹಠ. ಟೀಂನಲ್ಲಿ ಸಾಕಷ್ಟು ಎನರ್ಜಿ ಇದೆ. ಈ ಬಾರಿ ಯಾವುದೇ ಸ್ಯಾಟರ್​ಡೇ, ಸಂಡೇ ಎನ್ನದೇ ಕೆಲಸ ಮಾಡಬೇಕು. ಆ ರೀತಿಯಲ್ಲಿ ಕೆಲಸ ಮಾಡುವ ಆಲೋಚನೆ ಇದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಮ್ಯಾಕ್ಸ್’ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿಯ ಲೈವ್ ಇಲ್ಲಿದೆ..

ಒಂದು ಸಿನಿಮಾನ ಆರು ತಿಂಗಳಲ್ಲಿ ಶೂಟ್ ಮಾಡಿ ಪ್ರೇಕ್ಷಕರ ಎದುರು ಇಡೋದು ಎಂದರೆ ಅದು ಸಣ್ಣ ಸಾಧನೆಯಲ್ಲ. ಅದರಲ್ಲೂ ಸ್ಟಾರ್ ಹೀರೋಗಳ ಸಿನಿಮಾ ಎಂದರೆ ಅದು ಮತ್ತೂ ದೊಡ್ಡ ಚಾಲೆಂಜ್. ಈ ಚಾಲೆಂಜ್​ನ ಸುದೀಪ್ ಸ್ವೀಕರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!