AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 7ರಿಂದ ಶೂಟ್, ಡಿಸೆಂಬರ್​ನಲ್ಲಿ ಸಿನಿಮಾ ರಿಲೀಸ್; ಸುದೀಪ್ ದೊಡ್ಡ ಘೋಷಣೆ  

Kichcha Sudeep: ಕಿಚ್ಚ ಸುದೀಪ್ ಅವರು ತಮ್ಮ ಹೊಸ ಚಿತ್ರ 'ಕೆ47' ಅನ್ನು ಘೋಷಿಸಿದ್ದಾರೆ. ಈ ಚಿತ್ರವನ್ನು ಕೇವಲ ಆರು ತಿಂಗಳಲ್ಲಿ ಪೂರ್ಣಗೊಳಿಸಿ ಡಿಸೆಂಬರ್ 25ರಂದು ಬಿಡುಗಡೆ ಮಾಡುವ ಗುರಿ ಹೊಂದಿದ್ದಾರೆ. ‘ಮ್ಯಾಕ್ಸ್' ಚಿತ್ರದ ಯಶಸ್ಸಿನ ನಂತರ, ವಿಜಯ್ ಕಾರ್ತಿಕೇಯ್ ನಿರ್ದೇಶನದ ಮತ್ತೊಂದು ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.

ಜುಲೈ 7ರಿಂದ ಶೂಟ್, ಡಿಸೆಂಬರ್​ನಲ್ಲಿ ಸಿನಿಮಾ ರಿಲೀಸ್; ಸುದೀಪ್ ದೊಡ್ಡ ಘೋಷಣೆ  
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jul 05, 2025 | 11:51 AM

Share

ಕಿಚ್ಚ ಸುದೀಪ್ (Kichcha Sudeep) ಅವರು ಎನರ್ಜಿಟಿಕ್ ಆಗಿ ಇದ್ದಾರೆ. ಅವರು ವಿಶ್ರಾಂತಿ ಪಡೆಯದೆ ಎಡಬಿಡದೆ ಬಣ್ಣದ ಲೋಕದ ಕೆಲಸಗಳಲ್ಲಿ ತೊಡಗಿಕೊಂಡಿರುತ್ತಾರೆ. ಈಗ ಅವರು ಇಂದು (ಜುಲೈ 5) ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಕೆ 47’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಘೋಷಣೆ ವೇಳೆ ಸುದೀಪ್ ಅವರು ಫ್ಯಾನ್ಸ್​ಗೆ ಒಂದು ಸಿಹಿ ಸುದ್ದಿ ನೀಡಿದ್ದಾರೆ. ಕೇವಲ ಆರು ತಿಂಗಳಲ್ಲಿ ಸಿನಿಮಾ ಮಾಡಿ ಪ್ರೇಕ್ಷಕರ ಎದುರು ಇಡಲು ಅವರು ಪಣ ತೊಟ್ಟಿದ್ದಾರೆ.

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ನಿರ್ದೇಶನ ಮಾಡಿದ್ದು ತಮಿಳಿನ ವಿಜಯ್ ಕಾರ್ತಿಕೇಯ ಅವರು. ಈಗ ಅವರ ಜೊತೆಯೇ ಸುದೀಪ್ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ಜುಲೈ 7ರಿಂದ ಸಿನಿಮಾದ ಶೂಟ್ ತಮಿಳಿನಾಡಿನಲ್ಲಿ ಆರಂಭ ಆಗಲಿದೆ. ಈ ಸಿನಿಮಾನ ಡಿಸೆಂಬರ್ 25ಕ್ಕೆ ಪ್ರೇಕ್ಷಕರ ಎದುರು ಇಡುವ ಆಲೋಚನೆಯಲ್ಲಿ ಅವರಿದ್ದಾರೆ.

ಸುದೀಪ್ ಅವರು ಈಗಾಗಲೇ ‘ಬಿಲ್ಲ ರಂಗ ಬಾಷ’ ಚಿತ್ರದ ಶೂಟ್​ನಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಅವರು ಬಿಗ್ ಬಾಸ್ ಕೂಡ ನಿರೂಪಣೆ ಮಾಡಲಿದ್ದಾರೆ. ಇವುಗಳ ಮಧ್ಯೆ ಅವರು ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದಾರೆ. ಇದರ ಶೂಟಿಂಗ್ ಬಗ್ಗೆ ಹಾಗೂ ಸಿನಿಮಾ ರಿಲೀಸ್ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
ನಂಬಲೇ ಬೇಕು.. ಸ್ಕ್ವಿಡ್ ಗೇಮ್ ನಟನಿಗೆ ಕನ್ನಡದ ಈ ಚಿತ್ರ ಎಂದರೆ ಸಖತ್ ಇಷ್ಟ
Image
ಗೆಳತಿಯ ತುಟಿಗೆ ಮುತ್ತು; ಸೆನ್ಸೇಷನ್ ಸೃಷ್ಟಿ ಮಾಡಿದ ಸಂಯುಕ್ತಾ ಹೆಗಡೆ
Image
ಕನ್ನಡದ ಬಗ್ಗೆ ವಿವಾದ ಮಾಡಿಕೊಂಡ ಕಮಲ್​ಗೆ ಹೊಸ ನಿರ್ಬಂಧ ಹೇರಿದ ಕೋರ್ಟ್
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

‘ನಿಜಕ್ಕೂ ಟೈಟ್ ಶೆಡ್ಯೂಲ್ ಆಗಲಿದೆ. ಬಿಲ್ಲ ರಂಗ ಬಾಷ ಈ ವರ್ಷಕ್ಕೆ ರಿಲೀಸ್ ಆಗೋದಿಲ್ಲ. ಅದು ದೊಡ್ಡ ಪ್ರಾಜೆಕ್ಟ್. ಹೀಗಾಗಿ, ಈ ಸಿನಿಮಾ ಡಿಸೆಂಬರ್ 25ಕ್ಕೆ ರಿಲೀಸ್ ಮಾಡಬೇಕು ಎಂಬುದು ನಮ್ಮ ಹಠ. ಟೀಂನಲ್ಲಿ ಸಾಕಷ್ಟು ಎನರ್ಜಿ ಇದೆ. ಈ ಬಾರಿ ಯಾವುದೇ ಸ್ಯಾಟರ್​ಡೇ, ಸಂಡೇ ಎನ್ನದೇ ಕೆಲಸ ಮಾಡಬೇಕು. ಆ ರೀತಿಯಲ್ಲಿ ಕೆಲಸ ಮಾಡುವ ಆಲೋಚನೆ ಇದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಮ್ಯಾಕ್ಸ್’ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿಯ ಲೈವ್ ಇಲ್ಲಿದೆ..

ಒಂದು ಸಿನಿಮಾನ ಆರು ತಿಂಗಳಲ್ಲಿ ಶೂಟ್ ಮಾಡಿ ಪ್ರೇಕ್ಷಕರ ಎದುರು ಇಡೋದು ಎಂದರೆ ಅದು ಸಣ್ಣ ಸಾಧನೆಯಲ್ಲ. ಅದರಲ್ಲೂ ಸ್ಟಾರ್ ಹೀರೋಗಳ ಸಿನಿಮಾ ಎಂದರೆ ಅದು ಮತ್ತೂ ದೊಡ್ಡ ಚಾಲೆಂಜ್. ಈ ಚಾಲೆಂಜ್​ನ ಸುದೀಪ್ ಸ್ವೀಕರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್