AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚೆನ್ನಾಗಿರಲ್ಲ’; ತಪ್ಪಾಗಿ ನಡೆದುಕೊಂಡವರಿಗೆ ಸುದೀಪ್ ಎಚ್ಚರಿಕೆ

ಸಿಸಿಎಲ್ ಚಾಂಪಿಯನ್ ಆದ ಬಳಿಕ ಸುದೀಪ್ ಅವರು ಅಭಿಮಾನಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ವೇದಿಕೆಯಲ್ಲಿ ಅತಿಯಾದ ಘೋಷಣೆ ಕೂಗಿ ತೊಂದರೆ ನೀಡಿದಾಗ, ಸುದೀಪ್ ಅವರು ‘ಚೆನ್ನಾಗಿರಲ್ಲ’ ಎಂದು ಸ್ಪಷ್ಟವಾಗಿ ಹೇಳಿದರು. ಅಭಿಮಾನಿಗಳ ಮೇಲಿನ ಅವರ ಪ್ರೀತಿಗೆ ಕೊರತೆಯಿಲ್ಲವಾದರೂ, ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಕಾಪಾಡಿಕೊಳ್ಳುವ ಮಹತ್ವವನ್ನು ಅವರು ಒತ್ತಿ ಹೇಳಿದರು.

‘ಚೆನ್ನಾಗಿರಲ್ಲ’; ತಪ್ಪಾಗಿ ನಡೆದುಕೊಂಡವರಿಗೆ ಸುದೀಪ್ ಎಚ್ಚರಿಕೆ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Feb 03, 2026 | 7:34 AM

Share

ಕಿಚ್ಚ ಸುದೀಪ್ (Sudeep) ಅವರು ಹೋದಲ್ಲಿ ಬಂದಲ್ಲಿ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಅವರು ಯಾವುದಾದರೂ ವೇದಿಕೆ ಏರಿದರೆ ಸಾಕು, ಬೇರೆಯವರಿಗೆ ಮಾತನಾಡಲು ಅವಕಾಶ ಕೂಡ ಕೊಡದೇ, ‘ಕಿಚ್ಚ ಕಿಚ್ಚ’ ಎಂದು ಘೋಷಣೆ ಕೂಗುತ್ತಾರೆ. ಈಗ ಸುದೀಪ್ ಅವರು ವಾರ್ನಿಂಗ್ ಒಂದನ್ನು ಕೊಟ್ಟಿದ್ದಾರೆ. ವೇದಿಕೆಯಲ್ಲಿ ಮಾತನಾಡುವಾಗ ತಪ್ಪಾಗಿ ನಡೆದುಕೊಂಡು, ತೊಂದರೆ ಕೊಟ್ಟವರಿಗೆ ಕಿಚ್ಚನ ಖಡಕ್ ವಾರ್ನಿಂಗ್ ಪಾಸ್ ಆಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಇತ್ತೀಚೆಗೆ ಸುದೀಪ್ ಅವರ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸಂಘಟಿತ ಆಟ ಪ್ರದರ್ಶನ ನೀಡಿ ಸಿಸಿಎಲ್​​ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿದೆ. ಕೊಯಮತ್ತೂರಿನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ನಮ್ಮವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಪಂದ್ಯದ ಬಳಿಕ ಸುದೀಪ್ ಅವರು ಜನರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಎಲ್ಲರೂ ‘ಕಿಚ್ಚ ಕಿಚ್ಚ’ ಎಂದು ಕೂಗಿದ್ದಾರೆ.

ವೇದಿಕೆ ಏರಿ ಸುದೀಪ್ ಮಾತನಾಡಲು ಆರಂಭಿಸಿದರು. ಆಗ ಅಲ್ಲಿ ನೆರೆದ ಕೆಲವರು ಕಿಚ್ಚ ಕಿಚ್ಚ ಎಂದು ಕೂಗುತ್ತಾ ಮಾತನಾಡಲೂ ಕೊಡಲಿಲ್ಲ. ಇದು ಸುದೀಪ್ ಅವರ ಕೋಪಕ್ಕೆ ಕಾರಣ ಆಗಿದೆ. ಅವರು ‘ಚೆನ್ನಾಗಿರಲ್ಲ’ ಎಂದು ನೇರವಾಗಿ ಎಚ್ಚರಿಕೆ ನೀಡಿದರು. ಆ ಬಳಿಕ ಎಲ್ಲರೂ ಸೈಲೆಂಟ್ ಆದರು.

ಇದನ್ನೂ ಓದಿ: ‘ಔಟಾದೆ, ಹೋಗಪ್ಪ’; ಕಿಚ್ಚ ಸುದೀಪ್ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು

ಸುದೀಪ್ ಅವರು ಅನೇಕ ಕಾರ್ಯಕ್ರಮಗಳಲ್ಲಿ ಇದೇ ರೀತಿಯ ಎಚ್ಚರಿಕೆ ನೀಡಿದ ಉದಾಹರಣೆ ಇದೆ. ಬೇರೆಯವರು ಮಾತನಾಡಲೂ ಕೊಡದೇ ಕಿಚ್ಚ ಎಂಬ ಘೋಷಣೆ ಕೂಗುತ್ತಾರೆ. ಆ ಸಂದರ್ಭದಲ್ಲಿ ಸುದೀಪ್ ಅವರು ಎಚ್ಚರಿಕೆ ನೀಡುತ್ತಾರೆ. ಆಗ ಫ್ಯಾನ್ಸ್ ಸೈಲೆಂಟ್ ಆಗುತ್ತಾರೆ. ಅವರಿಗೆ ಅಭಿಮಾನಿಗಳ ಮೇಲೆ ತುಂಬಾನೇ ಪ್ರೀತಿ. ಅವರು ತಪ್ಪಿದ್ದಾಗ ತಿದ್ದುತ್ತಾರೆ.

ಸುದೀಪ್ ಅವರು ‘ಮಾರ್ಕ್’ ಬಳಿಕ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಚಿತ್ರರಂಗಕ್ಕೆ ಬಂದು 30 ವರ್ಷಗಳು ಕಳೆದಿವೆ. ಈಗ ಅವರು ಹೊಸ ಸಿನಿಮಾ ಕೆಲಸದಲ್ಲಿ ತೊಡಗಿಕೊಳ್ಳಬೇಕಿದೆ. ರೋಮ್ ಕಾಮ್ ಸಿನಿಮಾ ಇದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್