AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲರ ಬಾಳಲ್ಲೂ ಆಗೋದು ಇದೇ’; ಜೀವನದ ಬಗ್ಗೆ ಸುದೀಪ್ ಮಾಡಿದ ಈ ಪಾಠ ನೆನಪಿದೆಯೇ

ಕಿಚ್ಚ ಸುದೀಪ್ ಅವರ ಹಳೆಯ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಜೀವನದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ವಿಶೇಷವಾಗಿ ಅವರ ಅರೇಂಜ್ಡ್ ಮ್ಯಾರೇಜ್ ಅನುಭವ ಮತ್ತು ಜೀವನದಲ್ಲಿ ಒಪ್ಪಿಗೆಯ ಮಹತ್ವದ ಬಗ್ಗೆ ಮಾತನಾಡಿದ್ದಾರೆ. 'ಮ್ಯಾಕ್ಸ್' ಚಿತ್ರದ ಯಶಸ್ಸಿನ ನಂತರ, ಅವರು 'ಬಿಲ್ಲ ರಂಗ ಭಾಷ' ಚಿತ್ರದಲ್ಲಿ ನಟಿಸಲಿದ್ದಾರೆ ಮತ್ತು ನಿರ್ದೇಶನದಲ್ಲೂ ತೊಡಗಿಸಿಕೊಳ್ಳುವ ಯೋಜನೆಯನ್ನು ಹೊಂದಿದ್ದಾರೆ.

‘ಎಲ್ಲರ ಬಾಳಲ್ಲೂ ಆಗೋದು ಇದೇ’; ಜೀವನದ ಬಗ್ಗೆ ಸುದೀಪ್ ಮಾಡಿದ ಈ ಪಾಠ ನೆನಪಿದೆಯೇ
ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 04, 2025 | 7:50 AM

Share

ಕಿಚ್ಚ ಸುದೀಪ್ ಅವರನ್ನು ಮಾತಿನಲ್ಲಿ ಸೋಲಿಸೋರು ಯಾರೂ ಇಲ್ಲ. ಅವರು ಅಷ್ಟು ಚೆನ್ನಾಗಿ ಮಾತನಾಡುತ್ತಾರೆ. ಅವರು ಹಲವು ಸಂದರ್ಶನಗಳಲ್ಲಿ ಜೀವನದ ಪಾಠಗಳನ್ನು ಮಾಡಿದ್ದೂ ಇದೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗುತ್ತಾರೆ. ಈಗ ಸುದೀಪ್ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಜೀವನದ ಪಾಠ ಮಾಡಿದ್ದರು. ಜೀವನ ಅಂದರೆ ಏನು ಎಂದು ವಿವರಿಸಿದ್ದರು.

ಜೀವನ ಎಂದರೆ ಒಬ್ಬರದ್ದು ಒಂದೊಂದು ಅರ್ಥ. ಕಿಚ್ಚ ಸುದೀಪ್ ಅವರು ಕೂಡ ಜೀವನ ಎಂದರೆ ಏನು ಎಂಬ ಬಗ್ಗೆ ತಮ್ಮದೇ ಆದ ಕಲ್ಪನೆ ಹೊಂದಿದ್ದಾರೆ. ಅದರಲ್ಲೂ ಮದುವೆ ಎಂದರೆ ಏನು ಎಂಬ ಬಗ್ಗೆ ಕಿಚ್ಚ ಸುದೀಪ್ ಮಾತನಾಡಿದ್ದರು. ಅರೇಂಜ್ ಮ್ಯಾರೇಜ್​ ಆದ ಬಳಿಕ ಎಲ್ಲವನ್ನೂ ಒಪ್ಪಿ ನಡೆಯಬೇಕಾಗುತ್ತದೆ ಎಂದು ಅವರು ಹೇಳಿದ್ದರು. ಇದೇ ಜೀವನ ಎಂದು ವಿವರಿಸಿದ್ದರು.

ಇದನ್ನೂ ಓದಿ
Image
ಡಿಕೆಶಿ ಬೆನ್ನಲ್ಲೇ ರಶ್ಮಿಕಾ ಹಾಗೂ ಸಿಸಿಎಲ್ ಆಟಗಾರರ ವಿರುದ್ಧ ಶಾಸಕ ಗರಂ
Image
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
Image
‘ಪಾರ್ಟಿ ಅನ್ನೋದು ವೈಯಕ್ತಿಕ’; ಕಿಚ್ಚ ಸುದೀಪ್ ಅವರ ಆಲೋಚೆನೆಯೇ ಬೇರೆ
Image
ಏಕಕಾಲಕ್ಕೆ ಟಿವಿ, ಒಟಿಟಿಗೆ ಮ್ಯಾಕ್ಸ್ ಎಂಟ್ರಿ; ದಿನಾಂಕ, ಸಮಯದ ಮಾಹಿತಿ..

‘ಎಲ್ಲೋ ಹೋಗಿ, ಎಲ್ಲೋ ಸೆಟಲ್ ಆಗ್ತೀರಿ, ಇದೇ ಜೀವನ. ಯಾವುದೋ ಗೊತ್ತಿಲ್ಲದ ಹುಡುಗಿಗೆ ಹೋಗಿ ತಾಳಿ ಕಟ್ಟುತ್ತೀರಿ. ಇದೇ ನನ್ನ ಹೆಂಡತಿ, ಅವಳನ್ನು ಪ್ರೀತಿಸಬೇಕು ಎನ್ನುವುದಕ್ಕೆ ಬರುತ್ತೇವೆ. ಶೆ. 90ರಷ್ಟು ಜೀವನದಲ್ಲಿ ​ ನಡೆಯೋದು ಇದೇ’ ಎಂದಿದ್ದಾರೆ ಅವರು.

‘ಅವಳು ಯಾರು ಅನ್ನೋದು ಗೊತ್ತಿರಲ್ಲ. ಅವಳ ಜೊತೆ ಎಲ್ಲವನ್ನೂ ಶೇರ್ ಮಾಡಬೇಕು. ಆಸಕ್ತಿ ಸೇರುತ್ತದೆಯೋ ಗೊತ್ತಿಲ್ಲ. ಅವರನ್ನು ಪ್ರೀತಿಸುವುದನ್ನು ಕಲಿಯುತ್ತೇವೆ, ಅವರ ವೀಕ್​ನೆಸ್ ಪಾಸಿಟಿವ್ ವಿಚಾರಗಳನ್ನು ಒಪ್ಪಿಕೊಳ್ಳುತ್ತೇವೆ. ಇದೇ ಜೀವನ’ ಎಂದು ಸುದೀಪ್ ಹೇಳಿದ್ದರು.

ಇದನ್ನೂ ಓದಿ: ‘ಪಾರ್ಟಿ ಅನ್ನೋದು ವೈಯಕ್ತಿಕ’; ಕಿಚ್ಚ ಸುದೀಪ್ ಅವರ ಆಲೋಚೆನೆಯೇ ಬೇರೆ

ಕಿಚ್ಚ ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಕಳೆದ ವರ್ಷಾಂತ್ಯಕ್ಕೆ ಬಂದ ಈ ಚಿತ್ರ ಗೆಲುವು ಕಂಡಿದೆ. ಈಗ ಅವರು ಬಿಲ್ಲ ರಂಗ ಭಾಷ ಚಿತ್ರದಲ್ಲಿ ನಟಿಸಬೇಕಿದೆ. ಈ ಸಿನಿಮಾ ಈ ವರ್ಷ ಆರಂಭ ಆಗಲಿದೆ. ಅನೂಪ್ ಭಂಡಾರಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಸಿಸಿಎಲ್​ನಲ್ಲೂ ಅವರು ಭಾಗಿ ಆಗಿದ್ದರು. ಅವರು ನಿರ್ದೇಶನವನ್ನೂ ಮಾಡಬೇಕಿದೆ. ಈ ಬಗ್ಗೆ ಇನ್ನಷ್ಟೇ ಘೋಷಣೆ ಮಾಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ