AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ 19ಕ್ಕೆ ಅಭಿಮಾನಿಗಳನ್ನು ಎದುರುಗೊಳ್ಳುತ್ತಿದ್ದಾರೆ ಕಿರಣ್​ ರಾಜ್​; ಏನಿದು ಸಮಾಚಾರ?

ಕೊವಿಡ್​ ಎರಡನೇ ಅಲೆ ಕಡಿಮೆ ಆಗಿದೆ. ಹೀಗಾಗಿ, ಚಿತ್ರಮಂದಿರಗಳನ್ನು ಓಪನ್​ ಮಾಡೋಕೆ ಅವಕಾಶ ನೀಡಲಾಗಿದೆ. ಈ ಕಾರಣಕ್ಕೆ ಆಗಸ್ಟ್ ‌19ರಂದು ಈ ಸಿನಿಮಾ ತೆರೆಗೆ ಬರುತ್ತಿದೆ.

ಆಗಸ್ಟ್​ 19ಕ್ಕೆ ಅಭಿಮಾನಿಗಳನ್ನು ಎದುರುಗೊಳ್ಳುತ್ತಿದ್ದಾರೆ ಕಿರಣ್​ ರಾಜ್​; ಏನಿದು ಸಮಾಚಾರ?
ಕಿರಣ್​ ರಾಜ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 31, 2021 | 6:17 PM

Share

‘ಕನ್ನಡತಿ’ ಧಾರಾವಾಹಿ ಹಾಗೂ ಸಾಮಾಜಿಕ ಕಾರ್ಯಗಳ ಮೂಲಕ ಹೆಸರಾದವರು ಕಿರಣ್​ ರಾಜ್. ಅವರು ಈಗ ಹಿರಿತೆರೆಗೂ ಕಾಲಿಟ್ಟಿದ್ದು, ಕೆಲ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮಹಾಭಾರತದ ಉಪಕಥೆಯನ್ನು ಆಧಾರವಾಗಿಟ್ಟುಕೊಂಡು ನಿರ್ಮಾಣವಾಗಿರುವ ‘ಜೀವ್ನಾನೇ ನಾಟ್ಕ ಸಾಮಿ’ ಹೆಸರಿನ ಚಿತ್ರದಲ್ಲಿ ಕಿರಣ್​ ರಾಜ್​ ನಟಿಸಿದ್ದಾರೆ.

ಮಹಾಭಾರತದ ಉಪಕಥೆಯನ್ನು ಆಧರಿಸಿ ಹಾಗೂ ರಿಯಾಲಿಟಿ ಶೋಗಳಲ್ಲಿ ನಡೆಯುವ ಕೆಲವು ವಿಷಯಗಳನ್ನು ಇಟ್ಟುಕೊಂಡು ಈ ಸಿನಿಮಾದ ಕಥೆ ಸಿದ್ಧಗೊಂಡಿದೆ. ಪಾಸಿಟಿವ್ ಹಾಗೂ ನೆಗೆಟಿವ್ ಆಲೋಚನೆಗಳನ್ನು ಎರಡು ಪಾತ್ರಗಳ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕರು. ಕಿರಣ್ ರಾಜ್ ಹಾಗೂ ಶ್ರೀಹರ್ಷ ಈ ಪಾತ್ರಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ರಾಜು ಭಂಡಾರಿ ರಾಜವರ್ತ ಈ ಚಿತ್ರದ ನಿರ್ದೇಶಕರು.

ಕೊವಿಡ್​ ಎರಡನೇ ಅಲೆ ಕಡಿಮೆ ಆಗಿದೆ. ಹೀಗಾಗಿ, ಚಿತ್ರಮಂದಿರಗಳನ್ನು ಓಪನ್​ ಮಾಡೋಕೆ ಅವಕಾಶ ನೀಡಲಾಗಿದೆ. ಈ ಕಾರಣಕ್ಕೆ ಆಗಸ್ಟ್ ‌19ರಂದು ಈ ಸಿನಿಮಾ ತೆರೆಗೆ ಬರುತ್ತಿದೆ. ಇದೊಂದು ಸಂಪೂರ್ಣ ಮನರಂಜನಾ ಚಿತ್ರ ಅನ್ನೋದು ಚಿತ್ರತಂಡದ ಅಭಿಪ್ರಾಯ.

‘ಇಂತಹ ಒಳ್ಳೆಯ ತಂಡದಲ್ಲಿ ಅಭಿನಯಿಸಿದ ಸಂತೋಷ ನನಗಿದೆ. ನನ್ನ ಧಾರಾವಾಹಿಯ ಅಭಿಮಾನಿಗಳು ಈ ಚಿತ್ರವನ್ನು ನೋಡಿ ಗೆಲಿಸುತ್ತಾರೆ’ ಎನ್ನುತ್ತಾರೆ ಕಿರಣ್ ರಾಜ್. ಈ  ಚಿತ್ರದಲ್ಲಿ ಹರ್ಷ ಬರೀ ನಟನೆಯನ್ನಷ್ಟೇ  ಮಾಡಿಲ್ಲ. ಜತೆಗೆ ಒಂದು ಹಾಡನ್ನು ಕೂಡ ಹಾಡಿದ್ದಾರೆ.

ತೆಲುಗು – ತಮಿಳು ಸಿನಿಮಾಗಳಲ್ಲಿ ನಟಿಸಿ, ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಅಭಿನಯಿಸುತ್ತಿರುವ ಪವಿತ್ರ ಕೋಟ್ಯಾನ್ ಹಾಗೂ ಅನಿಕ ರಮ್ಯ ಈ ಚಿತ್ರದ ನಾಯಕಿಯರು. ರಾಜಶೇಖರ್ ಶಿರಹಟ್ಟಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಜುಲೈ 5ರಂದು ಕಿರಣ್​ ರಾಜ್​ ಜನ್ಮದಿನ ಆಚರಿಸಿಕೊಂಡಿದ್ದರು. ಈ ವಿಶೇಷ ದಿನದಂದು ಅವರ ನಟನೆಯ ‘ಬಹದ್ದೂರ್​ ಗಂಡು’ ಚಿತ್ರದ ಟೀಸರ್​ ರಿಲೀಸ್​ ಆಗಿತ್ತು. ಈ ಟೀಸರ್​​ನಲ್ಲಿ ಕಿರಣ್​ ಆ್ಯಕ್ಷನ್​ ದೃಶ್ಯಗಳ ಮೂಲಕ ಮಿಂಚಿದ್ದರು. ಅದೇ ದಿನ ಕಿರಣ್​ ರಾಜ್ KINGS RAMPAGE ಹೆಸರಿನ ಬಟ್ಟೆ ಬ್ರ್ಯಾಂಡ್ ಪರಿಚಯಿಸಿದ್ದರು.

ಇದನ್ನೂ ಓದಿ: ಸಖತ್​ ಆ್ಯಕ್ಷನ್​ನಲ್ಲಿ ಮಿಂಚುತ್ತಿದ್ದಾರೆ ಕಿರಣ್​ ರಾಜ್; ಇದಕ್ಕಾಗಿ ಅವರು ಪಟ್ಟ ಶ್ರಮ ಅಷ್ಟಿಷ್ಟಲ್ಲ

ನಟ ಕಿರಣ್​ ರಾಜ್​ ಪರಿಚಯಿಸಿದ್ರು ಹೊಸ ಬಟ್ಟೆ ಬ್ರ್ಯಾಂಡ್​; ಇದರ ಹಿಂದಿದೆ ಒಂದೊಳ್ಳೆಯ ಉದ್ದೇಶ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ