ಮಹಾಭಾರತದ ಉಪಕಥೆಯನ್ನು ಆಧರಿಸಿ ಹಾಗೂ ರಿಯಾಲಿಟಿ ಶೋಗಳಲ್ಲಿ ನಡೆಯುವ ಕೆಲವು ವಿಷಯಗಳನ್ನು ಇಟ್ಟುಕೊಂಡು ಈ ಸಿನಿಮಾದ ಕಥೆ ಸಿದ್ಧಗೊಂಡಿದೆ. ಪಾಸಿಟಿವ್ ಹಾಗೂ ನೆಗೆಟಿವ್ ಆಲೋಚನೆಗಳನ್ನು ಎರಡು ಪಾತ್ರಗಳ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕರು. ಕಿರಣ್ ರಾಜ್ ಹಾಗೂ ಶ್ರೀಹರ್ಷ ಈ ಪಾತ್ರಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ರಾಜು ಭಂಡಾರಿ ರಾಜವರ್ತ ಈ ಚಿತ್ರದ ನಿರ್ದೇಶಕರು.
ಕೊವಿಡ್ ಎರಡನೇ ಅಲೆ ಕಡಿಮೆ ಆಗಿದೆ. ಹೀಗಾಗಿ, ಚಿತ್ರಮಂದಿರಗಳನ್ನು ಓಪನ್ ಮಾಡೋಕೆ ಅವಕಾಶ ನೀಡಲಾಗಿದೆ. ಈ ಕಾರಣಕ್ಕೆ ಆಗಸ್ಟ್ 19ರಂದು ಈ ಸಿನಿಮಾ ತೆರೆಗೆ ಬರುತ್ತಿದೆ. ಇದೊಂದು ಸಂಪೂರ್ಣ ಮನರಂಜನಾ ಚಿತ್ರ ಅನ್ನೋದು ಚಿತ್ರತಂಡದ ಅಭಿಪ್ರಾಯ.
‘ಇಂತಹ ಒಳ್ಳೆಯ ತಂಡದಲ್ಲಿ ಅಭಿನಯಿಸಿದ ಸಂತೋಷ ನನಗಿದೆ. ನನ್ನ ಧಾರಾವಾಹಿಯ ಅಭಿಮಾನಿಗಳು ಈ ಚಿತ್ರವನ್ನು ನೋಡಿ ಗೆಲಿಸುತ್ತಾರೆ’ ಎನ್ನುತ್ತಾರೆ ಕಿರಣ್ ರಾಜ್. ಈ ಚಿತ್ರದಲ್ಲಿ ಹರ್ಷ ಬರೀ ನಟನೆಯನ್ನಷ್ಟೇ ಮಾಡಿಲ್ಲ. ಜತೆಗೆ ಒಂದು ಹಾಡನ್ನು ಕೂಡ ಹಾಡಿದ್ದಾರೆ.
ತೆಲುಗು – ತಮಿಳು ಸಿನಿಮಾಗಳಲ್ಲಿ ನಟಿಸಿ, ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಅಭಿನಯಿಸುತ್ತಿರುವ ಪವಿತ್ರ ಕೋಟ್ಯಾನ್ ಹಾಗೂ ಅನಿಕ ರಮ್ಯ ಈ ಚಿತ್ರದ ನಾಯಕಿಯರು. ರಾಜಶೇಖರ್ ಶಿರಹಟ್ಟಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
ಜುಲೈ 5ರಂದು ಕಿರಣ್ ರಾಜ್ ಜನ್ಮದಿನ ಆಚರಿಸಿಕೊಂಡಿದ್ದರು. ಈ ವಿಶೇಷ ದಿನದಂದು ಅವರ ನಟನೆಯ ‘ಬಹದ್ದೂರ್ ಗಂಡು’ ಚಿತ್ರದ ಟೀಸರ್ ರಿಲೀಸ್ ಆಗಿತ್ತು. ಈ ಟೀಸರ್ನಲ್ಲಿ ಕಿರಣ್ ಆ್ಯಕ್ಷನ್ ದೃಶ್ಯಗಳ ಮೂಲಕ ಮಿಂಚಿದ್ದರು. ಅದೇ ದಿನ ಕಿರಣ್ ರಾಜ್ KINGS RAMPAGE ಹೆಸರಿನ ಬಟ್ಟೆ ಬ್ರ್ಯಾಂಡ್ ಪರಿಚಯಿಸಿದ್ದರು.
ಇದನ್ನೂ ಓದಿ: ಸಖತ್ ಆ್ಯಕ್ಷನ್ನಲ್ಲಿ ಮಿಂಚುತ್ತಿದ್ದಾರೆ ಕಿರಣ್ ರಾಜ್; ಇದಕ್ಕಾಗಿ ಅವರು ಪಟ್ಟ ಶ್ರಮ ಅಷ್ಟಿಷ್ಟಲ್ಲ
ನಟ ಕಿರಣ್ ರಾಜ್ ಪರಿಚಯಿಸಿದ್ರು ಹೊಸ ಬಟ್ಟೆ ಬ್ರ್ಯಾಂಡ್; ಇದರ ಹಿಂದಿದೆ ಒಂದೊಳ್ಳೆಯ ಉದ್ದೇಶ