AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ 19ಕ್ಕೆ ಅಭಿಮಾನಿಗಳನ್ನು ಎದುರುಗೊಳ್ಳುತ್ತಿದ್ದಾರೆ ಕಿರಣ್​ ರಾಜ್​; ಏನಿದು ಸಮಾಚಾರ?

ಕೊವಿಡ್​ ಎರಡನೇ ಅಲೆ ಕಡಿಮೆ ಆಗಿದೆ. ಹೀಗಾಗಿ, ಚಿತ್ರಮಂದಿರಗಳನ್ನು ಓಪನ್​ ಮಾಡೋಕೆ ಅವಕಾಶ ನೀಡಲಾಗಿದೆ. ಈ ಕಾರಣಕ್ಕೆ ಆಗಸ್ಟ್ ‌19ರಂದು ಈ ಸಿನಿಮಾ ತೆರೆಗೆ ಬರುತ್ತಿದೆ.

ಆಗಸ್ಟ್​ 19ಕ್ಕೆ ಅಭಿಮಾನಿಗಳನ್ನು ಎದುರುಗೊಳ್ಳುತ್ತಿದ್ದಾರೆ ಕಿರಣ್​ ರಾಜ್​; ಏನಿದು ಸಮಾಚಾರ?
ಕಿರಣ್​ ರಾಜ್​
TV9 Web
| Edited By: |

Updated on: Jul 31, 2021 | 6:17 PM

Share

‘ಕನ್ನಡತಿ’ ಧಾರಾವಾಹಿ ಹಾಗೂ ಸಾಮಾಜಿಕ ಕಾರ್ಯಗಳ ಮೂಲಕ ಹೆಸರಾದವರು ಕಿರಣ್​ ರಾಜ್. ಅವರು ಈಗ ಹಿರಿತೆರೆಗೂ ಕಾಲಿಟ್ಟಿದ್ದು, ಕೆಲ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮಹಾಭಾರತದ ಉಪಕಥೆಯನ್ನು ಆಧಾರವಾಗಿಟ್ಟುಕೊಂಡು ನಿರ್ಮಾಣವಾಗಿರುವ ‘ಜೀವ್ನಾನೇ ನಾಟ್ಕ ಸಾಮಿ’ ಹೆಸರಿನ ಚಿತ್ರದಲ್ಲಿ ಕಿರಣ್​ ರಾಜ್​ ನಟಿಸಿದ್ದಾರೆ.

ಮಹಾಭಾರತದ ಉಪಕಥೆಯನ್ನು ಆಧರಿಸಿ ಹಾಗೂ ರಿಯಾಲಿಟಿ ಶೋಗಳಲ್ಲಿ ನಡೆಯುವ ಕೆಲವು ವಿಷಯಗಳನ್ನು ಇಟ್ಟುಕೊಂಡು ಈ ಸಿನಿಮಾದ ಕಥೆ ಸಿದ್ಧಗೊಂಡಿದೆ. ಪಾಸಿಟಿವ್ ಹಾಗೂ ನೆಗೆಟಿವ್ ಆಲೋಚನೆಗಳನ್ನು ಎರಡು ಪಾತ್ರಗಳ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕರು. ಕಿರಣ್ ರಾಜ್ ಹಾಗೂ ಶ್ರೀಹರ್ಷ ಈ ಪಾತ್ರಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ರಾಜು ಭಂಡಾರಿ ರಾಜವರ್ತ ಈ ಚಿತ್ರದ ನಿರ್ದೇಶಕರು.

ಕೊವಿಡ್​ ಎರಡನೇ ಅಲೆ ಕಡಿಮೆ ಆಗಿದೆ. ಹೀಗಾಗಿ, ಚಿತ್ರಮಂದಿರಗಳನ್ನು ಓಪನ್​ ಮಾಡೋಕೆ ಅವಕಾಶ ನೀಡಲಾಗಿದೆ. ಈ ಕಾರಣಕ್ಕೆ ಆಗಸ್ಟ್ ‌19ರಂದು ಈ ಸಿನಿಮಾ ತೆರೆಗೆ ಬರುತ್ತಿದೆ. ಇದೊಂದು ಸಂಪೂರ್ಣ ಮನರಂಜನಾ ಚಿತ್ರ ಅನ್ನೋದು ಚಿತ್ರತಂಡದ ಅಭಿಪ್ರಾಯ.

‘ಇಂತಹ ಒಳ್ಳೆಯ ತಂಡದಲ್ಲಿ ಅಭಿನಯಿಸಿದ ಸಂತೋಷ ನನಗಿದೆ. ನನ್ನ ಧಾರಾವಾಹಿಯ ಅಭಿಮಾನಿಗಳು ಈ ಚಿತ್ರವನ್ನು ನೋಡಿ ಗೆಲಿಸುತ್ತಾರೆ’ ಎನ್ನುತ್ತಾರೆ ಕಿರಣ್ ರಾಜ್. ಈ  ಚಿತ್ರದಲ್ಲಿ ಹರ್ಷ ಬರೀ ನಟನೆಯನ್ನಷ್ಟೇ  ಮಾಡಿಲ್ಲ. ಜತೆಗೆ ಒಂದು ಹಾಡನ್ನು ಕೂಡ ಹಾಡಿದ್ದಾರೆ.

ತೆಲುಗು – ತಮಿಳು ಸಿನಿಮಾಗಳಲ್ಲಿ ನಟಿಸಿ, ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಅಭಿನಯಿಸುತ್ತಿರುವ ಪವಿತ್ರ ಕೋಟ್ಯಾನ್ ಹಾಗೂ ಅನಿಕ ರಮ್ಯ ಈ ಚಿತ್ರದ ನಾಯಕಿಯರು. ರಾಜಶೇಖರ್ ಶಿರಹಟ್ಟಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಜುಲೈ 5ರಂದು ಕಿರಣ್​ ರಾಜ್​ ಜನ್ಮದಿನ ಆಚರಿಸಿಕೊಂಡಿದ್ದರು. ಈ ವಿಶೇಷ ದಿನದಂದು ಅವರ ನಟನೆಯ ‘ಬಹದ್ದೂರ್​ ಗಂಡು’ ಚಿತ್ರದ ಟೀಸರ್​ ರಿಲೀಸ್​ ಆಗಿತ್ತು. ಈ ಟೀಸರ್​​ನಲ್ಲಿ ಕಿರಣ್​ ಆ್ಯಕ್ಷನ್​ ದೃಶ್ಯಗಳ ಮೂಲಕ ಮಿಂಚಿದ್ದರು. ಅದೇ ದಿನ ಕಿರಣ್​ ರಾಜ್ KINGS RAMPAGE ಹೆಸರಿನ ಬಟ್ಟೆ ಬ್ರ್ಯಾಂಡ್ ಪರಿಚಯಿಸಿದ್ದರು.

ಇದನ್ನೂ ಓದಿ: ಸಖತ್​ ಆ್ಯಕ್ಷನ್​ನಲ್ಲಿ ಮಿಂಚುತ್ತಿದ್ದಾರೆ ಕಿರಣ್​ ರಾಜ್; ಇದಕ್ಕಾಗಿ ಅವರು ಪಟ್ಟ ಶ್ರಮ ಅಷ್ಟಿಷ್ಟಲ್ಲ

ನಟ ಕಿರಣ್​ ರಾಜ್​ ಪರಿಚಯಿಸಿದ್ರು ಹೊಸ ಬಟ್ಟೆ ಬ್ರ್ಯಾಂಡ್​; ಇದರ ಹಿಂದಿದೆ ಒಂದೊಳ್ಳೆಯ ಉದ್ದೇಶ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ