AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಧರ್ಮದ ಕಥೆ ಇರುವ ಸೂಪರ್​ ಹೀರೋ ಸಿನಿಮಾದಲ್ಲಿ ಕಿರಣ್ ರಾಜ್ ನಟನೆ

ನಟ ಕಿರಣ್ ರಾಜ್​ ಅವರು ಬ್ಯಾಕ್​ ಟು ಬ್ಯಾಕ್ ಸಿನಿಮಾ ಮಾಡುತ್ತಿದ್ದಾರೆ. ಕೆಲವೇ ವಾರಗಳ ಹಿಂದೆ ಅವರು ನಟಿಸಿದ ‘ರಾನಿ’ ಸಿನಿಮಾ ಬಿಡುಗಡೆ ಆಗಿತ್ತು. ಈಗ ಅವರು ಇನ್ನೊಂದು ಸಿನಿಮಾದ ಬಗ್ಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಬಾರಿ ಅವರು ಸೂಪರ್​ ಹೀರೋ ಕಾನ್ಸೆಪ್ಟ್ ಇರುವ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂಬುದು ವಿಶೇಷ.

ಸನಾತನ ಧರ್ಮದ ಕಥೆ ಇರುವ ಸೂಪರ್​ ಹೀರೋ ಸಿನಿಮಾದಲ್ಲಿ ಕಿರಣ್ ರಾಜ್ ನಟನೆ
ಕಿರಣ್ ರಾಜ್​, ಗುರುತೇಜ್​ ಶೆಟ್ಟಿ
Follow us
ಮದನ್​ ಕುಮಾರ್​
|

Updated on: Nov 15, 2024 | 8:23 PM

ಕಿರುತೆರೆಯಲ್ಲಿ ಮಿಂಚಿ, ನಂತರ ಹಿರಿತೆರೆಗೆ ಕಾಲಿಟ್ಟ ಅನೇಕ ಕಲಾವಿದರು ಇದ್ದಾರೆ. ಅಂಥವರ ಪೈಕಿ ಕಿರಣ್ ರಾಜ್​ ಕೂಡ ಪ್ರಮುಖರು. ‘ಕಲರ್ಸ್ ಕನ್ನಡ’ ವಾಹಿನಿಯ ‘ಕನ್ನಡತಿ’ ಸೀರಿಯಲ್​ನಲ್ಲಿ ಕಿರಣ್ ರಾಜ್ ಅವರು ಪ್ರಮುಖ ಪಾತ್ರ ಮಾಡಿದ್ದರು. ಆ ಪಾತ್ರ ಅವರಿಗೆ ತುಂಬ ಖ್ಯಾತಿ ತಂದುಕೊಟ್ಟಿತು. ಕೇವಲ ಕಿರುತೆರೆಗೆ ಸೀಮಿತವಾಗದೇ ಹಿರಿತೆರೆಯಲ್ಲೂ ಕಿರಣ್ ರಾಜ್ ಅವರು ಆ್ಯಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಅವರ ಗಮನ ಪೂರ್ತಿ ಸಿನಿಮಾ ಕೆಲಸಗಳ ಮೇಲಿದೆ. ಈಗ ಅವರ ಹೊಸ ಸಿನಿಮಾ ಅನೌನ್ಸ್ ಆಗಿದೆ.

ಸೂಪರ್​ ಹೀರೋ ಕಾನ್ಸೆಪ್ಟ್ ಇರುವ ಸಿನಿಮಾದಲ್ಲಿ ಕಿರಣ್ ರಾಜ್ ಅವರು ಮುಖ್ಯ ಭೂಮಿಕೆ ನಿಭಾಯಿಸಲಿದ್ದಾರೆ. ಈ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ‘ರಾನಿ’ ಚಿತ್ರಕ್ಕೆ ಕೂಡ ಗುರುತೇಜ್ ಶೆಟ್ಟಿ ಅವರು ನಿರ್ದೇಶನ ಮಾಡಿದ್ದರು. ಅವರಿಬ್ಬರ ಕಾಂಬಿನೇಷನ್​ನಲ್ಲಿ ಈಗ ಸೂಪರ್​ ಹೀರೋ ಕಥೆಯಿರುವ ಸಿನಿಮಾ ಮೂಡಿಬರಲಿದೆ.

ಬೇರೆ ಬೇರೆ ರೀತಿಯ ಪಾತ್ರಗಳನ್ನು ಮಾಡಬೇಕು ಎಂಬುದು ಕಿರಣ್ ರಾಜ್ ಹಂಬಲ. ಹಾಗಾಗಿ ಅವರು ಈ ಬಾರಿ ಸೂಪರ್​ ಹೀರೋ ಆಗಲು ಹೊರಟಿದ್ದಾರೆ. ಈ ಸಿನಿಮಾದ ಕಾನ್ಸೆಪ್ಟ್ ಬಗ್ಗೆಯೂ ಸಣ್ಣ ಸುಳಿವು ಬಿಟ್ಟು ಕೊಡಲಾಗಿದೆ. ಸನಾತನ ಧರ್ಮದ ಹಿನ್ನೆಲೆಯ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ. ಆದರೆ ನಿರ್ದಿಷ್ಟವಾಗಿ ಅದು ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇದನ್ನೂ ಓದಿ: ಕಿರಣ್ ರಾಜ್ ನಟನೆಯ ಹೊಸ ಸಿನಿಮಾ ‘ಮೇಘ’ ಬಿಡುಗಡೆಗೆ ರೆಡಿ; ಕಾಜಲ್ ಕುಂದರ್ ನಾಯಕಿ

ಹೀರೋ ಕಿರಣ್ ರಾಜ್, ಡೈರೆಕ್ಟರ್​ ಗುರುತೇಜ್​ ಶೆಟ್ಟಿ ಎಂಬುದು ಹೊರತುಪಡಿಸಿ ಬೇರೆ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಕೂಡ ಇನ್ನೂ ಬಹಿರಂಗ ಆಗಿಲ್ಲ. ನಿರ್ಮಾಣ ಮಾಡುವವರು ಯಾರು? ಪಾತ್ರವರ್ಗದಲ್ಲಿ ಬೇರೆ ಯಾರೆಲ್ಲ ಇರಲಿದ್ದಾರಾ? ತಂತ್ರಜ್ಞರ ಬಳಗದಲ್ಲಿ ಯಾರು ಇದ್ದಾರೆ ಎಂಬುದು ಸಹ ಸದ್ಯಕ್ಕೆ ಗೌಪ್ಯವಾಗಿದೆ. ಆ ಬಗ್ಗೆ ಮಾಹಿತಿ ಸಿಗಲಿ ಎಂದು ಕಿರಣ್ ರಾಜ್ ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ