AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಧರ್ಮದ ಕಥೆ ಇರುವ ಸೂಪರ್​ ಹೀರೋ ಸಿನಿಮಾದಲ್ಲಿ ಕಿರಣ್ ರಾಜ್ ನಟನೆ

ನಟ ಕಿರಣ್ ರಾಜ್​ ಅವರು ಬ್ಯಾಕ್​ ಟು ಬ್ಯಾಕ್ ಸಿನಿಮಾ ಮಾಡುತ್ತಿದ್ದಾರೆ. ಕೆಲವೇ ವಾರಗಳ ಹಿಂದೆ ಅವರು ನಟಿಸಿದ ‘ರಾನಿ’ ಸಿನಿಮಾ ಬಿಡುಗಡೆ ಆಗಿತ್ತು. ಈಗ ಅವರು ಇನ್ನೊಂದು ಸಿನಿಮಾದ ಬಗ್ಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಬಾರಿ ಅವರು ಸೂಪರ್​ ಹೀರೋ ಕಾನ್ಸೆಪ್ಟ್ ಇರುವ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂಬುದು ವಿಶೇಷ.

ಸನಾತನ ಧರ್ಮದ ಕಥೆ ಇರುವ ಸೂಪರ್​ ಹೀರೋ ಸಿನಿಮಾದಲ್ಲಿ ಕಿರಣ್ ರಾಜ್ ನಟನೆ
ಕಿರಣ್ ರಾಜ್​, ಗುರುತೇಜ್​ ಶೆಟ್ಟಿ
ಮದನ್​ ಕುಮಾರ್​
|

Updated on: Nov 15, 2024 | 8:23 PM

Share

ಕಿರುತೆರೆಯಲ್ಲಿ ಮಿಂಚಿ, ನಂತರ ಹಿರಿತೆರೆಗೆ ಕಾಲಿಟ್ಟ ಅನೇಕ ಕಲಾವಿದರು ಇದ್ದಾರೆ. ಅಂಥವರ ಪೈಕಿ ಕಿರಣ್ ರಾಜ್​ ಕೂಡ ಪ್ರಮುಖರು. ‘ಕಲರ್ಸ್ ಕನ್ನಡ’ ವಾಹಿನಿಯ ‘ಕನ್ನಡತಿ’ ಸೀರಿಯಲ್​ನಲ್ಲಿ ಕಿರಣ್ ರಾಜ್ ಅವರು ಪ್ರಮುಖ ಪಾತ್ರ ಮಾಡಿದ್ದರು. ಆ ಪಾತ್ರ ಅವರಿಗೆ ತುಂಬ ಖ್ಯಾತಿ ತಂದುಕೊಟ್ಟಿತು. ಕೇವಲ ಕಿರುತೆರೆಗೆ ಸೀಮಿತವಾಗದೇ ಹಿರಿತೆರೆಯಲ್ಲೂ ಕಿರಣ್ ರಾಜ್ ಅವರು ಆ್ಯಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಅವರ ಗಮನ ಪೂರ್ತಿ ಸಿನಿಮಾ ಕೆಲಸಗಳ ಮೇಲಿದೆ. ಈಗ ಅವರ ಹೊಸ ಸಿನಿಮಾ ಅನೌನ್ಸ್ ಆಗಿದೆ.

ಸೂಪರ್​ ಹೀರೋ ಕಾನ್ಸೆಪ್ಟ್ ಇರುವ ಸಿನಿಮಾದಲ್ಲಿ ಕಿರಣ್ ರಾಜ್ ಅವರು ಮುಖ್ಯ ಭೂಮಿಕೆ ನಿಭಾಯಿಸಲಿದ್ದಾರೆ. ಈ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ‘ರಾನಿ’ ಚಿತ್ರಕ್ಕೆ ಕೂಡ ಗುರುತೇಜ್ ಶೆಟ್ಟಿ ಅವರು ನಿರ್ದೇಶನ ಮಾಡಿದ್ದರು. ಅವರಿಬ್ಬರ ಕಾಂಬಿನೇಷನ್​ನಲ್ಲಿ ಈಗ ಸೂಪರ್​ ಹೀರೋ ಕಥೆಯಿರುವ ಸಿನಿಮಾ ಮೂಡಿಬರಲಿದೆ.

ಬೇರೆ ಬೇರೆ ರೀತಿಯ ಪಾತ್ರಗಳನ್ನು ಮಾಡಬೇಕು ಎಂಬುದು ಕಿರಣ್ ರಾಜ್ ಹಂಬಲ. ಹಾಗಾಗಿ ಅವರು ಈ ಬಾರಿ ಸೂಪರ್​ ಹೀರೋ ಆಗಲು ಹೊರಟಿದ್ದಾರೆ. ಈ ಸಿನಿಮಾದ ಕಾನ್ಸೆಪ್ಟ್ ಬಗ್ಗೆಯೂ ಸಣ್ಣ ಸುಳಿವು ಬಿಟ್ಟು ಕೊಡಲಾಗಿದೆ. ಸನಾತನ ಧರ್ಮದ ಹಿನ್ನೆಲೆಯ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ. ಆದರೆ ನಿರ್ದಿಷ್ಟವಾಗಿ ಅದು ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇದನ್ನೂ ಓದಿ: ಕಿರಣ್ ರಾಜ್ ನಟನೆಯ ಹೊಸ ಸಿನಿಮಾ ‘ಮೇಘ’ ಬಿಡುಗಡೆಗೆ ರೆಡಿ; ಕಾಜಲ್ ಕುಂದರ್ ನಾಯಕಿ

ಹೀರೋ ಕಿರಣ್ ರಾಜ್, ಡೈರೆಕ್ಟರ್​ ಗುರುತೇಜ್​ ಶೆಟ್ಟಿ ಎಂಬುದು ಹೊರತುಪಡಿಸಿ ಬೇರೆ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಕೂಡ ಇನ್ನೂ ಬಹಿರಂಗ ಆಗಿಲ್ಲ. ನಿರ್ಮಾಣ ಮಾಡುವವರು ಯಾರು? ಪಾತ್ರವರ್ಗದಲ್ಲಿ ಬೇರೆ ಯಾರೆಲ್ಲ ಇರಲಿದ್ದಾರಾ? ತಂತ್ರಜ್ಞರ ಬಳಗದಲ್ಲಿ ಯಾರು ಇದ್ದಾರೆ ಎಂಬುದು ಸಹ ಸದ್ಯಕ್ಕೆ ಗೌಪ್ಯವಾಗಿದೆ. ಆ ಬಗ್ಗೆ ಮಾಹಿತಿ ಸಿಗಲಿ ಎಂದು ಕಿರಣ್ ರಾಜ್ ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು