AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಧರ್ಮದ ಕಥೆ ಇರುವ ಸೂಪರ್​ ಹೀರೋ ಸಿನಿಮಾದಲ್ಲಿ ಕಿರಣ್ ರಾಜ್ ನಟನೆ

ನಟ ಕಿರಣ್ ರಾಜ್​ ಅವರು ಬ್ಯಾಕ್​ ಟು ಬ್ಯಾಕ್ ಸಿನಿಮಾ ಮಾಡುತ್ತಿದ್ದಾರೆ. ಕೆಲವೇ ವಾರಗಳ ಹಿಂದೆ ಅವರು ನಟಿಸಿದ ‘ರಾನಿ’ ಸಿನಿಮಾ ಬಿಡುಗಡೆ ಆಗಿತ್ತು. ಈಗ ಅವರು ಇನ್ನೊಂದು ಸಿನಿಮಾದ ಬಗ್ಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಬಾರಿ ಅವರು ಸೂಪರ್​ ಹೀರೋ ಕಾನ್ಸೆಪ್ಟ್ ಇರುವ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂಬುದು ವಿಶೇಷ.

ಸನಾತನ ಧರ್ಮದ ಕಥೆ ಇರುವ ಸೂಪರ್​ ಹೀರೋ ಸಿನಿಮಾದಲ್ಲಿ ಕಿರಣ್ ರಾಜ್ ನಟನೆ
ಕಿರಣ್ ರಾಜ್​, ಗುರುತೇಜ್​ ಶೆಟ್ಟಿ
ಮದನ್​ ಕುಮಾರ್​
|

Updated on: Nov 15, 2024 | 8:23 PM

Share

ಕಿರುತೆರೆಯಲ್ಲಿ ಮಿಂಚಿ, ನಂತರ ಹಿರಿತೆರೆಗೆ ಕಾಲಿಟ್ಟ ಅನೇಕ ಕಲಾವಿದರು ಇದ್ದಾರೆ. ಅಂಥವರ ಪೈಕಿ ಕಿರಣ್ ರಾಜ್​ ಕೂಡ ಪ್ರಮುಖರು. ‘ಕಲರ್ಸ್ ಕನ್ನಡ’ ವಾಹಿನಿಯ ‘ಕನ್ನಡತಿ’ ಸೀರಿಯಲ್​ನಲ್ಲಿ ಕಿರಣ್ ರಾಜ್ ಅವರು ಪ್ರಮುಖ ಪಾತ್ರ ಮಾಡಿದ್ದರು. ಆ ಪಾತ್ರ ಅವರಿಗೆ ತುಂಬ ಖ್ಯಾತಿ ತಂದುಕೊಟ್ಟಿತು. ಕೇವಲ ಕಿರುತೆರೆಗೆ ಸೀಮಿತವಾಗದೇ ಹಿರಿತೆರೆಯಲ್ಲೂ ಕಿರಣ್ ರಾಜ್ ಅವರು ಆ್ಯಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಅವರ ಗಮನ ಪೂರ್ತಿ ಸಿನಿಮಾ ಕೆಲಸಗಳ ಮೇಲಿದೆ. ಈಗ ಅವರ ಹೊಸ ಸಿನಿಮಾ ಅನೌನ್ಸ್ ಆಗಿದೆ.

ಸೂಪರ್​ ಹೀರೋ ಕಾನ್ಸೆಪ್ಟ್ ಇರುವ ಸಿನಿಮಾದಲ್ಲಿ ಕಿರಣ್ ರಾಜ್ ಅವರು ಮುಖ್ಯ ಭೂಮಿಕೆ ನಿಭಾಯಿಸಲಿದ್ದಾರೆ. ಈ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ‘ರಾನಿ’ ಚಿತ್ರಕ್ಕೆ ಕೂಡ ಗುರುತೇಜ್ ಶೆಟ್ಟಿ ಅವರು ನಿರ್ದೇಶನ ಮಾಡಿದ್ದರು. ಅವರಿಬ್ಬರ ಕಾಂಬಿನೇಷನ್​ನಲ್ಲಿ ಈಗ ಸೂಪರ್​ ಹೀರೋ ಕಥೆಯಿರುವ ಸಿನಿಮಾ ಮೂಡಿಬರಲಿದೆ.

ಬೇರೆ ಬೇರೆ ರೀತಿಯ ಪಾತ್ರಗಳನ್ನು ಮಾಡಬೇಕು ಎಂಬುದು ಕಿರಣ್ ರಾಜ್ ಹಂಬಲ. ಹಾಗಾಗಿ ಅವರು ಈ ಬಾರಿ ಸೂಪರ್​ ಹೀರೋ ಆಗಲು ಹೊರಟಿದ್ದಾರೆ. ಈ ಸಿನಿಮಾದ ಕಾನ್ಸೆಪ್ಟ್ ಬಗ್ಗೆಯೂ ಸಣ್ಣ ಸುಳಿವು ಬಿಟ್ಟು ಕೊಡಲಾಗಿದೆ. ಸನಾತನ ಧರ್ಮದ ಹಿನ್ನೆಲೆಯ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ. ಆದರೆ ನಿರ್ದಿಷ್ಟವಾಗಿ ಅದು ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇದನ್ನೂ ಓದಿ: ಕಿರಣ್ ರಾಜ್ ನಟನೆಯ ಹೊಸ ಸಿನಿಮಾ ‘ಮೇಘ’ ಬಿಡುಗಡೆಗೆ ರೆಡಿ; ಕಾಜಲ್ ಕುಂದರ್ ನಾಯಕಿ

ಹೀರೋ ಕಿರಣ್ ರಾಜ್, ಡೈರೆಕ್ಟರ್​ ಗುರುತೇಜ್​ ಶೆಟ್ಟಿ ಎಂಬುದು ಹೊರತುಪಡಿಸಿ ಬೇರೆ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಕೂಡ ಇನ್ನೂ ಬಹಿರಂಗ ಆಗಿಲ್ಲ. ನಿರ್ಮಾಣ ಮಾಡುವವರು ಯಾರು? ಪಾತ್ರವರ್ಗದಲ್ಲಿ ಬೇರೆ ಯಾರೆಲ್ಲ ಇರಲಿದ್ದಾರಾ? ತಂತ್ರಜ್ಞರ ಬಳಗದಲ್ಲಿ ಯಾರು ಇದ್ದಾರೆ ಎಂಬುದು ಸಹ ಸದ್ಯಕ್ಕೆ ಗೌಪ್ಯವಾಗಿದೆ. ಆ ಬಗ್ಗೆ ಮಾಹಿತಿ ಸಿಗಲಿ ಎಂದು ಕಿರಣ್ ರಾಜ್ ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!