ಕಿರಣ್ ರಾಜ್ ನಟನೆಯ ಸಿನಿಮಾ ಸೇರಿ ಈ ವಾರ ಕನ್ನಡದಲ್ಲಿ ಹಲವು ಚಿತ್ರಗಳು ರಿಲೀಸ್; ಇಲ್ಲಿದೆ ವಿವರ

‘ಕೃಷ್ಣಂ ಪ್ರಣಯ ಸಖಿ’ ಹಾಗೂ ‘ಭೀಮ’ ಚಿತ್ರದ ಅಬ್ಬರ ಕೊಂಚ ಕಡಿಮೆ ಆದ ಹಿನ್ನೆಲೆಯಲ್ಲಿ ಈ ವಾರ ರಿಲೀಸ್ ಆಗುವ ಸಿನಿಮಾಗಳು ಹೈಪ್ ಪಡೆದುಕೊಳ್ಳೋ ಸಾಧ್ಯತೆ ಇದೆ ಇದೆ. ಆ ಬಗ್ಗೆ ಇಲ್ಲಿದೆ ವಿವರ.  

ಕಿರಣ್ ರಾಜ್ ನಟನೆಯ ಸಿನಿಮಾ ಸೇರಿ ಈ ವಾರ ಕನ್ನಡದಲ್ಲಿ ಹಲವು ಚಿತ್ರಗಳು ರಿಲೀಸ್; ಇಲ್ಲಿದೆ ವಿವರ
ಕಿರಣ್ ರಾಜ್ ಸಿನಿಮಾ ಸೇರಿ ಈ ವಾರ ಕನ್ನಡದಲ್ಲಿ ಹಲವು ಚಿತ್ರಗಳು ರಿಲೀಸ್; ಇಲ್ಲಿದೆ ವಿವರ
Follow us
|

Updated on:Sep 11, 2024 | 11:55 AM

ಈ ವಾರ ಗುರುವಾರ (ಸೆಪ್ಟೆಂಬರ್ 12) ಹಾಗೂ ಶುಕ್ರವಾರ (ಸೆಪ್ಟೆಂಬರ 13) ಸಿನಿಮಾಗಳು ರಿಲೀಸ್ ಆಗುತ್ತಿವೆ. ಅದರಲ್ಲೂ ಕನ್ನಡದಲ್ಲಿ ಕೆಲವು ಚಿತ್ರಗಳು ಬಿಡುಗಡೆ ಕಾಣುತ್ತಿವೆ. ‘ಕೃಷ್ಣಂ ಪ್ರಣಯ ಸಖಿ’ ಹಾಗೂ ‘ಭೀಮ’ ಚಿತ್ರದ ಅಬ್ಬರ ಕೊಂಚ ಕಡಿಮೆ ಆದ ಹಿನ್ನೆಲೆಯಲ್ಲಿ ಈ ವಾರ ರಿಲೀಸ್ ಆಗುವ ಸಿನಿಮಾಗಳು ಹೈಪ್ ಪಡೆದುಕೊಳ್ಳೋ ಸಾಧ್ಯತೆ ಇದೆ ಇದೆ. ಆ ಬಗ್ಗೆ ಇಲ್ಲಿದೆ ವಿವರ.

‘ರಾನಿ’

‘ರಾನಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಕಿರಣ್ ರಾಜ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ರಾಧ್ಯಾ ಆರ್, ರವಿ ಶಂಕರ್, ಯಶ್ ಶೆಟ್ಟಿ, ಧರ್ಮಣ್ಣ ಕಡೂರ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಗುರುತೇಜ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಉಮೇಶ್ ಹೆಗ್ಡೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಣಿಕಾಂತ್ ಅವರು ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 12ರಂದು ರಿಲೀಸ್ ಆಗುತ್ತಿದೆ.

ಕಾಲಾಪತ್ಥರ್

ವಿಕ್ಕಿ ವರುಣ್​, ಧನ್ಯಾ ರಾಮ್​ಕುಮಾರ್ ಮೊದಲಾದವರು ‘ಕಾಲಾಪತ್ಥರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ವಿಕ್ಕಿ ವರುಣ್ ಅವರೇ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 13ರಂದು ರಿಲೀಸ್ ಆಗುತ್ತಿದೆ.

ಇದನ್ನೂ ಓದಿ: ರಸ್ತೆ ಅಪಘಾತಕ್ಕೆ ಒಳಗಾದ ‘ಕನ್ನಡತಿ’ ಕಿರಣ್​ ರಾಜ್​; ಸಿನಿಮಾ ರಿಲೀಸ್​ಗೂ ಮೊದಲೇ ಕಹಿ ಸುದ್ದಿ

ವಿಕಾಸಪರ್ವ

ವಿಕಾಸಪರ್ವ ಹೆಸರಿನ ಚಿತ್ರದಲ್ಲಿ ರೋಹಿತ್ ನಾಗೇಶ್, ಸ್ವಾತಿ ಎಚ್​ವಿ, ಅಶ್ವಿನ್ ಹಾಸನ್ ಮೊದಲಾದವರು ನಟಿಸುತ್ತಿದ್ದಾರೆ. ಅನ್ಬು ಅರಸ್ ಅವರು ಈ ಚಿತ್ರ ನಿರ್ದೇಶನ ಮಾಡಿದ್ದಾರೆ.

ಎ.ಆರ್.​ಎಂ.

ಇದಲ್ಲದೆ ಮಲಯಾಳಂನಲ್ಲಿ ‘ಎ.ಆರ್​.ಎಂ’ ಹೆಸರಿನ ಸಿನಿಮಾ ಮೂಡಿಬರುತ್ತಿದೆ. ಟುವಿನೋ ಥಾಮಸ್, ಕೃತಿ ಶೆಟ್ಟಿ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Wed, 11 September 24

ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ