AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ-ಸೀರಿಸ್​ ಪಾಲಾಯ್ತು ‘ರಾನಿ’ ಆಡಿಯೋ ಹಕ್ಕು; ಕಿರಣ್​ ರಾಜ್​ ನಟನೆಯ ಚಿತ್ರದ ಬಗ್ಗೆ ಇಲ್ಲಿದೆ ಅಪ್​ಡೇಟ್​

ಗುರುತೇಜ್ ಶೆಟ್ಟಿ ಅವರು ‘ರಾನಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಈಗಾಗಲೇ 85 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಸದ್ಯಕ್ಕೆ ಒಂದು ಹಾಡಿನ ಶೂಟಿಂಗ್​ ಬಾಕಿ ಇದೆ. ಇದು ಮಾಸ್​ ಸಿನಿಮಾ ಆಗಿದ್ದರೂ ಕೂಡ ಕಿರಣ್ ರಾಜ್ ಅವರನ್ನು ಇಷ್ಟಪಡುವ ಫ್ಯಾಮಿಲಿ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ಕಥೆ ಬರೆದಿರುವುದಾಗಿ ಹೇಳಿದ್ದಾರೆ ನಿರ್ದೇಶಕರು.

ಟಿ-ಸೀರಿಸ್​ ಪಾಲಾಯ್ತು ‘ರಾನಿ’ ಆಡಿಯೋ ಹಕ್ಕು; ಕಿರಣ್​ ರಾಜ್​ ನಟನೆಯ ಚಿತ್ರದ ಬಗ್ಗೆ ಇಲ್ಲಿದೆ ಅಪ್​ಡೇಟ್​
‘ರಾನಿ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Aug 15, 2023 | 1:55 PM

Share

ಕಿರುತೆರೆ ಮೂಲಕ ಭಾರಿ ಜನಪ್ರಿಯತೆ ಪಡೆದ ನಟ ಕಿರಣ್​ ರಾಜ್​ (Kiran Raj) ಅವರು ಈಗ ಪೂರ್ಣಪ್ರಮಾಣದಲ್ಲಿ ಹಿರಿತೆರೆಯಲ್ಲಿ ತೊಡಗಿಕೊಂಡಿದ್ದಾರೆ. ಅವರು ನಟಿಸುತ್ತಿರುವ ‘ರಾನಿ’ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಇದೆ. ಈ ಮೊದಲು ಬಿಡುಗಡೆ ಆದ ‘ರಾನಿ’ (Ronny Kannada Movie) ಚಿತ್ರದ ಟೀಸರ್​ ಸಖತ್​ ಸದ್ದು ಮಾಡಿತ್ತು. ಮಾಸ್​ ಅವತಾರದಲ್ಲಿ ಕಿರಣ್​ ರಾಜ್​ ಅವರು ಅಬ್ಬರಿಸಿದ್ದರು. ಈಗ ಈ ಚಿತ್ರತಂಡದಿಂದ ಇನ್ನೊಂದು ಅಪ್​ಡೇಟ್​ ಸಿಕ್ಕಿದೆ. ಈ ಸಿನಿಮಾದ ಹಾಡುಗಳಿಗೆ ಭರ್ಜರಿ ಬೇಡಿಕೆ ಬಂದಿದೆ. ಪ್ರತಿಷ್ಠಿತ ಟಿ-ಸೀರಿಸ್​ (T-Series) ಕಂಪನಿಯು ‘ರಾನಿ’ ಸಿನಿಮಾದ ಆಡಿಯೋ ಹಕ್ಕುಗಳನ್ನು ಭಾರಿ ಮೊತ್ತಕ್ಕೆ ಖರೀದಿ ಮಾಡಿದೆ. ಹಾಡುಗಳ ಬಿಡುಗಡೆಗಾಗಿ ಅಭಿಮಾನಿಗಳು ಕಾದಿದ್ದಾರೆ.

ಮಣಿಕಾಂತ್ ಕದ್ರಿ ಅವರು ‘ರಾನಿ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರದಲ್ಲಿ 5 ಹಾಡುಗಳು ಇವೆ. ಅವುಗಳಿಗೆ ‘ಕಾಂತಾರ’ ಸಿನಿಮಾ ಖ್ಯಾತಿಯ ಪ್ರಮೋದ್ ಮರವಂತೆ ಅವರು ಸಾಹಿತ್ಯ ಬರೆದಿದ್ದಾರೆ. ಜನಪ್ರಿಯ ಗಾಯಕ ಕುನಾಲ್ ಗಾಂಜಾವಾಲ ಜೊತೆ ಹಂಸಿಕಾ ಐಯ್ಯರ್, ಶ್ವೇತಾ ಮೋಹನ್ ಅವರಂತಹ ಪ್ರತಿಭಾವಂತ ಗಾಯಕರು ಈ ಸಿನಿಮಾದ ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ರಾನಿ’ ಹಾಡುಗಳ ಬಗ್ಗೆ ನಿರೀಕ್ಷೆ ಮೂಡುವಂತಾಗಿದೆ.

ಇದನ್ನೂ ಓದಿ: ನೀವು ನೋಡಿದ ‘ಕನ್ನಡತಿ’ ನಟ ಕಿರಣ್​ ರಾಜ್​ ಇವರೇನಾ? ‘ರಾನಿ’ ಟೀಸರ್​ನಲ್ಲಿದೆ ಬೇರೆಯದೇ ಅವತಾರ

ಗುರುತೇಜ್ ಶೆಟ್ಟಿ ಅವರು ‘ರಾನಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಈಗಾಗಲೇ 85 ದಿನಗಳ ಚಿತ್ರೀಕರಣ ಮಾಡಲಾಗಿದೆ. ಸದ್ಯಕ್ಕೆ ಒಂದು ಹಾಡಿನ ಶೂಟಿಂಗ್​ ಬಾಕಿ ಇದೆ. ಇದು ಮಾಸ್​ ಸಿನಿಮಾ ಆಗಿದ್ದರೂ ಕೂಡ ಕಿರಣ್ ರಾಜ್ ಅವರನ್ನು ಇಷ್ಟಪಡುವ ಫ್ಯಾಮಿಲಿ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ಕಥೆ ಬರೆದಿರುವುದಾಗಿ ಹೇಳಿದ್ದಾರೆ ನಿರ್ದೇಶಕರು.

ಇದನ್ನೂ ಓದಿ:  ‘ಕನ್ನಡತಿ’ ಸೀರಿಯಲ್​ ನಟ ಕಿರಣ್​ ರಾಜ್​ ಈಗ ‘ಶೇರ್​’; ಸೆಟ್ಟೇರಿತು ಹೊಸ ಸಿನಿಮಾ

ಈ ಸಿನಿಮಾದಲ್ಲಿ ಮೂವರು ನಾಯಕಿಯರು ಇದ್ದಾರೆ. ಇನ್ನುಳಿದ ಪಾತ್ರಗಳಲ್ಲಿ ರವಿಶಂಕರ್, ಉಗ್ರಂ ರವಿ, ಉಗ್ರಂ ಮಂಜು, ಗಿರೀಶ್ ಹೆಗಡೆ, ಮೈಕೋ ನಾಗರಾಜ್, ಬಿ. ಸುರೇಶ, ಲಕ್ಷ್ಮೀ ಸಿದ್ದಯ್ಯ, ಮಂಡ್ಯ ರಮೇಶ್, ಸುಜಯ್ ಶಾಸ್ತ್ರಿ, ಅನಿಲ್ ಯಾದವ್, ಶ್ರೀಧರ್ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ರಾಘವೇಂದ್ರ ಬೇಡ ಕೋಲಾರ ಅವರು ಛಾಯಾಗ್ರಾಹಣ ಮಾಡಿದ್ದಾರೆ. ಉಮೇಶ್ ಅವರು ಸಂಕಲನ ಮಾಡುತ್ತಿದ್ದಾರೆ. ಸತೀಶ್ ಅವರ ಕಲಾ ನಿರ್ದೇಶನ, ಧನಂಜಯ್ ಅವರ ಕೊರಿಯೋಗ್ರಫಿ, ವಿನೋದ್ ಅವರ ಸಾಹಸ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಡಿಸೆಂಬರ್ ವೇಳೆಗೆ ‘ರಾನಿ’ ರಿಲೀಸ್​ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಸರ್ಕಾರಿ ಶಾಲೆಗೆ ‘ಕನ್ನಡತಿ’ ಸೀರಿಯಲ್​ ನಟ ಕಿರಣ್​ ರಾಜ್​ ನೆರವಿನ ಹಸ್ತದಿಂದ ಬಂತು ಹೊಸ ಮೆರುಗು

‘ಸ್ಟಾರ್ ಕ್ರಿಯೇಷನ್ಸ್’ ಬ್ಯಾನರ್ ಮೂಲಕ ‘ರಾನಿ’ ಸಿನಿಮಾ ತಯಾರಾಗುತ್ತಿದೆ. ಚಂದ್ರಕಾಂತ್ ಮತ್ತು ಉಮೇಶ್ ಹೆಗ್ಡೆ ಅವರು ನಿರ್ಮಾಣ ಮಾಡುತ್ತಿದ್ದಾರೆ. ನಾಯಕ ನಟ ಕಿರಣ್ ರಾಜ್ ಅವರು ತುಂಬ ಕಾಳಜಿ ವಹಿಸಿ ಈ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಮೊದಲ ದಿನದಿಂದಲೂ ಅವರು ಸಖತ್​ ಉತ್ಸಾಹದಲ್ಲಿ ಕೆಲಸ ಮಾಡುತ್ತಿದ್ದಾರೆ. ‘ರಾನಿ’ ಹಾಡುಗಳು ಟಿ-ಸೀರಿಸ್​ ಪಾಲಾಗಿರುವುದು ಚಿತ್ರತಂಡದ ಖುಷಿ ಹೆಚ್ಚಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್