AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Raj: ನೀವು ನೋಡಿದ ‘ಕನ್ನಡತಿ’ ನಟ ಕಿರಣ್​ ರಾಜ್​ ಇವರೇನಾ? ‘ರಾನಿ’ ಟೀಸರ್​ನಲ್ಲಿದೆ ಬೇರೆಯದೇ ಅವತಾರ

Ronny Movie Teaser: ಅದ್ದೂರಿ ಮೇಕಿಂಗ್​, ಮೈ ನವಿರೇಳಿಸುವ ಆ್ಯಕ್ಷನ್​, ಖಡಕ್​ ಆದ ಡೈಲಾಗ್​ಗಳು ಈ ಟೀಸರ್​ನಲ್ಲಿ ಹೈಲೈಟ್​ ಆಗಿವೆ. ಅಪ್ಪಟ ಮಾಸ್​ ಹೀರೋ ಆಗಿ ಕಿರಣ್​ ರಾಜ್​ ಅವರು ಅಬ್ಬರಿಸಿದ್ದಾರೆ.

Kiran Raj: ನೀವು ನೋಡಿದ ‘ಕನ್ನಡತಿ’ ನಟ ಕಿರಣ್​ ರಾಜ್​ ಇವರೇನಾ? ‘ರಾನಿ’ ಟೀಸರ್​ನಲ್ಲಿದೆ ಬೇರೆಯದೇ ಅವತಾರ
ಕಿರಣ್​ ರಾಜ್​
ಮದನ್​ ಕುಮಾರ್​
|

Updated on: Jul 05, 2023 | 7:45 PM

Share

ಖ್ಯಾತ ನಟ ಕಿರಣ್​ ರಾಜ್​ (Kiran Raj) ಅವರನ್ನು ‘ಕನ್ನಡತಿ’ ಸೀರಿಯಲ್​ನಲ್ಲಿ ನೋಡಿ ಜನರು ಇಷ್ಟಪಟ್ಟರು. ಸಾಫ್ಟ್​ ವ್ಯಕ್ತಿತ್ವದ ಪ್ರೇಮಿಯಾಗಿ ಅವರು ಗಮನ ಸೆಳೆದರು. ಆದರೆ ಈಗ ‘ರಾನಿ’ (Ronny Movie) ಸಿನಿಮಾದಲ್ಲಿ ಅವರ ಗೆಟಪ್​ ಸಂಪೂರ್ಣ ಬದಲಾಗಿದೆ. ತುಂಬ ಮಾಸ್​ ಆಗಿ ಅವರು ಜನರ ಮುಂದೆ ಬರಲು ಸಜ್ಜಾಗಿದ್ದಾರೆ. ಆ ಸಿನಿಮಾದ ಝಲಕ್​ ಹೇಗಿರಲಿದೆ ಎಂಬುದನ್ನು ಪೋಸ್ಟರ್​ ಮೂಲಕ ತೋರಿಸಲಾಗಿತ್ತು. ಈಗ ‘ರಾನಿ’ ಸಿನಿಮಾದ ಟೀಸರ್​ (Ronny Teaser) ಬಿಡುಗಡೆ ಆಗಿದೆ. ಅದರಲ್ಲಿ ಕಿರಣ್ ರಾಜ್​ ಅವರನ್ನು ನೋಡಿದ ಎಲ್ಲರಿಗೂ ಅಚ್ಚರಿ ಆಗಿದೆ. ‘ನಾವು ಸೀರಿಯಲ್​ನಲ್ಲಿ ನೋಡಿದ ಕಿರಣ್​ ರಾಜ್​ ಇವರೇನಾ’ ಎಂಬ ಪ್ರಶ್ನೆ ಮೂಡುವ ರೀತಿಯಲ್ಲಿ ಅವರು ರಗಡ್​ ಅವತಾರ ತಾಳಿದ್ದಾರೆ. ಕಿರಣ್​ ರಾಜ್​ ಅವರ ಜನ್ಮದಿನದ ಪ್ರಯುಕ್ತ ಇಂದು (ಜುಲೈ 5) ಈ ಟೀಸರ್​ ಬಿಡುಗಡೆ ಆಗಿದೆ.

‘ರಾನಿ’ ಸಿನಿಮಾಗೆ ಗುರುತೇಜ್​ ಶೆಟ್ಟಿ ಅವರು ನಿರ್ದೇಶನ ಮಾಡಿದ್ದಾರೆ. ಚಂದ್ರಕಾಂತ್​ ಪೂಜಾರಿ ಮತ್ತು ಉಮೇಶ್​ ಹೆಗ್ಡೆ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಕಿರಣ್​ ರಾಜ್​, ರವಿಶಂಕರ್​, ಬಿ. ಸುರೇಶ, ಉಗ್ರಂ ಮಂಜು, ಯಶ್​ ಶೆಟ್ಟಿ, ಮೈಕೋ ನಾಗರಾಜ್​, ಉ್ರಗಂ ರವಿ, ಧರ್ಮಣ್ಣ ಮುಂತಾದವರು ಇದ್ದಾರೆ. ಈ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿವೆ. ಕಿರಣ್​ ರಾಜ್​ ಅವರ ಅಭಿಮಾನಿಗಳು ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಟೀಸರ್​ ನೋಡಿದ ಬಳಿಕ ಆ ನಿರೀಕ್ಷೆ ಡಬಲ್​ ಆಗಿದೆ.

ಒಂದು ಅಂಡರ್​ವರ್ಲ್ಡ್​ ಕಥೆಯನ್ನು ‘ರಾನಿ’ ಸಿನಿಮಾದಲ್ಲಿ ತೋರಿಸಲಾಗುವುದು ಎಂಬುದಕ್ಕೆ ಟೀಸರ್​ನಲ್ಲಿ ಸುಳಿವು ಸಿಕ್ಕಿದೆ. ಅದ್ದೂರಿ ಮೇಕಿಂಗ್​, ಮೈ ನವಿರೇಳಿಸುವ ಆ್ಯಕ್ಷನ್​, ಖಡಕ್​ ಆದ ಡೈಲಾಗ್​ಗಳು ಈ ಟೀಸರ್​ನಲ್ಲಿ ಹೈಲೈಟ್​ ಆಗಿವೆ. ಅಪ್ಪಟ ಮಾಸ್​ ಹೀರೋ ಆಗಿ ಕಿರಣ್​ ರಾಜ್​ ಅವರು ಅಬ್ಬರಿಸಿದ್ದಾರೆ. ಫೈಟಿಂಗ್​ ದೃಶ್ಯಗಳಲ್ಲಿ ಆರ್ಭಟಿಸಿದ್ದಾರೆ. ‘ನಾನು ನಾನಾಗೋಕೆ ಬಂದಿದ್ದೇನೆ. ಡಾನ್​ ಆಗೋಕೆ ಬಂದಿಲ್ಲ’ ಎಂಬ ಡೈಲಾಗ್​ ಇಲ್ಲಿದೆ. ಹಾಗಾದರೆ ಕಥಾನಾಯಕ ಅಂಡರ್​ವರ್ಲ್ಡ್​ಗೆ ಹೇಗೆ ಎಂಟ್ರಿ ನೀಡುತ್ತಾನೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ.

ಇದನ್ನೂ ಓದಿ: Kiran Raj: ‘ಕನ್ನಡತಿ’ ಸೀರಿಯಲ್ ನಟ​ ಕಿರಣ್​ ರಾಜ್​ ಹುಟ್ಟುಹಬ್ಬಕ್ಕೆ ಹರಿದುಬಂತು ಶುಭಾಶಯಗಳ ಮಹಾಪೂರ

ಈ ಚಿತ್ರಕ್ಕೆ ಮಣಿಕಾಂತ್​ ಖದ್ರಿ ಅವರು ಸಂಗೀತ ನೀಡಿದ್ದಾರೆ. ಸಚಿನ್​ ಬಸ್ರೂರು ಅವರ ಹಿನ್ನೆಲೆ ಸಂಗೀತ ಇದೆ. ರಾಘವೇಂದ್ರ ಬಿ. ಕೋಲಾರ ಅವರು ಛಾಯಾಗ್ರಹಣ ಮಾಡಿದ್ದಾರೆ. ಎಕ್ಸಿಕ್ಯೂಟಿವ್​ ಪ್ರೊಡ್ಯೂಸರ್​ ಆಗಿ ಗಿರೀಶ್​ ಹೆಗ್ಡೆ ಕೆಲಸ ಮಾಡಿದ್ದಾರೆ. ವಿನೋದ್​ ಅವರ ಸಾಹಸ ನಿರ್ದೇಶನ, ಎ. ಸತೀಶ್​ ಕಲಾ ನಿರ್ದೇಶನ, ಉಮೇಶ್​​ ಆರ್​.ಬಿ. ಅವರ ಸಂಕಲನ ‘ರಾನಿ’ ಚಿತ್ರಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ