AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್

ಸೋಮವಾರ (ಜುಲೈ 4) ರಾತ್ರಿ ಕಿಶೋರ್​ ಪತ್ತಿಕೊಂಡ ಅವರು ಪ್ರಜ್ಞೆ ತಪ್ಪಿ ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು.

‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್
ಧೀರನ್-ಕಿಶೋರ್
TV9 Web
| Edited By: |

Updated on: Jul 05, 2022 | 5:17 PM

Share

‘ಜೇಮ್ಸ್’ ಸಿನಿಮಾ (James Movie) ನಿರ್ಮಾಣ ಮಾಡಿ ಸಾಕಷ್ಟು ಖ್ಯಾತಿ ಗಳಿಸಿದ ನಿರ್ಮಾಪಕ ಕಿಶೋರ್ ಪತ್ತಿಕೊಂಡ (Kishore Pathikonda) ಅವರಿಗೆ ಏಕಾಏಕಿ ಅನಾರೋಗ್ಯ ಕಾಡಿದೆ. ಹೀಗಾಗಿ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಅವರ ಅಭಿಮಾನಿಗಳು ಕೊಂಚ ನಿಟ್ಟುಸಿರು ಬಿಡುವ ಸುದ್ದಿ ಸಿಕ್ಕಿದೆ. ಕಿಶೋರ್ ಅವರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರು ಔಟ್ ಆಫ್ ಡೇಂಜರ್​ನಲ್ಲಿದ್ದಾರೆ ಎಂದು ರಾಜ್​ಕುಮಾರ್ ಮೊಮ್ಮಗ ಧೀರೇನ್​ ರಾಮ್​ಕುಮಾರ್ (Dheeren Ramkumar) ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಸೋಮವಾರ (ಜುಲೈ 4) ರಾತ್ರಿ ಕಿಶೋರ್​ ಪತ್ತಿಕೊಂಡ ಅವರು ಪ್ರಜ್ಞೆ ತಪ್ಪಿ ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಕಿಶೋರ್​ ಪತ್ತಿಕೊಂಡ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅವರ ಆಪ್ತರು ಪ್ರಾರ್ಥಿಸುತ್ತಿದ್ದಾರೆ. ಹೀಗಿರುವಾಗಲೇ ಅವರ ಆರೋಗ್ಯದ ಬಗ್ಗೆ ಅಪ್​ಡೇಟ್ ಸಿಕ್ಕಿದೆ.

‘ಕಿಶೋರ್ ಪತ್ತಿಕೊಂಡ ಅವರಿಗೆ ಬಿಪಿ ಏರುಪೇರಾಗಿತ್ತು. ಕಿಶೋರ್ ಪತ್ತಿಕೊಂಡ ಔಟ್ ಆಫ್ ಡೇಂಜರ್ ಆಗಿದ್ದಾರೆ. ನಿನ್ನೆ (ಜುಲೈ 4) ಮನೆಯಲ್ಲಿ ಬಿಪಿ ಏರುಪೇರಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದೆವು. ಈಗ ಏನೂ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಮೆದುಳಿನ ಸರ್ಜರಿ ಆಗಿದೆ. ಚಿಕಿತ್ಸೆ ನಡೆಯುತ್ತಿದೆ. ಅವರು ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದಾರೆ. ಮುಂದೇನು ಎಂಬುದು 24 ಗಂಟೆಗಳಲ್ಲಿ ಗೊತ್ತಾಗುತ್ತದೆ. ಕುಟುಂಬದವರು ಹಾಗೂ ಚಿತ್ರರಂಗದ ಕೆಲ ಗಣ್ಯರು ಜೊತೆ ಇದ್ದಾರೆ’ ಎಂದು ಧೀರೇನ್​ ರಾಮ್​ಕುಮಾರ್ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
Image
ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ
Image
ಪುನೀತ್​ ನಟನೆಯ ‘ಜೇಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​

ಪುನೀತ್​ ರಾಜ್​ಕುಮಾರ್​ ಹೀರೋ ಆಗಿ ನಟಿಸಿದ ಕೊನೇ ಸಿನಿಮಾ ಎಂಬ ಕಾರಣಕ್ಕೆ ‘ಜೇಮ್ಸ್​’ ಚಿತ್ರ ಹೆಚ್ಚು ನಿರೀಕ್ಷೆ ಮೂಡಿಸಿತ್ತು. ಅಪ್ಪು ನಿಧನದ ಬಳಿಕ ಈ ಸಿನಿಮಾ ಬಿಡುಗಡೆ ಆಯಿತು. ಬಹಳ ಕಾಳಜಿ ವಹಿಸಿ ಕಿಶೋರ್​ ಪತ್ತಿಕೊಂಡ ಅವರು ಚಿತ್ರದ ಪ್ರಚಾರ ಮಾಡಿದ್ದರು. ಅದ್ದೂರಿಯಾಗಿ ರಿಲೀಸ್​ ಆಗುವಂತೆ ನೋಡಿಕೊಂಡಿದ್ದರು. ಪುನೀತ್​ ಅಭಿಮಾನಿಗಳಿಂದ ನಿರ್ಮಾಪಕರಿಗೆ ಸಿಕ್ಕಿದ್ದ ಸಹಕಾರ ಅಪಾರ. ಗಲ್ಲಾಪೆಟ್ಟಿಗೆಯಲ್ಲೂ ಈ ಚಿತ್ರ ಒಳ್ಳೆಯ ಕಲೆಕ್ಷನ್​ ಮಾಡಿತ್ತು. ‘ಜೇಮ್ಸ್​’ ಚಿತ್ರದ ಯಶಸ್ಸಿನ ಬಳಿಕ ಕಿಶೋರ್​ ಪತ್ತಿಕೊಂಡ ಅವರು ಮುಂದಿನ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡರು. ರಾಜ್​ಕುಮಾರ್​ ಮೊಮ್ಮಗ ಧೀರೇನ್​ ರಾಮ್​ಕುಮಾರ್​ ನಟನೆಯ ಹೊಸ ಚಿತ್ರಕ್ಕೆ ಅವರು ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ: ಪುನೀತ್​ ನಟನೆಯ ‘ಜೇ357716ಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​

Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ