AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ಬ್ಯಾನ್ ಮೂಲಕ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಮನುವಾದಿಗಳು: ನಟ ಕಿಶೋರ್

Actor Kishore: ಕರ್ನಾಟಕದಲ್ಲಿ ನಡೆದ ಹಿಜಾಬ್ ಸುತ್ತಲ ಹೋರಾಟಗಳ ಬಗ್ಗೆ ನಟ ಕಿಶೋರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಹಿಜಾಬ್ ಬ್ಯಾನ್ ಮೂಲಕ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಮನುವಾದಿಗಳು: ನಟ ಕಿಶೋರ್
ಕಿಶೋರ್
ಮಂಜುನಾಥ ಸಿ.
|

Updated on: May 29, 2023 | 3:13 PM

Share

ಬಹುಭಾಷಾ ನಟ ಕಿಶೋರ್ (Kishore), ವಾರಗೆಯ ಹಲವು ನಟರಂತೆ ಪೊಲಿಟಿಕಲಿ ಕರೆಕ್ಟ್ ಅಲ್ಲದೆ, ತಮಗೆ ಸರಿಕಾಣದ ವಿಷಯಗಳ ಬಗ್ಗೆ ಸ್ಪಷ್ಟವಾಗಿ, ನಿಷ್ಠುರವಾಗಿ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಧರ್ಮವನ್ನು ರಾಜಕೀಯಕ್ಕೆ ಬಳಸುವವರ ಸ್ಪಷ್ಟ ವಿರೋಧಿಗಳಾಗಿರುವ ನಟ ಕಿಶೋರ್, ಬಿಜೆಪಿ, ಆರ್​ಎಸ್​ಎಸ್​ ಹಾಗೂ ಕೆಲವು ಹಿಂದೂಪರ ಸಂಘಟನೆಗಳ (Pro Hindu Activists) ನಡೆಗಳ ಬಗ್ಗೆ ಟೀಕೆಗಳನ್ನು ವ್ಯಕ್ತಪಡಿಸುತ್ತಿರುತ್ತಾರೆ. ಇದೀಗ ಹಿಜಾಬ್ ಕುರಿತು ರಾಜ್ಯದಲ್ಲಿ ನಡೆದ ಪ್ರತಿಭಟನೆ, ಗಲಾಟೆಗಳ ಕುರಿತು ವಿವರವಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

”ಯಾವ ಮುಸಲ್ಮಾನ ಮಹಿಳೆ, ಪುರುಷ ಪ್ರಾಬಲ್ಯದ ಸಂಕೇತವಾದ ಹಿಜಾಬನ್ನು ವಿರೋಧಿಸಿಯೂ ವಿರೋಧಿಸದಂತೆ ಮೆಲ್ಲ ಮೆಲ್ಲನೆ ಅದರಿಂದ ಸ್ವತಂತ್ರಳಾಗಿ ಶಿಕ್ಷಿತಳೂ ಸಶಕ್ತಳೂ ಆಗುತ್ತಿದ್ದಳೊ ಅವಳನ್ನು ಅಡ್ಡಗಟ್ಟಿ ಅವಳಲ್ಲಿ ಭಯ ಹುಟ್ಟಿಸಿ, ಆಕೆ ತನ್ನ ಆತ್ಮರಕ್ಷಣೆಗಾಗಿ ತನ್ನ ಅಸ್ಮಿತೆಯ ಹುಡುಕಾಟದಲ್ಲಿ ತನ್ನನ್ನು ಬಂಧನದಲ್ಲಿಟ್ಟಿದ್ದ ಅದೇ ಹಿಜಾಬಿನ ಮೊರೆ ಹೋಗುವ ಹಾಗೆ ಮಾಡಿದ ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು. ಒಂದು ಹೆಣ್ಣು ಶಿಕ್ಷಣ ಪಡೆದರೆ ಅವಳ ಮುಂದಿನ ಇಡೀ ಪೀಳಿಗೆ ಶಿಕ್ಷಣ ಪಡೆಯುತ್ತದೆ. ಸರಕಾರಿ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಇಂದೂ ಸಹ ನೂರರಲ್ಲಿ ಹದಿನಾಲ್ಕು ಮುಸ್ಲಿಂ ಹೆಣ್ಣು ಮಕ್ಕಳು ಮಾತ್ರ ಕಾಲೇಜು ಶಿಕ್ಷಣ ಪಡೆಯಲು ಸಾಧ್ಯವಾಗಿದೆ, ಇಂಥಾ ಕಾಲದಲ್ಲಿ ಅದನ್ನೂ ತಡೆದು ಬಿಟ್ಟರೆ, ಮುಸಲ್ಮಾನರನ್ನು ಮುಖ್ಯವಾಹಿನಿಯಿಂದ ಹೊರಗಿಡುವ ಷಡ್ಯಂತ್ರ ಯಶಸ್ವಿಯಾದಂತೆಯೇ ಸರಿ” ಎಂದಿದ್ದಾರೆ ಕಿಶೋರ್.

”ತನ್ನ ಮನೆ, ಸಂಬಂಧಿಕರು, ಮತ, ಸಂಪ್ರದಾಯವಾದ ಎಲ್ಲವನ್ನೂ ದಾಟಿಬಂದು ಕೊನೆಯ ಹಂತದಲ್ಲಿ ಶಿಕ್ಷಣ ವಂಚಿತಳಾಗುವುದಕ್ಕೆ ಕಾರಣ ಕೂಡ ಸ್ವಯಂ ಅವಳೇ ಆಗಿಬಿಟ್ಟರೆ? ದೇಶದ ಮುಖ್ಯವಾಹಿನಿಯಿಂದ ಮುಸ್ಲಿಂ ಮಹಿಳೆ ಮತ್ತು ಜನಾಂಗ ಎರಡೂ ಹೊರಗೆ ಅದೂ ತನ್ನ ಕಾಲ ಮೇಲೆ ತಾನೇ ಕೊಡಲಿ ಹಾಕಿಕೊಂಡು. ಇದಲ್ಲವೇ ಮಾಸ್ಟರ್ ಸ್ಟ್ರೊಕ್” ಎಂದಿದ್ದಾರೆ.

”ಜಂತರ್ ಮಂತರ್ ನಲ್ಲಿ ಲೈಂಗಿಕ ದೌರ್ಜನದ ವಿರುದ್ಧ ಧರಣಿ ಕುಳಿತ ಹೆಣ್ಣುಮಕ್ಕಳು, ಅತ್ಯಾಚಾರಿಯ ಹೂಂಕಾರ, ಆಗಾಗ ಆ ಹೆಣ್ಣುಮಕ್ಕಳ ಮೇಲೇ ತನ್ನ ಶಕ್ತಿ ತೋರಿಸುವ ನರಸತ್ತ ಪೊಲೀಸ್, ಕಮಕ್ ಕಿಮಕ್ ಅನ್ನದೇ ಅತ್ಯಾಚಾರಿಗೆ ಪರೋಕ್ಷ ಬೆಂಬಲ ಕೊಟ್ಟು ಕುಳಿತ ಏಕವ್ಯಕ್ತಿ ಸರ್ಕಾರವಾದ ಪ್ರಧಾನಿ. ಆಗ ಹೊರಟದ್ದು. ವಿಶ್ವಮಟ್ಟದ ತಾರೆಯರಿಗೇ ಹೀಗಾದರೆ ನಮ್ಮಂಥ ಸಾಮಾನ್ಯರಿಗಾದರೆ ಹೇಗೆ ಎಂಬ ಜನಸಾಮಾನ್ಯರ ಉದ್ಗಾರ ಇಷ್ಟು ಸಾಲದೇ, ಶತಮಾನಗಳು ಹೋರಾಡಿ ವಿಶ್ವದ ಉತ್ತುಂಗಕ್ಕೇರಿದ ಹೆಣ್ಣು ಮಕ್ಕಳನ್ನು, ಅವರ ಬೆಂಗಾವಲಾಗಿ ನಿಂತ ದೇಶದ ತಾಯಿ ತಂದೆಯರೇ ಮತ್ತೆ ಮನುವಿನ ಕಲ್ಪನೆಯ ನಾಲ್ಕು ಗೋಡೆಗಳ ಕೂಪಕ್ಕೆ ತಳ್ಳಲು. ಭಾರತಾಂಬೆ ಅಂದು ಹಿಜಾಬಿನಲ್ಲಿ ಇಂದು ಜಂತರ್ ಮಂತರ್ ಅಖಾಡದಲ್ಲಿ ಮನುವಾದಿಗಳಿಗೆ ಸವಾಲೆಸೆಯುತ್ತಲೇ ಬಂದಿದ್ದಾಳೆ ಎಂದು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ ನಟ ಕಿಶೋರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ