AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವುದಾಗಿ ನಟಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ Gold Smuggling ಗ್ಯಾಂಗ್ ಅರೆಸ್ಟ್​

ತಿರುವನಂತಪುರಂ: ದಕ್ಷಿಣ ಭಾರತದ ನಟಿ ಶಾಮ್ನಾ ಕಾಸಿಮ್ ಅವರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಲು ಮುಂದಾಗಿದ್ದ 7 ಆರೋಪಿಗಳನ್ನು ಕೊಚ್ಚಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಸೆಲೆಬ್ರೆಟಿ ಹೇರ್ ಸ್ಟೈಲಿಸ್ಟ್ ಹ್ಯಾರಿಸ್​ನನ್ನೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಟಿ ಶಾಮ್ನಾ ಕಾಸಿಮ್ ಅವರ ಬಳಿ ಹಣ ಸುಲಿಗೆ ಮಾಡಲು ಆರೋಪಿಗಳು ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ನಟಿಯ ಪೋಷಕರನ್ನು ಈ ಗ್ಯಾಂಗ್ ಸಂಪರ್ಕಿಸಿತ್ತು. ಈ ಬಗ್ಗೆ ಹಲವು ಬಾರಿ ಚರ್ಚೆಗಳು ಹಾಗೂ ದೂರವಾಣಿ ಸಂಭಾಷಣೆ […]

ಮದುವೆಯಾಗುವುದಾಗಿ ನಟಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ Gold Smuggling ಗ್ಯಾಂಗ್ ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 01, 2020 | 3:34 PM

Share

ತಿರುವನಂತಪುರಂ: ದಕ್ಷಿಣ ಭಾರತದ ನಟಿ ಶಾಮ್ನಾ ಕಾಸಿಮ್ ಅವರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಲು ಮುಂದಾಗಿದ್ದ 7 ಆರೋಪಿಗಳನ್ನು ಕೊಚ್ಚಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಸೆಲೆಬ್ರೆಟಿ ಹೇರ್ ಸ್ಟೈಲಿಸ್ಟ್ ಹ್ಯಾರಿಸ್​ನನ್ನೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಟಿ ಶಾಮ್ನಾ ಕಾಸಿಮ್ ಅವರ ಬಳಿ ಹಣ ಸುಲಿಗೆ ಮಾಡಲು ಆರೋಪಿಗಳು ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ನಟಿಯ ಪೋಷಕರನ್ನು ಈ ಗ್ಯಾಂಗ್ ಸಂಪರ್ಕಿಸಿತ್ತು. ಈ ಬಗ್ಗೆ ಹಲವು ಬಾರಿ ಚರ್ಚೆಗಳು ಹಾಗೂ ದೂರವಾಣಿ ಸಂಭಾಷಣೆ ನಡೆದ ನಂತರ ಪೋಷಕರಿಗೆ ಅನುಮಾನ ಬಂದಿದೆ. ಬಳಿಕ ನಟಿಯ ಪೋಷಕರು ಪೊಲೀಸರಿಗೆ ದೂರು ಕೊಟ್ಟಿದ್ದರು.

ನಟಿ ಶಾಮ್ನಾ ಕಾಸಿಮ್ ಅವರನ್ನು ಸಂಪರ್ಕಿಸಲು ಚಿತ್ರರಂಗದ ಲಿಂಕ್ ಇರುವ ಹೇರ್ ಸ್ಟೈಲಿಸ್ಟ್ ಹ್ಯಾರಿಸ್​ನನ್ನು ಈ ಗ್ಯಾಂಗ್ ಬಳಸಿಕೊಂಡಿದೆ. ಈ ಗ್ಯಾಂಗ್ ವಿರುದ್ಧ ಈಗಾಗಲೇ ಹಲವರು ದೂರು ನೀಡಿದ್ದಾರೆ ಎಂದು ಕೊಚ್ಚಿ ಪೊಲೀಸ್ ಆಯುಕ್ತ ವಿಜಯ್ ಸಖಾರೆ ಅವರು ತಿಳಿಸಿದ್ದಾರೆ.

ಇದು ಗೋಲ್ಡ್​ ಸ್ಮಗ್ಲಿಂಗ್ ಗ್ಯಾಂಗ್ ವಂಚನೆ ಜಾಲ ಬಂಧಿತರು ದೊಡ್ಡ ಚಿನ್ನದ ಕಳ್ಳ ಸಾಗಣೆ ವಂಚನೆ ಜಾಲಕ್ಕೆ ಸೇರಿದವರು. ತನ್ನ ಬಲೆಗೆ ಬಿದ್ದ ತಾರಾಮಣಿಗಳನ್ನು ಸುಲಭವಾಗಿ ಗೋಲ್ಡ್ ಸ್ಮಗ್ಲಿಂಗ್ ಜಾಲದಲ್ಲಿ ಬಳಸುವುದು ಇವರ ಉದ್ದೇಶ, ಸಕಾಲದಲ್ಲಿ ತಮ್ಮ ಕುಟುಂಬಸ್ಥರು ಎಚ್ಚೆತ್ತುಕೊಂಡಿದ್ದರಿಂದ ​ನಟಿ ಶಾಮ್ನಾ ಕಾಸಿಮ್ ಈ ಜಾಲದಲ್ಲಿ ಸಿಲುಕುವುದು ತಪ್ಪಿದೆ. ಇನ್ನೂ ಅನೇಕ ತಾರಾಮಣಿಗಳು ಇಂತಹ ಜಾಲದಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ಕೇರಳ ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ.

Published On - 6:58 pm, Tue, 30 June 20

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್