AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವುದಾಗಿ ನಟಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ Gold Smuggling ಗ್ಯಾಂಗ್ ಅರೆಸ್ಟ್​

ತಿರುವನಂತಪುರಂ: ದಕ್ಷಿಣ ಭಾರತದ ನಟಿ ಶಾಮ್ನಾ ಕಾಸಿಮ್ ಅವರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಲು ಮುಂದಾಗಿದ್ದ 7 ಆರೋಪಿಗಳನ್ನು ಕೊಚ್ಚಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಸೆಲೆಬ್ರೆಟಿ ಹೇರ್ ಸ್ಟೈಲಿಸ್ಟ್ ಹ್ಯಾರಿಸ್​ನನ್ನೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಟಿ ಶಾಮ್ನಾ ಕಾಸಿಮ್ ಅವರ ಬಳಿ ಹಣ ಸುಲಿಗೆ ಮಾಡಲು ಆರೋಪಿಗಳು ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ನಟಿಯ ಪೋಷಕರನ್ನು ಈ ಗ್ಯಾಂಗ್ ಸಂಪರ್ಕಿಸಿತ್ತು. ಈ ಬಗ್ಗೆ ಹಲವು ಬಾರಿ ಚರ್ಚೆಗಳು ಹಾಗೂ ದೂರವಾಣಿ ಸಂಭಾಷಣೆ […]

ಮದುವೆಯಾಗುವುದಾಗಿ ನಟಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ Gold Smuggling ಗ್ಯಾಂಗ್ ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 01, 2020 | 3:34 PM

Share

ತಿರುವನಂತಪುರಂ: ದಕ್ಷಿಣ ಭಾರತದ ನಟಿ ಶಾಮ್ನಾ ಕಾಸಿಮ್ ಅವರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಲು ಮುಂದಾಗಿದ್ದ 7 ಆರೋಪಿಗಳನ್ನು ಕೊಚ್ಚಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಸೆಲೆಬ್ರೆಟಿ ಹೇರ್ ಸ್ಟೈಲಿಸ್ಟ್ ಹ್ಯಾರಿಸ್​ನನ್ನೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಟಿ ಶಾಮ್ನಾ ಕಾಸಿಮ್ ಅವರ ಬಳಿ ಹಣ ಸುಲಿಗೆ ಮಾಡಲು ಆರೋಪಿಗಳು ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ನಟಿಯ ಪೋಷಕರನ್ನು ಈ ಗ್ಯಾಂಗ್ ಸಂಪರ್ಕಿಸಿತ್ತು. ಈ ಬಗ್ಗೆ ಹಲವು ಬಾರಿ ಚರ್ಚೆಗಳು ಹಾಗೂ ದೂರವಾಣಿ ಸಂಭಾಷಣೆ ನಡೆದ ನಂತರ ಪೋಷಕರಿಗೆ ಅನುಮಾನ ಬಂದಿದೆ. ಬಳಿಕ ನಟಿಯ ಪೋಷಕರು ಪೊಲೀಸರಿಗೆ ದೂರು ಕೊಟ್ಟಿದ್ದರು.

ನಟಿ ಶಾಮ್ನಾ ಕಾಸಿಮ್ ಅವರನ್ನು ಸಂಪರ್ಕಿಸಲು ಚಿತ್ರರಂಗದ ಲಿಂಕ್ ಇರುವ ಹೇರ್ ಸ್ಟೈಲಿಸ್ಟ್ ಹ್ಯಾರಿಸ್​ನನ್ನು ಈ ಗ್ಯಾಂಗ್ ಬಳಸಿಕೊಂಡಿದೆ. ಈ ಗ್ಯಾಂಗ್ ವಿರುದ್ಧ ಈಗಾಗಲೇ ಹಲವರು ದೂರು ನೀಡಿದ್ದಾರೆ ಎಂದು ಕೊಚ್ಚಿ ಪೊಲೀಸ್ ಆಯುಕ್ತ ವಿಜಯ್ ಸಖಾರೆ ಅವರು ತಿಳಿಸಿದ್ದಾರೆ.

ಇದು ಗೋಲ್ಡ್​ ಸ್ಮಗ್ಲಿಂಗ್ ಗ್ಯಾಂಗ್ ವಂಚನೆ ಜಾಲ ಬಂಧಿತರು ದೊಡ್ಡ ಚಿನ್ನದ ಕಳ್ಳ ಸಾಗಣೆ ವಂಚನೆ ಜಾಲಕ್ಕೆ ಸೇರಿದವರು. ತನ್ನ ಬಲೆಗೆ ಬಿದ್ದ ತಾರಾಮಣಿಗಳನ್ನು ಸುಲಭವಾಗಿ ಗೋಲ್ಡ್ ಸ್ಮಗ್ಲಿಂಗ್ ಜಾಲದಲ್ಲಿ ಬಳಸುವುದು ಇವರ ಉದ್ದೇಶ, ಸಕಾಲದಲ್ಲಿ ತಮ್ಮ ಕುಟುಂಬಸ್ಥರು ಎಚ್ಚೆತ್ತುಕೊಂಡಿದ್ದರಿಂದ ​ನಟಿ ಶಾಮ್ನಾ ಕಾಸಿಮ್ ಈ ಜಾಲದಲ್ಲಿ ಸಿಲುಕುವುದು ತಪ್ಪಿದೆ. ಇನ್ನೂ ಅನೇಕ ತಾರಾಮಣಿಗಳು ಇಂತಹ ಜಾಲದಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ಕೇರಳ ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ.

Published On - 6:58 pm, Tue, 30 June 20

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ