AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವುದಾಗಿ ನಟಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ Gold Smuggling ಗ್ಯಾಂಗ್ ಅರೆಸ್ಟ್​

ತಿರುವನಂತಪುರಂ: ದಕ್ಷಿಣ ಭಾರತದ ನಟಿ ಶಾಮ್ನಾ ಕಾಸಿಮ್ ಅವರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಲು ಮುಂದಾಗಿದ್ದ 7 ಆರೋಪಿಗಳನ್ನು ಕೊಚ್ಚಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಸೆಲೆಬ್ರೆಟಿ ಹೇರ್ ಸ್ಟೈಲಿಸ್ಟ್ ಹ್ಯಾರಿಸ್​ನನ್ನೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಟಿ ಶಾಮ್ನಾ ಕಾಸಿಮ್ ಅವರ ಬಳಿ ಹಣ ಸುಲಿಗೆ ಮಾಡಲು ಆರೋಪಿಗಳು ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ನಟಿಯ ಪೋಷಕರನ್ನು ಈ ಗ್ಯಾಂಗ್ ಸಂಪರ್ಕಿಸಿತ್ತು. ಈ ಬಗ್ಗೆ ಹಲವು ಬಾರಿ ಚರ್ಚೆಗಳು ಹಾಗೂ ದೂರವಾಣಿ ಸಂಭಾಷಣೆ […]

ಮದುವೆಯಾಗುವುದಾಗಿ ನಟಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ Gold Smuggling ಗ್ಯಾಂಗ್ ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 01, 2020 | 3:34 PM

Share

ತಿರುವನಂತಪುರಂ: ದಕ್ಷಿಣ ಭಾರತದ ನಟಿ ಶಾಮ್ನಾ ಕಾಸಿಮ್ ಅವರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಲು ಮುಂದಾಗಿದ್ದ 7 ಆರೋಪಿಗಳನ್ನು ಕೊಚ್ಚಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಸೆಲೆಬ್ರೆಟಿ ಹೇರ್ ಸ್ಟೈಲಿಸ್ಟ್ ಹ್ಯಾರಿಸ್​ನನ್ನೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಟಿ ಶಾಮ್ನಾ ಕಾಸಿಮ್ ಅವರ ಬಳಿ ಹಣ ಸುಲಿಗೆ ಮಾಡಲು ಆರೋಪಿಗಳು ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ನಟಿಯ ಪೋಷಕರನ್ನು ಈ ಗ್ಯಾಂಗ್ ಸಂಪರ್ಕಿಸಿತ್ತು. ಈ ಬಗ್ಗೆ ಹಲವು ಬಾರಿ ಚರ್ಚೆಗಳು ಹಾಗೂ ದೂರವಾಣಿ ಸಂಭಾಷಣೆ ನಡೆದ ನಂತರ ಪೋಷಕರಿಗೆ ಅನುಮಾನ ಬಂದಿದೆ. ಬಳಿಕ ನಟಿಯ ಪೋಷಕರು ಪೊಲೀಸರಿಗೆ ದೂರು ಕೊಟ್ಟಿದ್ದರು.

ನಟಿ ಶಾಮ್ನಾ ಕಾಸಿಮ್ ಅವರನ್ನು ಸಂಪರ್ಕಿಸಲು ಚಿತ್ರರಂಗದ ಲಿಂಕ್ ಇರುವ ಹೇರ್ ಸ್ಟೈಲಿಸ್ಟ್ ಹ್ಯಾರಿಸ್​ನನ್ನು ಈ ಗ್ಯಾಂಗ್ ಬಳಸಿಕೊಂಡಿದೆ. ಈ ಗ್ಯಾಂಗ್ ವಿರುದ್ಧ ಈಗಾಗಲೇ ಹಲವರು ದೂರು ನೀಡಿದ್ದಾರೆ ಎಂದು ಕೊಚ್ಚಿ ಪೊಲೀಸ್ ಆಯುಕ್ತ ವಿಜಯ್ ಸಖಾರೆ ಅವರು ತಿಳಿಸಿದ್ದಾರೆ.

ಇದು ಗೋಲ್ಡ್​ ಸ್ಮಗ್ಲಿಂಗ್ ಗ್ಯಾಂಗ್ ವಂಚನೆ ಜಾಲ ಬಂಧಿತರು ದೊಡ್ಡ ಚಿನ್ನದ ಕಳ್ಳ ಸಾಗಣೆ ವಂಚನೆ ಜಾಲಕ್ಕೆ ಸೇರಿದವರು. ತನ್ನ ಬಲೆಗೆ ಬಿದ್ದ ತಾರಾಮಣಿಗಳನ್ನು ಸುಲಭವಾಗಿ ಗೋಲ್ಡ್ ಸ್ಮಗ್ಲಿಂಗ್ ಜಾಲದಲ್ಲಿ ಬಳಸುವುದು ಇವರ ಉದ್ದೇಶ, ಸಕಾಲದಲ್ಲಿ ತಮ್ಮ ಕುಟುಂಬಸ್ಥರು ಎಚ್ಚೆತ್ತುಕೊಂಡಿದ್ದರಿಂದ ​ನಟಿ ಶಾಮ್ನಾ ಕಾಸಿಮ್ ಈ ಜಾಲದಲ್ಲಿ ಸಿಲುಕುವುದು ತಪ್ಪಿದೆ. ಇನ್ನೂ ಅನೇಕ ತಾರಾಮಣಿಗಳು ಇಂತಹ ಜಾಲದಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ಕೇರಳ ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ.

Published On - 6:58 pm, Tue, 30 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು