AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kode Muruga: ‘ಕೊಡೆ ಮುರುಗ’ ಚಿತ್ರ ಮರು ಬಿಡುಗಡೆ; ಮಾ.10ಕ್ಕೆ ಮತ್ತೆ ಚಿತ್ರಮಂದಿರಕ್ಕೆ ಬರಲಿದೆ ಕಾಮಿಡಿ ಸಿನಿಮಾ

Kode Muruga Movie | Sandalwood News: ‘ಕೊಡೆ ಮುರುಗ’ ಚಿತ್ರದಲ್ಲಿ ಮುನಿಕೃಷ್ಣ, ಪಲ್ಲವಿ ಗೌಡ ಮುಖ್ಯ ಪಾತ್ರ ಮಾಡಿದ್ದಾರೆ. ಸ್ವಾತಿ ಗುರುದತ್, ಅರವಿಂದ್​ ರಾವ್, ರಾಕ್‌ಲೈನ್ ಸುಧಾಕರ್, ಮೋಹನ್ ಜುನೇಜಾ, ಕುರಿ ಪ್ರತಾಪ್, ಗೋವಿಂದೇ ಗೌಡ ಮುಂತಾದವರು ಕೂಡ ನಟಿಸಿದ್ದಾರೆ.

Kode Muruga: ‘ಕೊಡೆ ಮುರುಗ’ ಚಿತ್ರ ಮರು ಬಿಡುಗಡೆ; ಮಾ.10ಕ್ಕೆ ಮತ್ತೆ ಚಿತ್ರಮಂದಿರಕ್ಕೆ ಬರಲಿದೆ ಕಾಮಿಡಿ ಸಿನಿಮಾ
ಸುಬ್ರಹ್ಮಣ್ಯ ಪ್ರಸಾದ್, ಮುನಿಕೃಷ್ಣ
ಮದನ್​ ಕುಮಾರ್​
|

Updated on:Mar 06, 2023 | 4:47 PM

Share

ಕೊರೊನಾ ವೈರಸ್​ (Corona Virus) ಕಾರಣದಿಂದ ಕಷ್ಟ ಅನುಭವಿಸಿದ ಸಿನಿಮಾಗಳು ಹಲವು. 2020ರಲ್ಲಿ ಅನೇಕ ಚಿತ್ರತಂಡಗಳಿಗೆ ಲಾಕ್​ಡೌನ್​ನಿಂದ ತೊಂದರೆ ಆಗಿತ್ತು. ಆ ರೀತಿ ಕಷ್ಟಕ್ಕೆ ಸಿಲುಕಿದ ಸಿನಿಮಾಗಳ ಪೈಕಿ ‘ಕೊಡೆ ಮುರುಗ’ (Kode Muruga) ಚಿತ್ರ ಕೂಡ ಪ್ರಮುಖವಾದ್ದು. ಬಿಡುಗಡೆಯಾದ ಮೂರೇ ದಿನಕ್ಕೆ ಈ ಸಿನಿಮಾ ಪ್ರದರ್ಶನ ನಿಲ್ಲಿಸುವಂತಾಗಿತ್ತು. ವಿಶೇಷ ಏನೆಂದರೆ, ಈ ಚಿತ್ರವನ್ನು ಮತ್ತೆ ಬಿಡುಗಡೆ ಮಾಡಲು ನಿರ್ಮಾಪಕರು ತೀರ್ಮಾನಿಸಿದ್ದಾರೆ. ಮಾರ್ಚ್ 10ರಂದು ‘ಕೊಡೆ ಮುರುಗ’ ಚಿತ್ರ ರೀ-ರಿಲೀಸ್​ ಆಗಲಿದೆ. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಈ ವಿಷಯ ತಿಳಿಸಿದೆ. ಈ ಸಿನಿಮಾದಲ್ಲಿ ಮುನಿಕೃಷ್ಣ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಪಲ್ಲವಿ ಗೌಡ (Pallavi Gowda) ಅವರು ನಾಯಕಿಯಾಗಿ ನಟಿಸಿದ್ದಾರೆ. ಮರು ಬಿಡುಗಡೆ ಮಾಡುತ್ತಿರುವುದರ ಉದ್ದೇಶ ಏನು ಎಂಬುದನ್ನು ಚಿತ್ರತಂಡದವರು ವಿವರಿಸಿದ್ದಾರೆ.

ಕೆ. ರವಿಕುಮಾರ್​ ನಿರ್ಮಾಣದ ‘ಕೊಡೆ ಮುರುಗ’ ಚಿತ್ರಕ್ಕೆ ಸುಬ್ರಹ್ಮಣ್ಯ ಪ್ರಸಾದ್​ ನಿರ್ದೇಶನ ಮಾಡಿದ್ದಾರೆ. ‘ಈ ಮೊದಲು ನಾವು ಈ ಸಿನಿಮಾವನ್ನು ರಾಂಗ್ ಟೈಮ್‌ನಲ್ಲಿ ಬಿಡುಗಡೆ ಮಾಡಿದ್ದೆವು. ಉತ್ತಮ ಪ್ರತಿಕ್ರಿಯೆ ಸಿಕ್ಕರೂ ಕೂಡ ಜನರು ಚಿತ್ರಮಂದಿರಕ್ಕೆ ಬರುವ ಪರಿಸ್ಥಿತಿ ಇರಲಿಲ್ಲ. ಆದ್ದರಿಂದ ಕೇವಲ ಮೂರೇ ದಿನಕ್ಕೆ ಪ್ರದರ್ಶನ ನಿಲ್ಲಿಸಿದ್ದೆವು. ಮತ್ತೆ ಬಿಡುಗಡೆ ಮಾಡಲು ಒಳ್ಳೆಯ ಸಂದರ್ಭಕ್ಕಾಗಿ ಕಾಯುತ್ತಿದ್ದೆವು. ಮಾರ್ಚ್ 10ರಂದು ರಾಜ್ಯಾದ್ಯಂತ ರಿಲೀಸ್​ ಮಾಡುತ್ತೇವೆ. ಈ ಬಾರಿ ಸಿನಿಮಾ ಖಂಡಿತಾ ಗೆಲ್ಲುತ್ತದೆ ಎಂಬ ವಿಶ್ವಾಸ ನಮಗಿದೆ’ ಎಂದಿದ್ದಾರೆ ನಿರ್ಮಾಪಕ ಕೆ. ರವಿಕುಮಾರ್​.

ಇದನ್ನೂ ಓದಿ: 19 20 21 Movie Review: ನಾಡಿನ ಜನ ನೋಡಲೇಬೇಕಾದ ಕಾಡಿನ ಮಕ್ಕಳ ಕಥೆ ಮತ್ತು ಘನತೆ

ಜನಪ್ರಿಯ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ಬರುವ ಒಂದು ಪಾತ್ರದ ಹೆಸರು ಮುರುಗ. ಆ ಪಾತ್ರವನ್ನೇ ಪ್ರಧಾನವಾಗಿ ಇಟ್ಟುಕೊಂಡು ಸುಬ್ರಹ್ಮಣ್ಯ ಪ್ರಸಾದ್ ಅವರು ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಕೊರೊನಾ ಸಮಯದಲ್ಲೂ ತಮ್ಮ ಚಿತ್ರ ಹೌಸ್​ಫುಲ್​ ಆಗಿತ್ತು ಎಂಬುದನ್ನು ನಾಯಕ ಮುನಿಕೃಷ್ಣ ಮೆಲುಕು ಹಾಕಿದ್ದಾರೆ. ಈ ಬಾರಿ ಕೂಡ ಅದೇ ರೀತಿಯ ರೆಸ್ಪಾನ್ಸ್​ ಸಿಗಲಿದೆ ಎಂಬ ಭರವಸೆ ಅವರಿಗೆ ಇದೆ.

ಇದನ್ನೂ ಓದಿ: Abhishek Bachchan: ‘ಕಬ್ಜ’ ಟ್ರೇಲರ್​ ನೋಡಿ ಅಭಿಷೇಕ್​ ಬಚ್ಚನ್​ ಫಿದಾ; ವಿತರಕರಿಗೆ ಮೆಚ್ಚುಗೆ ಸಂದೇಶ ಕಳಿಸಿದ ನಟ

ಮುನಿಕೃಷ್ಣ, ಪಲ್ಲವಿ ಗೌಡ ಜೊತೆ ಸ್ವಾತಿ ಗುರುದತ್, ಅರವಿಂದ್​ ರಾವ್, ಅಶೋಕ್ ಶರ್ಮ, ರಾಕ್‌ಲೈನ್ ಸುಧಾಕರ್, ಸ್ವಯಂವರ ಚಂದ್ರು, ಮೋಹನ್ ಜುನೇಜಾ, ಕುರಿ ಪ್ರತಾಪ್, ಗೋವಿಂದೇ ಗೌಡ ಮುಂತಾದವರು ಕೂಡ ನಟಿಸಿದ್ದಾರೆ.

ಇದನ್ನೂ ಓದಿ: New Kannada Movie: ಈ ವಾರ ರಿಲೀಸ್​ ಆಗ್ತಿವೆ ಕನ್ನಡದ 12 ಸಿನಿಮಾಗಳು; ಪ್ರೇಕ್ಷಕರ ಮುಂದಿದೆ ಸಿಕ್ಕಾಪಟ್ಟೆ ಆಯ್ಕೆ

‘ಕೊಡೆ ಮುರುಗ’ ಚಿತ್ರಕ್ಕೆ ಸೆಟ್‌ನಲ್ಲಿಯೇ ಶೇಕಡ 80ರಷ್ಟು ಶೂಟಿಂಗ್ ಮಾಡಲಾಗಿದೆ. ವಿಶೇಷ ಪಾತ್ರವೊಂದರಲ್ಲಿ ‘ಲೂಸ್ ಮಾದ’ ಯೋಗಿ ಕಾಣಿಸಿಕೊಂಡಿದ್ದಾರೆ. ರುದ್ರಮುನಿ ಬೆಳಗೆರೆ ಛಾಯಾಗ್ರಹಣ ಮಾಡಿದ್ದಾರೆ. ತ್ಯಾಗರಾಜ್ ಸಂಗೀತ ನಿರ್ದೇಶನ, ಸಿ. ರವಿಚಂದ್ರನ್ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಭೂಷಣ್, ಸ್ಟಾರ್ ಗಿರಿ ನೃತ್ಯ ನಿರ್ದೇಶನ ಮಾಡಿದ್ದಾರೆ. ಮಾಸ್ ಮಾದ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:47 pm, Mon, 6 March 23

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ