AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koli Esru Movie: ಕನ್ನಡದ ‘ಕೋಳಿ ಎಸ್ರು’ ಚಿತ್ರಕ್ಕೆ ಅಟ್ಟಾವಾ ಇಂಡಿಯನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ 2 ಪ್ರಮುಖ ಪ್ರಶಸ್ತಿ

Akshatha Pandavapura: ಕೆನಡಾದಲ್ಲಿ ‘ಕೋಳಿ ಎಸ್ರು’ ಸಿನಿಮಾಗೆ ವಿಶೇಷ ಮನ್ನಣೆ ದೊರೆದಿದೆ. ನಟಿ ಅಕ್ಷತಾ ಪಾಂಡವಪುರ ಹಾಗೂ ನಿರ್ದೇಶಕಿ ಚಂಪಾ ಶೆಟ್ಟಿ ಅವರು ಪ್ರಶಸ್ತಿ ಪಡೆದಿದ್ದಾರೆ.

Koli Esru Movie: ಕನ್ನಡದ ‘ಕೋಳಿ ಎಸ್ರು’ ಚಿತ್ರಕ್ಕೆ ಅಟ್ಟಾವಾ ಇಂಡಿಯನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ 2 ಪ್ರಮುಖ ಪ್ರಶಸ್ತಿ
ಅಕ್ಷತಾ ಪಾಂಡವಪುರ, ಚಂಪಾ ಶೆಟ್ಟಿ
ಮದನ್​ ಕುಮಾರ್​
|

Updated on:Jun 18, 2023 | 10:36 AM

Share

ಸ್ಯಾಂಡಲ್​ವುಡ್​ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಕಮರ್ಷಿಯಲ್​ ದೃಷ್ಟಿಯಿಂದ ಮಾತ್ರವಲ್ಲದೇ ಕಥಾವಸ್ತುವಿನ ಕಾರಣದಿಂದಲೂ ಕನ್ನಡದ ಚಿತ್ರಗಳು ಗಮನ ಸೆಳೆಯುತ್ತಿವೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂದರೆ ‘ಕೋಳಿ ಎಸ್ರು’ (Koli Esru) ಸಿನಿಮಾ. ಈ ಚಿತ್ರಕ್ಕೆ ಕೆನಡಾದ ಅಟ್ಟಾವಾ ಇಂಡಿಯನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ ಎರಡು ಪ್ರಮುಖ ಪ್ರಶಸ್ತಿಗಳು ಸಿಕ್ಕಿವೆ. ನಿರ್ದೇಶಕಿ ಚಂಪಾ ಶೆಟ್ಟಿ (Champa Shetty) ಅವರು ‘ಅತ್ಯುತ್ತಮ ನಿರ್ದೇಶನ’ ಹಾಗೂ ಅಕ್ಷತಾ ಪಾಂಡವಪುರ (Akshatha Pandavapura) ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಈಗಾಗಲೇ ಬೇರೆ ಬೇರೆ ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಈ ಚಿತ್ರಕ್ಕೆ ಮತ್ತೊಂದು ಗರಿ ಸೇರ್ಪಡೆ ಆದಂತೆ ಆಗಿದೆ. ಚಿತ್ರತಂಡದವರು ಸೋಶಿಯಲ್​ ಮೀಡಿಯಾ ಮೂಲಕ ಈ ಬಗ್ಗೆ ಖುಷಿ ಹಂಚಿಕೊಂಡಿದ್ದಾರೆ. ಪೃಥ್ವಿ ಕೊಣನೂರು ಅವರ ‘ಹದಿನೇಳೆಂಟು’ ಚಿತ್ರಕ್ಕೆ ‘ಅತ್ಯುತ್ತಮ ಸಿನಿಮಾ’ ಪ್ರಶಸ್ತಿ ಸಿಕ್ಕಿದೆ.

‘ಓಹ್​ ಮೈ ಗಾಡ್​… ನಿಜವಾಗಿಯೂ? ಕೋಳಿ ಎಸ್ರು ಚಿತ್ರದ ಅಭಿನಯಕ್ಕಾಗಿ ಮತ್ತೊಂದು ಪ್ರಶಸ್ತಿ. ನನ್ನ ಗುರು ಆದಿಲ್​ ಹುಸೇನ್​ ಅವರ ಜೊತೆ ಈ ಪ್ರಶಸ್ತಿ ಪಡೆಯುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ. ಅತ್ಯುತ್ತಮ ನಿರ್ದೇಶಕಿ ಪ್ರಶಸ್ತಿ ಪಡೆದ ಚಂಪಾ ಶೆಟ್ಟಿ ಅವರಿಗೆ ಅಭಿನಂದನೆಗಳು. ‘ಹದಿನೇಳೆಂಟು’ ಚಿತ್ರಕ್ಕೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದ ಪೃಥ್ವಿ ಕೊಣನೂರು ಅವರಿಗೂ ಅಭಿನಂದನೆ. ಇದು ನನ್ನ ಎರಡನೇ ಪ್ರಶಸ್ತಿ’ ಎಂದು ಅಕ್ಷತಾ ಪಾಂಡವಪುರ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

‘ಓಹ್ಹೋ! ಖುಷಿ ಖುಷಿ ಖುಷಿ.. ಕೆನಡಾದ ಪ್ರತಿಷ್ಠಿತ ಅಟ್ಟಾವಾ ಇಂಡಿಯನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ ನನಗೆ ಬೆಸ್ಟ್​ ಡೈರೆಕ್ಟರ್​ ಅವಾರ್ಡ್​​ ಸಿಕ್ಕಿರುವುದು ನಮ್ಮ ಇಡೀ ತಂಡಕ್ಕೆ ಸಿಕ್ಕ ಗರಿ. ಜೊತೆಗೆ ಅಕ್ಷತಾಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿರುವುದು ಮತ್ತೂ ಖುಷಿ. ಕಾರಣರಾದ ಎಲ್ಲರಿಗೂ ಮತ್ತು ಎಲ್ಲ ಹಿತೈಶಿಗಳಿಗೂ ರಾಶಿ ರಾಶಿ ಪ್ರೀತಿಯ ಧನ್ಯವಾದಗಳು’ ಎಂದು ಚಂಪಾ ಶೆಟ್ಟಿ ಅವರು ಪೋಸ್ಟ್​ ಮಾಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಅಕ್ಷತಾ ಪಾಂಡವಪುರ ಅವರು ಭರವಸೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಅವರು ನಟಿಸಿದ ‘ಪಿಂಕಿ ಎಲ್ಲಿ’ ಸಿನಿಮಾ ಕೂಡ ಹಲವಾರು ಸಿನಿಮೋತ್ಸವಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿ ಪಡೆದಿದೆ. ಈಗ ಅವರು ‘ಕೋಳಿ ಎಸ್ರು’ ಸಿನಿಮಾ ಮೂಲಕವೂ ಗಮನ ಸೆಳೆಯುತ್ತಿದ್ದಾರೆ. ಅದೇ ರೀತಿ ನಿರ್ದೇಶಕಿ ಚಂಪಾ ಶೆಟ್ಟಿ ಅವರು ‘ಅಮ್ಮಚ್ಚಿ ಎಂಬ ನೆನಪು’ ಸಿನಿಮಾವನ್ನು ನಿರ್ದೇಶಿಸಿ ಗುರುತಿಸಿಕೊಂಡಿದ್ದರು. ‘ಪಿಂಕಿ ಎಲ್ಲಿ’ ಸಿನಿಮಾದ ನಿರ್ದೇಶನದಿಂದ ಪೃಥ್ವಿ ಕೊಣನೂರು ಅವರು ಮೆಚ್ಚುಗೆ ಪಡೆದರು. ಈ ಮೂವರೂ ಈಗ ‘ಅಟ್ಟಾವಾ ಇಂಡಿಯನ್​ ಫಿಲ್ಮ್​ ಫೆಸ್ಟಿವಲ್​’ನಲ್ಲಿ ಕನ್ನಡದ ಸಿನಿಮಾಗಳಿಗೆ ಗರಿಮೆ ಹೆಚ್ಚಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:32 am, Sun, 18 June 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ