AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮಲ್ ನಟನೆಯ ‘ಕೋಣ’ ಬಿಡುಗಡೆಗೆ ದಿನಾಂಕ ನಿಗದಿ: ನಿರ್ಮಾಪಕಿಯಾದ ತನಿಷಾ ಕುಪ್ಪಂಡ

Komal-Tanisha Kuppanda: ಬಿಗ್​​ಬಾಸ್ ಮೂಲಕ ಖ್ಯಾತಿ ಪಡೆದ ನಟಿ ತನಿಷಾ ಕುಪ್ಪಂಡ ನಾಯಕಿಯಾಗಿ ಹಾಗೂ ನಿರ್ಮಾಪಕಿಯೂ ಆಗಿರುವ ‘ಕೋಣ’ ಸಿನಿಮಾದ ಬಿಡುಗಡೆ ದಿನಾಂಕ ನಿಗದಿ ಆಗಿದೆ. ಅಂದಹಾಗೆ ‘ಕೋಣ’ ಸಿನಿಮಾನಲ್ಲಿ ಕೋಮಲ್ ನಾಯಕ. ಈ ಸಿನಿಮಾದ ಮೂವರು ನಿರ್ಮಾಪಕರಲ್ಲಿ ತನಿಷಾ ಕುಪ್ಪಂಡ ಸಹ ಒಬ್ಬರು.

ಕೋಮಲ್ ನಟನೆಯ ‘ಕೋಣ’ ಬಿಡುಗಡೆಗೆ ದಿನಾಂಕ ನಿಗದಿ: ನಿರ್ಮಾಪಕಿಯಾದ ತನಿಷಾ ಕುಪ್ಪಂಡ
Kona Kannada Movie
ಮಂಜುನಾಥ ಸಿ.
|

Updated on: Oct 19, 2025 | 7:34 PM

Share

ಬಿಗ್​​ಬಾಸ್​​ (Bigg Boss) ಸ್ಪರ್ಧಿಯಾಗಿ ಭಾರಿ ಜನಪ್ರಿಯತೆ ಗಳಿಸಿರುವ, ನಟಿ, ಉದ್ಯಮಿ ತನಿಷಾ ಕುಪ್ಪಂಡ ಇದೀಗ ಸಿನಿಮಾ ನಿರ್ಮಾಪಕಿ ಆಗಿದ್ದಾಶರೆ. ಕುಪ್ಪಂಡಾಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ತನಿಶಾ ಕುಪ್ಪಂಡ, ಕಾರ್ತಿಕ್ ಕಿರಣ್ ಸಂಕಪಾಲ್, ರವಿಕಿರಣ್ .ಎನ್ ಅವರುಗಳು ‘ಕೋಣ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಕೋಮಲ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಕೋಣ’ ಸಿನಿಮಾ ಇದೇ ತಿಂಗಳ 31ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರಕ್ಕೆ ಇದೀಗ ಚಾಲನೆ ನೀಡಲಾಗಿದೆ.

ಇತ್ತೀಚೆಗಷ್ಟೆ ‘ಕೋಣ’ ಸಿನಿಮಾದ ಸುದ್ದಿಗೋಷ್ಠಿಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ಕೋಮಲ್, ‘ಪ್ರಾಣಿಯಾಗಿ ಕೋಣ ಚಿಕ್ಕ ವಯಸ್ಸಿನಿಂದ ನನಗೆ ಕನೆಕ್ಟೆಡ್. ನಾನು ಸ್ಕೂಲ್ ನಲ್ಲಿ ಓದಬೇಕಾದರೆ‌ ನಮ್ಮ ಟೀಚರ್ ನನ್ನನ್ನು ಕೋಣ ಕೋಣ ಎನ್ನುತ್ತಿದ್ದರು. ನನಗೆ ಆಗ ಕೋಪ ಬರುತ್ತಿತ್ತು. ಈಗ ಕೋಣ ಪಿಕ್ಚರ್ಸ್ ಮಾಡುತ್ತಿರುವುದು ಖುಷಿಯಾಗಿದೆ. ಇಡೀ ತಂಡದ ಸಹಕಾರದಿಂದ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಚಿತ್ರ ನನಗೆ ತೃಪ್ತಿ ಕೊಟ್ಟಿದೆ ಎಂದರು.

ನಟಿ, ಸಹ ನಿರ್ಮಾಪಕಿ ತನಿಶಾ ಕುಪ್ಪಂಡ ಮಾತನಾಡಿ, ‘ಕೋಣ’ ಸಿನಿಮಾದಲ್ಲಿ ನಾನು ಲಕ್ಷ್ಮಿ ಎಂಬ ಪಾತ್ರದಲ್ಲಿ ನಟಿಸುತ್ತಿದ್ದೇನೆ. ಅಕ್ಟೋಬರ್ 31ರಂದು ನಮ್ಮ ಚಿತ್ರ ತೆರೆಗೆ ಬರ್ತಿದೆ. ಕೋಮಲ್ ಸರ್ ನಾರಾಯಣ ಎಂಬ ಪಾತ್ರ ಮಾಡಿದ್ದಾರೆ. ಅವರ ಪತ್ನಿಯಾಗಿ ನಾನು ನಟಿಸಿದ್ದೇನೆ. ಇಷ್ಟು ದಿನ ನೀವು ನೋಡದ ರೀತಿಯ ಪಾತ್ರದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಈ ಪಾತ್ರ ನೋಡಿ ಇವರು ಈ ರೀತಿ ನಟಿಸಬಹುದಾ ಎಂದು ಕೆಲವರು ಆಶ್ಚರ್ಯ ವ್ಯಕ್ತಪಡಿಸಬಹುದು. ಪ್ರೊಡ್ಯೂಸರ್ ಆಗಿ ನಾನು ಹೆಜ್ಜೆ ಮುಂದೆ ಇಡಲು ಕಾರಣ ರವಿ ಕಿರಣ್ ಸರ್ ಹಾಗೂ ಕಾರ್ತಿಕ್ ಸರ್ ಎಂದರು.

ಇದನ್ನೂ ಓದಿ:ಬ್ಯಾಂಗಲ್ ಬಂಗಾರಿ ಆದ ನಟಿ ತನಿಷಾ ಕುಪ್ಪಂಡ

ಕೋಮಲ್ ಕುಮಾರ್ ನಾಯಕನಾಗಿ, ತನಿಶಾ ಕುಪ್ಪಂಡ ನಾಯಕಿಯಾಗಿ ನಟಿಸಿದ್ದಾರೆ. ಕೀರ್ತಿರಾಜ್, ರಿತ್ವಿ ಜಗದೀಶ್, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಎಂ.ಕೆ.ಮಠ್, ರಂಜಿತ್ ಗೌಡ, ತುಕಾಲಿ ಸಂತೋಷ್, ಹುಲಿ ಕಾರ್ತಿಕ್, ನಿರಂಜನ್, ಅನಂತ್, ಶಿಶಿರ್ ಶಾಸ್ತ್ರಿ, ಗೋಲ್ಡ್ ಸುರೇಶ್, ಸುಷ್ಮಿತ, ಜಗಪ್ಪ, ಮಂಜು ಪಾವಗಡ, ಕುರಿ ಸುನಿಲ್, ನಮ್ರತಾ ಗೌಡ, ವಿನಯ್ ಗೌಡ, ಮೋಹನ್ ಕೃಷ್ಣರಾಜ್ ಹೀಗೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ. ಡಾರ್ಕ್ ಕಾಮೆಡಿ ಶೈಲಿಯಲ್ಲಿ ‘ಕೋಣ’ ಸಿನಿಮಾ ಮೂಡಿಬರಲಿದೆ. ಹರಿಕೃಷ್ಣ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ನಾಗೇಶ್ ಎನ್ ಸಹ ನಿರ್ದೇಶಕರಾಗಿ ಆಗಿ ಕೆಲಸ ಮಾಡಿದ್ದಾರೆ. ಒಂದು ನೈಜ ಘಟನೆಯನ್ನು ಆಧರಿಸಿ ಈ ಚಿತ್ರ ತಯಾರಾಗಿದೆ.

ಶಶಾಂಕ್ ಶೇಷಗಿರಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ವೀನಸ್ ನಾಗರಾಜ್ಮೂರ್ತಿ ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದು, ಉಮೇಶ್ ಆರ್ಬಿ ಅವರ ಸಂಕಲನ ಚಿತ್ರಕ್ಕಿದೆ, ಸಾಹಸ ನಿರ್ದೇಶಕರಾಗಿ ವಿನೋದ್‌ ಕುಮಾರ್‌, ಮುರುಗ ಮಾಸ್ಟರ್ ಅವರ ನೃತ್ಯ ನಿರ್ದೇಶನ ಹಾಗೂ ಶಶಿಕುಮಾರ್ ಅವರ ಸಂಭಾಷಣೆ ಕೋಣ ಚಿತ್ರಕ್ಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?