AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡು ಬಡತನದಲ್ಲೂ ಅಪ್ಪುಗಾಗಿ ಅದ್ದೂರಿ ಕಾರ್ಯಕ್ರಮ; ಮಗನಿಗೆ ಪುನೀತ್​ ಎಂದು ನಾಮಕರಣ

ಪುನೀತ್​ ರಾಜ್​ಕುಮಾರ್​ ಎಂದರೆ ಪಕ್ಕೀರಪ್ಪ, ಪಾರ್ವತಿ ದಂಪತಿಗೆ ಅಚ್ಚುಮೆಚ್ಚು. ಅಪ್ಪು​ ಮೇಲಿನ ಅಭಿಮಾನಕ್ಕಾಗಿ ಅವರು ತಮ್ಮ ಮಗನಿಗೆ ಪುನೀತ್​ ಎಂದು ನಾಮಕರಣ ಮಾಡಿದ್ದಾರೆ.

ಕಡು ಬಡತನದಲ್ಲೂ ಅಪ್ಪುಗಾಗಿ ಅದ್ದೂರಿ ಕಾರ್ಯಕ್ರಮ; ಮಗನಿಗೆ ಪುನೀತ್​ ಎಂದು ನಾಮಕರಣ
ಪಾರ್ವತಿ, ಪಕ್ಕೀರಪ್ಪ, ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Jan 27, 2022 | 9:54 AM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡಿದ್ದು ಕನ್ನಡ ಚಿತ್ರರಂಗದ ಪಾಲಿಗೆ ದೌರ್ಭಾಗ್ಯದ ಸಂಗತಿ. ಅಪ್ಪು ಅಗಲಿ ಮೂರು ತಿಂಗಳು ಕಳೆಯುತ್ತಿದೆ. ಎಷ್ಟೇ ದಿನಗಳು ಉರುಳಿದರು ಅಭಿಮಾನಿಗಳ (Puneeth Rajkumar Fans) ಮನದಲ್ಲಿ ‘ಪವರ್​ ಸ್ಟಾರ್​’ ನೆನಪು ಸದಾ ಹಸಿರಾಗಿ ಇರುತ್ತದೆ. ಪ್ರತಿ ದಿನವೂ ಅವರ ಹೆಸರನ್ನು ಅಮರವಾಗಿಸುವ ಕಾರ್ಯ ಅಭಿಮಾನಿಗಳಿಂದ ನಡೆಯುತ್ತಿದೆ. ರಸ್ತೆ, ವೃತ್ತ, ಪಾರ್ಕ್​ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪುನೀತ್​ ರಾಜ್​ಕುಮಾರ್​ ಹೆಸರನ್ನು ಇಡುವ ಕಾರ್ಯ ನಡೆದಿದೆ. ಎಷ್ಟೋ ಜನರು ತಮ್ಮ ಮಕ್ಕಳಿಗೆ ಪುನೀತ್​ ಎಂದು ನಾಮಕರಣ ಮಾಡುತ್ತಿದ್ದಾರೆ. ಕೊಪ್ಪಳ ತಾಲೂಕಿನ ಬಂಡಿ ಹರ್ಲಾಪುರ ಗ್ರಾಮದಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ಈ ಗ್ರಾಮದ ಪಕ್ಕೀರಪ್ಪ, ಪಾರ್ವತಿ ದಂಪತಿಯು ತಮ್ಮ ಮಗನಿಗೆ ಪುನೀತ್​ ಎಂದು ಹೆಸರಿಟ್ಟು ಅದ್ದೂರಿಯಾಗಿ ನಾಮಕರಣ (Naming Ceremony) ಸಮಾರಂಭ ಮಾಡಿದ್ದಾರೆ. ಅಪ್ಪು ಮೇಲಿನ ಅಭಿಮಾನಕ್ಕಾಗಿ ಈ ಕಾರ್ಯ ಮಾಡಿರುವ ದಂಪತಿಗೆ ಬಡತನ ಅಡ್ಡಿ ಆಗಿಲ್ಲ. ಕಡು ಬಡತನದ ನಡುವೆಯೂ ಅವರು ಈ ಸಮಾರಂಭ ಮಾಡಿರುವುದು ವಿಶೇಷ.

ಪುನೀತ್​ ರಾಜ್​ಕುಮಾರ್​ ಎಂದರೆ ಪಕ್ಕೀರಪ್ಪ, ಪಾರ್ವತಿ ದಂಪತಿಗೆ ಅಚ್ಚುಮೆಚ್ಚು. ನೆಚ್ಚಿನ ನಟನನ್ನು ಕಳೆದುಕೊಂಡ ನೋವು ಈ ದಂಪತಿಗೆ ಇದೆ. ‘ಪವರ್​ ಸ್ಟಾರ್​’​ ಮೇಲಿನ ಅಭಿಮಾನಕ್ಕಾಗಿ ಅವರು ತಮ್ಮ ಮಗನಿಗೆ ಪುನೀತ್​ ಎಂದು ನಾಮಕರಣ ಮಾಡಿದ್ದಾರೆ. ಜೊತೆಗೆ ರಸಮಂಜರಿ ಕಾರ್ಯಕ್ರಮ ನಡೆಸಿದ್ದಾರೆ. ದಂಪತಿಯ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ಸೂಚಿಸಿದ್ದಾರೆ.

ಯಾತನೂರು ಗ್ರಾಮದಲ್ಲೂ ಮಗುವಿಗೆ ಪುನೀತ್​ ಎಂದು ನಾಮಕರಣ:

ಕೆಲವೇ ದಿನಗಳ ಹಿಂದೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರು ಗ್ರಾಮದಲ್ಲೂ ಇದೇ ರೀತಿ ಆಯಿತು. ಯಾತನೂರು ಗ್ರಾಮದ ಸಿದ್ದು ಮತ್ತು ಕಾವೇರಿ ದಂಪತಿಗೆ ಪುನೀತ್​ ರಾಜ್​ಕುಮಾರ್​ ಎಂದರೆ ಅಪಾರ ಅಭಿಮಾನ. ಹಾಗಾಗಿ ತಮ್ಮ ಮೊದಲನೇ ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಿದ್ದಾರೆ. ಡಿ.5ರಂದು ಈ ಜೋಡಿಗೆ ಗಂಡು ಮಗು ಜನಿಸಿತು. ಹೆರಿಗೆಗೂ ಮುನ್ನವೇ ಅವರು ಈ ತೀರ್ಮಾನಕ್ಕೆ ಬಂದಿದ್ದರು. ಒಂದುವೇಳೆ ಗಂಡು ಮಗು ಜನಿಸಿದರೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಲು ದಂಪತಿ ನಿರ್ಧರಿಸಿದ್ದರು. ಅವರ ಆಸೆ ನೆರವೇರಿತು.

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡಿದ್ದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಅವರು ಇಲ್ಲ ಎಂಬ ಸತ್ಯವನ್ನು ಒಪ್ಪಿಕೊಳ್ಳಲು ಯಾರಿಗೂ ಸಾಧ್ಯವಾಗುತ್ತಿಲ್ಲ. ಭೌತಿಕವಾಗಿ ಪುನೀತ್​ ನಮ್ಮೊಂದಿಗೆ ಇಲ್ಲದೇ ಇರಬಹುದು. ಆದರೆ ಅಭಿಮಾನಿಗಳ ಎದೆಯಲ್ಲಿ ಪುನೀತ್​ ಎಂದೆಂದಿಗೂ ಅಮರ. ಕಂಠೀರವ ಸ್ಡುಡಿಯೋ ಆವರಣದಲ್ಲಿ ಇರುವ ಅಪ್ಪು ಸಮಾಧಿಗೆ ಪ್ರತಿದಿನ ನೂರಾರು ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ.

ಇದನ್ನೂ ಓದಿ:

ಅಪ್ಪು-ಅಂಬಿ ಫ್ಯಾನ್ಸ್​ ನಡುವೆ ಮನಸ್ತಾಪ? ರಸ್ತೆಗೆ ಪುನೀತ್​ ಹೆಸರಿಡುವುದಕ್ಕೆ ಅಂಬರೀಷ್​ ಅಭಿಮಾನಿಗಳ ಆಕ್ಷೇಪ

James Special Poster: ‘ಜೇಮ್ಸ್’​ ಹೊಸ ಪೋಸ್ಟರ್​ ರಿಲೀಸ್​; ಪುನೀತ್​ ಫ್ಯಾನ್ಸ್​ಗೆ ಗಣರಾಜ್ಯೋತ್ಸವದ ಗಿಫ್ಟ್

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ