AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರಗಜ್ಜ’ ಸಿನಿಮಾ ಶೂಟಿಂಗ್​ಗೆ ಗೂಂಡಾಗಳ ಅಡ್ಡಿ; ಚಿತ್ರೀಕರಣ ಸ್ಥಗಿತಗೊಳಿಸಿದ ತಂಡ

ದೈವ ಆರಾಧನೆ ಮಾಡುವ ಸಮುದಾಯದಿಂದ ಈ ರೀತಿ ತೊಂದರೆ ಆಗಿದೆ ಎಂದು ನಿರ್ದೇಶಕ ಸುಧೀರ್ ಅವರು ಹೇಳಿದ್ದಾರೆ. ‘ಅಕ್ಟೋಬರ್ 27ರಂದು ಶೂಟ್ ನಡೆಯುತ್ತಿತ್ತು. ಬೆಳಿಗ್ಗೆ ಶೂಟ್ ಮಾಡಿದೆವು. ಮಧ್ಯಾಹ್ನ ಊಟದ ನಂತರ ಕೆಲವರು ತಲ್ವಾರ್ ಹಿಡಿದು ಸೆಟ್​ಗೆ ಬಂದರು’ ಎಂದಿದ್ದಾರೆ ಅವರು.

‘ಕೊರಗಜ್ಜ’ ಸಿನಿಮಾ ಶೂಟಿಂಗ್​ಗೆ ಗೂಂಡಾಗಳ ಅಡ್ಡಿ; ಚಿತ್ರೀಕರಣ ಸ್ಥಗಿತಗೊಳಿಸಿದ ತಂಡ
ಶುಭಾ ಪೂಂಜಾ, ಗಣೇಶ್ ಆಚಾರ್ಯ
Follow us
Mangala RR
| Updated By: ರಾಜೇಶ್ ದುಗ್ಗುಮನೆ

Updated on:Oct 28, 2023 | 1:21 PM

ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾ (Koragajja Movie) ಹಲವು ವಿಚಾರಕ್ಕೆ ಸುದ್ದಿ ಆಗುತ್ತಿದೆ. ಈ ಸಿನಿಮಾಗೆ ಒಂದಲ್ಲ ಒಂದು ಅಡ್ಡಿ ಆಗುತ್ತಲೇ ಇದೆ. ಕುದುರೆ ಮುಖ ಸಮೀಪದ ಕಳಸದಲ್ಲಿ ‘ಕೊರಗಜ್ಜ’ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಗೂಂಡಾಗಳು ದಾಳಿ ಮಾಡಿದ್ದಾರೆ. ಇದರಿಂದ ಚಿತ್ರಕ್ಕೆ ಹಿನ್ನಡೆ ಆಗಿದೆ. ಖ್ಯಾತ ಬಾಲಿವುಡ್ ಕೊರಿಯೋಗ್ರಾಫರ್ ಗಣೇಶ್ ಆಚಾರ್ಯ, ನಟಿ ಶುಭಾ ಪೂಂಜ ಮೊದಲಾದವರು ಹಾಡಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಅದೃಷ್ಟವಶಾತ್ ಯಾರಿಗೂ ತೊಂದರೆ ಆಗಿಲ್ಲ. ಆದರೆ, ಸಿನಿಮಾ ಸೆಟ್ ನಾಶವಾಗಿದೆ.

ದೈವ ಆರಾಧನೆ ಮಾಡುವ ಸಮುದಾಯದಿಂದ ಈ ರೀತಿ ತೊಂದರೆ ಆಗಿದೆ ಎಂದು ನಿರ್ದೇಶಕ ಸುಧೀರ್ ಅವರು ಹೇಳಿದ್ದಾರೆ. ‘ಅಕ್ಟೋಬರ್ 27ರಂದು ಶೂಟ್ ನಡೆಯುತ್ತಿತ್ತು. ಬೆಳಿಗ್ಗೆ ಶೂಟ್ ಮಾಡಿದೆವು. ಮಧ್ಯಾಹ್ನ ಊಟದ ನಂತರ ಕೆಲವರು ತಲ್ವಾರ್ ಹಿಡಿದು ಸೆಟ್​ಗೆ ಬಂದರು. ಅವರು ಆವೇಶದಲ್ಲಿ ಇದ್ದರು. ನಂತರ ಮತ್ತೊಂದು ತಂಡದವರು ಸೆಟ್​ನ ಪರಿಶೀಲಿಸಿದ್ದಾರೆ. ಆ ಬಳಿಕ ಮೂರನೆ ತಂಡ ಕೂಡ ಬಂತು. ಅಲ್ಲಿ ಬಿಜೆಪಿ ನಾಯಕರಿದ್ದರು’ ಎಂದು ಟಿವಿ9 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ ಸುಧೀರ್.

‘ನನಗೆ ನನ್ನ ಟೀಮ್ ಮುಖ್ಯವಾಗಿತ್ತು. ಹೀಗಾಗಿ, ತಂಡದ ಜೊತೆ ಹೊರಟೆ. ಮಂಗಳೂರಿನಲ್ಲಿ ಶೂಟ್ ಮಾಡುವಾಗಲೂ ಹೀಗೆಯೇ ಆಗಿತ್ತು. ಭೂತರಾಧನೆ ಕುರಿತು ಸಿನಿಮಾ‌ ಮಾಡಬಾರದು ಎನ್ನುವ ಕಾರಣಕ್ಕೆ ಈ ರೀತಿ ಮಾಡಲಾಗಿದೆ‌‌ ಅನಿಸುತ್ತದೆ. ಕೊರಗಜ್ಜನ ಬಗ್ಗೆ ಸಿನಿಮಾ ಮಾಡುತ್ತಿರುವ ಕಾರಣದಿಂದ ಈ ರೀತಿ ಮಾಡಲಾಗಿದೆ. ಬಹುಶಃ ಎಲ್ಲರೂ ಇದನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಅನಿಸುತ್ತಿದೆ’ ಎಂದಿದ್ದಾರೆ ಸುಧೀರ್.

ಇದನ್ನೂ ಓದಿ: ‘ಪ್ರಾರ್ಥನೆ ಮಾಡಿದ ಬಳಿಕ ಮೂರೇ ತಿಂಗಳಲ್ಲಿ ಕೊರಗಜ್ಜನ ಪವಾಡ ನಡೆಯಿತು’: ನಟಿ ಮಾಲಾಶ್ರೀ

ಈ ಮೊದಲು ‘ಕೊರಗಜ್ಜ’ ಸಿನಿಮಾ ಶೂಟ್ ಆರಂಭಕ್ಕೂ ಮುನ್ನ ಪುತ್ತೂರಿನಲ್ಲಿ ಸೆಟ್ ವಿರ್ಮಾಣ ಮಾಡಲಾಗುತ್ತಿತ್ತು. ಸೆಟ್ ಕೆಲಸಗಾರರು ಸೆಟ್ ನಿರ್ಮಾಣದ ವೇಳೆ ಯಾವುದೋ ಆವೇಶ ಬಂದಂತವರಾಗಿ ಅಲ್ಲಲ್ಲೇ ಮೂರ್ಛೆ ಹೋಗತೊಡಗಿದ್ದರು. ಸೆಟ್ ಹಾಕಲಿದ್ದ ಈ ಜಾಗ ಕರಾವಳಿಯ ಉಗ್ರ ರೂಪದ ದೈವ ಗುಳಿಗನ ಸ್ಥಳವೆಂದು ಸ್ಥಳಿಯರು ತಿಳಿಸಿದರು. ಆ ಬಳಿಕ ಬೇರೆ ಕಡೆ ಸೆಟ್​ ನಿರ್ಮಾಣ ಮಾಡಲಾಯಿತು. ಕಬೀರ್ ಬೇಡಿ, ಶ್ರುತಿ, ಭವ್ಯ ಇನ್ನಿತರೆ ನಟರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:20 pm, Sat, 28 October 23