ಕಿಚ್ಚ ಸುದೀಪ್​ಗೆ ‘ಕೋಟಿ’ ಸಿನಿಮಾದ ಮೊದಲ ಟಿಕೆಟ್​; ಜೂನ್​ 14ರಂದು ರಿಲೀಸ್​

ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್​ ಅವರು ‘ಕೋಟಿ’ ಸಿನಿಮಾದ ಹೊಸ ಪೋಸ್ಟರ್​ ಬಿಡುಗಡೆ ಮಾಡಿದ್ದಾರೆ. ಅವರಿಗೆ ಸಿನಿಮಾದ ಮೊದಲ ಟಿಕೆಟ್​ ನೀಡಲಾಗಿದೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್, ಮೋಕ್ಷಾ ಕುಶಾಲ್​ ಅವರು ಜೋಡಿ ಆಗಿದ್ದಾರೆ. ವಿಲನ್​ ಪಾತ್ರದಲ್ಲಿ ರಮೇಶ್​ ಇಂದಿರಾ ನಟಿಸಿದ್ದಾರೆ. ಪರಮ್​ ಅವರು ನಿರ್ದೇಶನ ಮಾಡಿದ್ದಾರೆ.

ಕಿಚ್ಚ ಸುದೀಪ್​ಗೆ ‘ಕೋಟಿ’ ಸಿನಿಮಾದ ಮೊದಲ ಟಿಕೆಟ್​; ಜೂನ್​ 14ರಂದು ರಿಲೀಸ್​
ಪರಮ್​, ಡಾಲಿ ಧನಂಜಯ್​, ಕಿಚ್ಚ ಸುದೀಪ್​
Follow us
|

Updated on: Jun 07, 2024 | 9:38 PM

ಹಲವು ಕಾರಣಗಳಿಂದಾಗಿ ‘ಕೋಟಿ’ ಸಿನಿಮಾ (Kotee Kannada Movie) ಸುದ್ದಿ ಆಗುತ್ತಿದೆ. ಈಗಾಗಲೇ ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಸದ್ದು ಮಾಡಿದೆ. ಈ ಚಿತ್ರದಲ್ಲಿ ನಟ ಡಾಲಿ ಧನಂಜಯ (Daali Dhananjaya) ಅವರು ಕೋಟಿ ಎಂಬ ಸಾಮಾನ್ಯ ಡ್ರೈವರ್‌ ಪಾತ್ರವನ್ನು ಮಾಡಿದ್ದಾರೆ. ಯಾರಿಗೂ ಮೋಸ ಮಾಡದೇ ಮತ್ತು ನೋವು ನೀಡದೇ ತಾನು 1 ಕೋಟಿ ರೂಪಾಯಿ ಸಂಪಾದಿಸಬೇಕು ಎಂಬುದು ಈ ಸಿನಿಮಾದ ಕಥಾನಾಯಕನ ಗುರಿ. ಅವನು ಇದನ್ನೆಲ್ಲ ಮಾಡುವುದು ತನ್ನ ಫ್ಯಾಮಿಲಿಗಾಗಿ. ಆ ಹಾದಿಯಲ್ಲಿ ಅವನಿಗೆ ಏನೆಲ್ಲ ಕಷ್ಟಗಳು ಎದುರಾಗುತ್ತವೆ ಎಂಬುದನ್ನು ‘ಕೋಟಿ’ ಸಿನಿಮಾ ನೋಡಿ ತಿಳಿಯಬೇಕು. ಈ ಸಿನಿಮಾದ ಮೊದಲ ಟಿಕೆಟ್​ ಈಗ ಕಿಚ್ಚ ಸುದೀಪ್ (Kichcha Sudeep) ಅವರ ಕೈ ಸೇರಿದೆ.

ಜೂನ್ 14ರಂದು ‘ಕೋಟಿ’ ಸಿನಿಮಾ ಬಿಡುಗಡೆ ಆಗಲಿದೆ. ಚಿತ್ರತಂಡದವರು ಈ ಸಿನಿಮಾದ ಮೊದಲ ಟಿಕೆಟ್​ ಅನ್ನು ಕಿಚ್ಚ ಸುದೀಪ್​ ಅವರಿಗೆ ನೀಡಿದ್ದಾರೆ. ಅದ್ದೂರಿಯಾಗಿ ನಡೆದ ‘ಕೋಟಿ’ ಚಿತ್ರದ ವಿಶೇಷ ಪ್ರೀ-ರಿಲೀಸ್ ಟಿವಿ ಕಾರ್ಯಕ್ರಮಕ್ಕೆ ನಟ ಸುದೀಪ್ ಅವರು ಆಗಮಿಸಿದ್ದರು. ಒಂದು ಗಂಟೆಗೂ ಹೆಚ್ಚು ಸಮಯ ಅವರು ವೇದಿಕೆಯ ಮೇಲಿದ್ದು‌ ಅಭಿಮಾನಿಗಳನ್ನು ರಂಜಿಸಿದರು. ಈ ವೇದಿಕೆಯಲ್ಲಿ ‘ಕೋಟಿ’ ಚಿತ್ರತಂಡದವರು ಸುದೀಪ್​ಗೆ ಮೊದಲ ಟಿಕೆಟ್ ನೀಡಿ, ಅವರಿಂದ ಶುಭ ಹಾರೈಕೆ ಪಡೆದರು.

ಈ ಸಂದರ್ಭದಲ್ಲಿ ಸುದೀಪ್​ ಅವರು ‘ಕೋಟಿ’ ಸಿನಿಮಾದ ಹೊಸ ಪೋಸ್ಟರ್‌ ಬಿಡುಗಡೆ ಮಾಡಿದರು. ಈ ಸಿನಿಮಾಗೆ ಪರಮ್​ ನಿರ್ದೇಶನ ಮಾಡಿದ್ದಾರೆ. ಪ್ರೇಕ್ಷಕರು ‘ಕೋಟಿ’ ಖಂಡಿತಾ ಇಷ್ಟ ಆಗಲಿದೆ ಎಂಬ ಭರವಸೆ ಚಿತ್ರತಂಡಕ್ಕಿದೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಡಾಲಿ ಧನಂಜಯ್​ ಜೊತೆ ಮೋಕ್ಷಾ ಕುಶಾಲ್‌, ರಮೇಶ್ ಇಂದಿರಾ, ರಂಗಾಯಣ ರಘು, ಸರ್ದಾರ್‌ ಸತ್ಯ, ತಾರಾ, ಪೃಥ್ವಿ ಶಾಮನೂರು, ಅಭಿಷೇಕ್ ಶ್ರೀಕಾಂತ್, ತನುಜಾ ವೆಂಕಟೇಶ್, ವಿಜಯ್ ಶೋಭರಾಜ್ ಪವೂರ್ ಸೇರಿದಂತೆ ಹಲವು ನಟಿಸಿದ್ದಾರೆ.

ಇದನ್ನೂ ಓದಿ: ‘ಕೋಟಿ’ ಸಿನಿಮಾ ಟ್ರೇಲರ್​ ಮೂಲಕ ಕೌತುಕ ಹೆಚ್ಚಿಸಿದ ಡಾಲಿ, ಪರಮ್​

ಹಲವು ವರ್ಷಗಳ ಕಾಲ ‘ಕಲರ್ಸ್​ ಕನ್ನಡ’ ವಾಹಿನಿಯನ್ನು ಮುನ್ನಡೆಸಿದ ಪರಮೇಶ್ವರ್​ ಗುಂಡ್ಕಲ್​ (ಪರಮ್​) ಅವರು ‘ಕೋಟಿ’ ಸಿನಿಮಾ ಮೂಲಕ ನಿರ್ದೇಶಕರಾಗಿದ್ದಾರೆ. ಈ ಸಿನಿಮಾವನ್ನು ‘ಜಿಯೋ ಸ್ಟುಡಿಯೋಸ್’ ಮೂಲಕ ನಿರ್ಮಾಣ ಮಾಡಲಾಗಿದೆ. ‘ಕೋಟಿ’ ಸಿನಿಮಾದ 5 ಹಾಡುಗಳಿಗೆ ವಾಸುಕಿ ವೈಭವ್‌ ಸಂಗೀತ ನಿರ್ದೇಶನ ಮಾಡಿದ್ದಾರೆ. ನೋಬಿನ್‌ ಪೌಲ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ. ಪ್ರತೀಕ್‌ ಶೆಟ್ಟಿ ಸಂಕಲನ, ಅರುಣ್ ಅವರ ಛಾಯಾಗ್ರಹಣ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!