AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಶ್ ತಾಯಿಗೆ ತಲುಪೋವರೆಗೂ ಶೇರ್ ಮಾಡಿ’: ‘ಕೊತ್ತಲವಾಡಿ’ ಕಲಾವಿದನಿಗೆ ಇನ್ನೂ ಆಗಿಲ್ಲ ಪೇಮೆಂಟ್

‘ಕೊತ್ತಲವಾಡಿ’ ಸಿನಿಮಾ ಒಟಿಟಿಗೆ ಬಿಡುಗಡೆಯಾಗಿದೆ. ಆದರೆ, ಸಿನಿಮಾದಲ್ಲಿ ನಟಿಸಿದ್ದ ನಟ ಮಹೇಶ್ ಗುರು ತಮಗೆ ಸಂಭಾವನೆ ಬಂದಿಲ್ಲ ಎಂದು ಆರೋಪಿಸಿದ್ದಾರೆ. ಚಿತ್ರದ ನಿರ್ಮಾಪಕರಿಂದ ಸಹಾಯ ಪಡೆಯಲು ಅವರು ಪ್ರಯತ್ನಿಸಿದ್ದಾರೆ ಆದರೆ ಯಶಸ್ವಿಯಾಗಿಲ್ಲ. ಈ ವಿಷಯವನ್ನು ಯಶ್ ತಾಯಿ ಪುಷ್ಪ ಅವರಿಗೂ ತಿಳಿಸಲು ಅವರು ವಿಡಿಯೋ ಮಾಡಿದ್ದಾರೆ.

‘ಯಶ್ ತಾಯಿಗೆ ತಲುಪೋವರೆಗೂ ಶೇರ್ ಮಾಡಿ’: ‘ಕೊತ್ತಲವಾಡಿ’ ಕಲಾವಿದನಿಗೆ ಇನ್ನೂ ಆಗಿಲ್ಲ ಪೇಮೆಂಟ್
ಕೊತ್ತಲವಾಡಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Sep 16, 2025 | 12:35 PM

Share

‘ಕೊತ್ತಲವಾಡಿ’ ಸಿನಿಮಾ (Kothalavadi ) ಆಗಸ್ಟ್ 1ರಂದು ಅದ್ದೂರಿಯಾಗಿ ರಿಲೀಸ್ ಆಯಿತು. ಯಶ್ ತಾಯಿ ನಿರ್ಮಾಣದ ಸಿನಿಮಾ ಎಂಬ ಕಾರಣಕ್ಕೆ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿತ್ತು. ಆದರೆ, ಕೆಲವರು ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ನೀಡಿದರು. ಈಗ ಸಿನಿಮಾ ಒಟಿಟಿಗೂ ಕಾಲಿಟ್ಟಿದೆ. ಆದರೆ, ಕೆಲವು ಕಲಾವಿದರಿಗೆ ಇನ್ನೂ ಪೇಮೆಂಟ್ ಆಗಿಲ್ಲವಂತೆ. ಈ ಬಗ್ಗೆ ಚಿತ್ರದ ಕಲಾವಿದ ಮಹೇಶ್ ಗುರು ಅವರು ವಿಡಿಯೋ ಮಾಡಿ ದೂರಿದ್ದಾರೆ. ಯಶ್ ತಾಯಿಗೆ ಈ ವಿಚಾರ ತಲುಪಬೇಕು ಎಂಬುದು ಅವರ ಆಶಯ.

‘ನನ್ನ ಹೆಸರು ಮಹೇಶ್ ಗುರು. ನಾನು ರಂಗಭೂಮಿ ಕಲಾವಿದ. ಸಿನಿಮಾ, ಧಾರಾವಾಹಿಗಳಲ್ಲೂ ನಟಿಸಿದ್ದೇನೆ. ಆಗಸ್ಟ್ 1ರಂದು ‘ಕೊತ್ತಲವಾಡಿ’ ಸಿನಿಮಾ ರಿಲೀಸ್ ಆಯಿತು. ಯಶ್ ತಾಯಿ ಪುಷ್ಪ ಅವರು ಇದನ್ನು ನಿರ್ಮಾಣ ಮಾಡಿದ್ದರು. ಪೃಥ್ವಿ ಅಂಬರ್ ಸಹ ನಟನಾಗಿ ನಾನು ಸಿನಿಮಾದಲ್ಲಿ ಇದ್ದೆ. ಮೂರು ತಿಂಗಳಿಗೂ ಅಧಿಕ ಕಾಲ ಸಿನಿಮಾ ಶೂಟ್​ನಲ್ಲಿ ಭಾಗಿ ಆಗಿದ್ದೆ’ ಎಂದು ಅವರು ಹೇಳಿದರು.

‘ನಾನು ಆಯ್ಕೆ ಆಗಿದ್ದು, ನಿರ್ಮಾಣ ಸಂಸ್ಥೆ ಕಡೆಯಿಂದ ಅಲ್ಲ ನಿರ್ದೇಶಕ ಶ್ರೀರಾಜ್ ಕಡೆಯಿಂದ. ನಿರ್ದೇಶಕರು ಪ್ಯಾಕೇಜ್ ಮಾತನಾಡಿದರು. ಸಿನಿಮಾ ಆರಂಭಕ್ಕೂ ಮೊದಲು ಅಡ್ವಾನ್ಸ್ ಕೊಡಸ್ತೀನಿ ಅಂತ ಹೇಳಿದ್ದರು. ಆದರೆ ಕೊಡಿಸಿಲ್ಲ. ಸಿನಿಮಾ ಮುಗಿದರೂ ಹಣ ಬಂದಿಲ್ಲ ಅಂತ ಹೇಳುತ್ತಲೇ ಬಂದರು. ಡಬ್ಬಿಂಗ್ ಮುಗಿದರೂ ಹಣ ಕೊಡಲಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ
Image
ವಿಷ್ಣುವರ್ಧನ್-ರಜನಿಕಾಂತ್  ಒಟ್ಟಾಗಿ ನಟಿಸಿದ್ದ ಸಿನಿಮಾದ ದೃಶ್ಯ ನೆನಪಿದೆಯೇ?
Image
ವಿಷ್ಣು, ರಾಜ್, ಅಂಬಿ; ಒಂದೇ ವೇದಿಕೆ ಮೇಲೆ ಅಪೂರ್ವ ಸಂಗಮದ ಕ್ಷಣವಿದು
Image
ಸಿನಿಮಾ ಪ್ರಚಾರಕ್ಕಾಗಿ ಇಷ್ಟು ಕೀಳು ಮಟ್ಟಕ್ಕೆ ಇಳಿಬಾರದು; ಧನುಶ್​ಗೆ ಛೀಮಾರಿ
Image
‘ಸು ಫ್ರಮ್ ಸೋ’ ಬಳಿಕ ಮತ್ತೊಂದು ಹಿಟ್ ಚಿತ್ರ; ‘ಏಳುಮಲೆ’ ಕಲೆಕ್ಷನ್ ಎಷ್ಟು?

ಇದನ್ನೂ ಓದಿ: ಒಟಿಟಿಯಲ್ಲಿ ಬರಲು ರೆಡಿ ಆಯ್ತು ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’; ಎಲ್ಲಿ, ಯಾವಾಗ?

‘ಆ ಬಳಿಕ ಕರೆ ಮಾಡಿದ್ರೆ ಕಾಲ್ ಎತ್ತಲಿಲ್ಲ. ಟೀಸರ್, ಟ್ರೇಲರ್ ಈವೆಂಟ್ ಆದರೂ ನಮಗೆ ಆಹ್ವಾನವೇ ಕೊಡಲಿಲ್ಲ. ಈಗ ಸಿನಿಮಾ ಒಟಿಟಿಗೆ ಬಂದಿದೆ. ಆದರೂ ನಮಗೆ ಪೇಮೆಂಟ್ ಆಗಿಲ್ಲ. ನಿರ್ಮಾಪಕರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ವಿಡಿಯೋ ಮಾಡಿದ್ದೇನೆ. ಇದು ಪುಷ್ಪಾ ಅವರಿಗೂ ಗೊತ್ತಾಗಲಿ’ ಎಂದು ಮಹೇಶ್ ಗುರು ಹೇಳಿದ್ದಾರೆ. ಅನೇಕರು ಈ ವಿಡಿಯೋಗೆ ಯಶ್ ತಾಯಿಗೆ ತಲುಪೋವರೆಗೂ ಶೇರ್ ಮಾಡಿ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಿಂದ ಡಿಲೀಟ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:33 pm, Tue, 16 September 25

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್